ಎಷ್ಟೇ ಸುರಕ್ಷತೆ ಇರಲಿ, ನಮ್ಮ ಒಬ್ಬ ಶೂಟರ್ ಸಾಕು: ಉದ್ಯಮಿ ಮುಖೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ

Date:

Advertisements

ರಿಲಾಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಮುಖೇಶ್ ಅಂಬಾನಿಗೆ ಮೂರನೇ ಬಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದ್ದು, 400 ಕೋಟಿ ರೂಪಾಯಿ ನೀಡುವಂತೆ ಇ-ಮೇಲ್ ಸಂದೇಶ ಬಂದಿರುವುದಾಗಿ ಮುಂಬೈ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅಂಬಾನಿ ಕಂಪನಿಗೆ ಸೋಮವಾರ ಇ-ಮೇಲ್ ಬಂದಿದ್ದು, ಇದು ಕಳೆದ ನಾಲ್ಕು ದಿನಗಳಲ್ಲಿ ಅಂಬಾನಿಗೆ ಕಳುಹಿಸಲಾದ ಮೂರನೇ ಬೆದರಿಕೆ ಇ-ಮೇಲ್ ಸಂದೇಶ ಇದಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಕಳೆದ ಶುಕ್ರವಾರ ಅಪರಿಚಿತ ವ್ಯಕ್ತಿಯಿಂದ 20 ಕೋಟಿ ರೂ. ನೀಡಬೇಕು. ಇಲ್ಲದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಮೊದಲ ಇ-ಮೇಲ್ ಬಂದಿತ್ತು. ನಂತರ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಗಾಮ್‌ದೇವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

Advertisements

‘ಶನಿವಾರ ಕಂಪನಿಗೆ 200 ಕೋಟಿ ರೂಪಾಯಿ ಬೇಡಿಕೆಯ ಇ-ಮೇಲ್ ಬಂದಿದೆ. ಸೋಮವಾರ ಮೂರನೇ ಇ-ಮೇಲ್ ಬಂದಿದ್ದು, ಅದನ್ನು ಕಳುಹಿಸಿದವರು ತಮ್ಮ ಹಣದ ಬೇಡಿಕೆಯನ್ನು ದ್ವಿಗುಣಗೊಳಿಸಿದ್ದಾರೆ. ಅಲ್ಲದೇ, ಅಂಬಾನಿಯವರಿಗೆ ಎಷ್ಟೇ ಸುರಕ್ಷತೆ ಇದ್ದರೂ ನಮ್ಮ ಒಬ್ಬ ಸ್ನೈಪರ್(ಗುರಿ ಇಟ್ಟು ಶೂಟ್ ಮಾಡುವ ಶೂಟರ್) ಸಾಕು. ನಮ್ಮ ಇ-ಮೇಲ್ ಅನ್ನು ಪೊಲೀಸರಿಗೆ ಪತ್ತೆ ಹಚ್ಚುವುದಕ್ಕೂ ಸಾಧ್ಯವಿಲ್ಲ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಮುಂಬೈ ಪೊಲೀಸರು, ಅವರ ಅಪರಾಧ ವಿಭಾಗ ಮತ್ತು ಸೈಬರ್ ತಂಡಗಳು ಇ-ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿವೆ’ ಎಂದು ಅವರು ಹೇಳಿದರು.

ಕಳೆದ ವರ್ಷ ಮುಂಬೈ ಪೊಲೀಸರು ಬಿಹಾರದ ದರ್ಭಾಂಗ್‌ನಿಂದ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದರು. ಮುಂಬೈನ ಸರ್ ಎಚ್‌ ಎನ್ ರಿಲಾಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X