ರೌಡಿಶೀಟರ್‌ ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ ಕೊನೆಗೂ ರದ್ದು

Date:

  • 40 ಪ್ರಕರಣಗಳನ್ನು ಹೊತ್ತಿರುವ ಮಣಿಕಂಠಗೆ ಬಿಜೆಪಿ ಟಿಕೆಟ್‌
  • ಪ್ರಧಾನಿ ಮೋದಿಯ ಮೇ 6ರ ಚಿತ್ತಾಪುರ ಪ್ರಚಾರ ರದ್ದಾಗಿದೆ

ಬಿಜೆಪಿಯ ಸ್ಟಾರ್‌ ಪ್ರಚಾರಕ ಪ್ರಧಾನಿ ಮೋದಿ ಅವರು ಚಿತ್ತಾಪುರದ ಅಭ್ಯರ್ಥಿ, ರೌಡಿಶೀಟರ್‌ ಮಣಿಕಂಠ ರಾಥೋಡ್‌ ಪರವಾಗಿ ಮಾಡಬೇಕಿದ್ದ ಪ್ರಚಾರ ರದ್ದಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಅವರನ್ನು ಮಣಿಸಲು ಬಿಜೆಪಿ ರೌಡಿಶೀಟರ್‌ನನ್ನು ಕಣಕ್ಕಿಳಿಸಿತ್ತು. ಬೆನ್ನಲ್ಲೇ ಸ್ವತಃ ಪ್ರಧಾನಿ ಮೋದಿ ರಾಥೋಡ್‌ ಪ್ರಚಾರಕ್ಕೆ ಸಮಯ ನಿಗದಿಯಾಗಿತ್ತು,

ಆದರೆ, ಮಣಿಕಂಠ ವಿರುದ್ಧದ ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಸಾಬೀತಾಗಿದ್ದು, ಮೋದಿ ಅವರ ಮೇ 6ರ ಚಿತ್ತಾಪುರ ಪ್ರಚಾರ ಕಾರ್ಯಕ್ರಮ ರದ್ದಾಗಿದೆ. ಈಗಾಗಲೇ ಫೈಟರ್ ರವಿ, ರೌಡಿ ಶೀಟರ್ ಮುದ್ದುಕೃಷ್ಣ ಮೋದಿ ಜೊತೆ ವೇದಿಕೆ ಹಂಚಿಕೊಂಡಿರುವುದರಿಂದ ಸಾಕಷ್ಟು ಮುಜುಗರಕ್ಕೀಡಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್​ ವಿರುದ್ಧ 40 ಅಪರಾಧ ಪ್ರಕರಣಗಳಿವೆ. ಈ ಬಗ್ಗೆ ಪ್ರತಿಪಕ್ಷಗಳು ಕಿಡಿಕಾರುತ್ತಲೇ ಇವೆ. ಇದೀಗ ಮಣಿಕಂಠನ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಇದರಿಂದ ಮೋದಿ ಚಿತ್ತಾಪುರದಲ್ಲಿ ಮಣಿಕಂಠ ರಾಠೋಡ್ ಪರ ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್​ 28 ರಂದು ಚಿತ್ತಾಪುರದಲ್ಲಿ ಮಣಿಕಂಠ ರಾಠೋಡ್​ ಪರ ರೋಡ್ ಶೋ ನಡೆಸಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಮಣಿಕಂಠ ರಾಥೋಡ್‌ ಪರ ಮತಯಾಚಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯದ್ದು ಡಬಲ್ ದೋಖಾ ಸರ್ಕಾರ : ಬಿ ಕೆ ಹರಿಪ್ರಸಾದ್

ಮಣಿಕಂಠಗೆ ಕೇವಲ 26 ವರ್ಷ. ಆದರೆ ಆತನ ವಿರುದ್ಧ ಕರ್ನಾಟಕದಲ್ಲಿ ಮಾತ್ರವಲ್ಲದೇ ನೆರೆ ರಾಜ್ಯಗಳಲ್ಲಿ ಸೇರಿದಂತೆ ಬರೋಬ್ಬರಿ 40 ಪ್ರಕರಣಗಳು ದಾಖಲಾಗಿವೆ.

ಪಡಿತರ ಅಕ್ಕಿ ಕಳ್ಳ ಸಾಗಣೆ, ಅಂಗನವಾಡಿ ಮಕ್ಕಳ ಹಾಲಿನ ಪುಡಿ ಕಳ್ಳ ಸಾಗಣೆ ಕೂಡ ಸೇರಿದೆ. ಎಸ್‌ಎಸ್‌ಎಲ್‌ಸಿ ಫೇಲ್ ಆಗಿರುವ ಈತ 29 ಕೋಟಿ ರೂ.ಗಳ ಆಸ್ತಿ ಒಡೆಯ. ಕೆಲವು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು, ಕೆಲವು ಪ್ರಕರಣಗಳಿಗೆ ಹೈಕೋರ್ಟ್ ತಡೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...

ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್...

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ...