ರಾಯಚೂರು | ಹತ್ತಿ ಬೀಜೋತ್ಪಾದನೆ ರೈತರಿಗೆ ವಂಚನೆ; ಅಕ್ರಮ ಖಾಸಗಿ ಕಂಪನಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ

Date:

Advertisements

ರೈತರಿಗೆ ವಂಚನೆ ಮಾಡುತ್ತಿರುವ ಸದರಿ ಅನಧಿಕೃತ ಖಾಸಗಿ ಕಂಪನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ವತಿಯಿಂದ ಲಿಂಗಸುಗೂರು ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು .

ತಾಲ್ಲೂಕಿನ ಈಚಿನಾಳ, ಹಲ್ಕಾವಟಗಿ, ತೊಂಡಿಹಾಳ, ಸಜ್ಜಲಗುಡ್ಡ, ಕೋಮನೂರು ಹಾಗೂ ಗುರುಗುಂಟಾ ಹೋಬಳಿಯ ಹಲವಾರು ದೊಡ್ಡಿಗಳಲ್ಲಿ ನಾನಾ ಬಗೆಯ ಕಂಪನಿಗಳ ಹೆಸರು ಹೇಳಿಕೊಂಡು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಬೀಜ ಉತ್ಪಾದನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

100 ಹೆಕ್ಟರ್‌ಗೂ ಅಧಿಕ ಕೃಷಿ ಜಮೀನಿನಲ್ಲಿ ಅಂದಾಜು 200 ರಿಂದ 250 ರೈತರಿಗೆ ಹತ್ತಿ ಬೀಜೋತ್ಪದನೆಗಾಗಿ ಅಧಿಕಾರಿಗಳ ಗಮನಕ್ಕಿಲ್ಲದೇ ತಾಲೂಕಿನಲ್ಲಿ ರೈತರಿಗೆ ವಂಚನೆ ಮಾಡಿ ಬೀಜಗಳನ್ನು ಹಂಚಿಕೆ ಮಾಡಿರುತ್ತಾರೆ ಇದರ ಬಗ್ಗೆ ವಿಚಾರಿಸಿದರೆ ರೈತರಿಗೆ ಬೀಜ ಗೊಬ್ಬರ ಹಾಗೂ ಬೆಳೆಗೆ ಬೇಕಾದ ಖರ್ಚು ವೆಚ್ಚಗಳನ್ನು ಕಂಪನಿಯ ವತಿಯಿಂದ ಕೊಡಲಾಗುತ್ತದೆ ಅಲ್ಲದೇ ಆ ಬೀಜಗಳನ್ನು ಕಂಪನಿಯಿಂದ ಖರೀದಿಸಲಾಗುವುದೆಂದು ಮೌಖಿಕವಾಗಿ ಹೇಳಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಈ ಬಗ್ಗೆ ಯಾವುದೇ ಒಪ್ಪಂದ ಕರಾರು ಪತ್ರವನ್ನು ಮಾಡಿಕೊಂಡಿರುವುದಿಲ್ಲ ಎಂದು ಆರೋಪಿಸಿದರು.

ಬೆಳೆ ಈಗಾಗಲೇ ಕಟಾವಿಗೆ ಬಂದಿದ್ದು ಕಂಪನಿಯವರು ಕೇವಲ 2 ಕ್ವಿಂಟಲ್ ಖರೀದಿ ಮಾಡುತ್ತೇವೆ ಅದರ ಖರ್ಚು ವೆಚ್ಚ ಕಂಪನಿಯವರು ಕೊಡುವುದಿಲ್ಲ ಎನ್ನುತ್ತಿದ್ದಾರೆ. ಇದರಿಂದ ನಂಬಿದ ರೈತರಲ್ಲಿ ಆತಂಕ ಮನೆ ಮಾಡಿದೆ. ಸುಳ್ಳು ಭರವಸೆ ನೀಡಿದ ಅನಧಿಕೃತ ಖಾಸಗಿ ಕಂಪನಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವೇಶ್ಯಾವಾಟಿಕೆ ಹೋಟೆಲ್ ಮೇಲೆ ದಾಳಿ ; ನಾಲ್ವರ ಬಂಧನ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಿವಪುತ್ರಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಆನಂದ ಕುಮಾ‌ರ್, ತಾಲ್ಲೂಕಧ್ಯಕ್ಷ ದುರ್ಗಾಪ್ರಸಾದ, ಹನಮನಗೌಡ ಸೇರಿದಂತೆ ಹಲವರು ಇದ್ದರು .

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸುವಂತೆ ರೈತ ಸಂಘ ಒತ್ತಾಯ

ರೈತರು ಜಮೀನಿಗೆ ಬರಲು 70-80 ವರ್ಷಗಳಿಂದ ಬಳಸುತ್ತಿದ್ದ ದಾರಿಗೆ ಖಾಸಗಿ ಮತ್ತು...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X