ರಾಯಚೂರು | ಅನ್ನಭಾಗ್ಯ ಸಿಗದೆ ಪರದಾಟ : ವೃದ್ಧೆಯರ ಹಸಿವು ನೀಗಿಸುತ್ತಿದೆ ಶಾಲೆಯ ಬಿಸಿಯೂಟ

Date:

Advertisements

ಕಳೆದ ಇಪ್ಪತ್ತು ವರ್ಷಗಳಿಂದ ಇವರಿಗೆ ರೇಷನ್ ಕಾರ್ಡ್ ಇಲ್ಲ. ಸರ್ಕಾರಿ ಸೌಲಭ್ಯಗಳಿಂದ ವಂಚಿತರಾದ ಇವರಿಗೆ ಶಾಲೆಯ ಬಿಸಿಯೂಟ ಹಸಿವು ನೀಗಿಸುತ್ತದೆ. ಹೌದು, ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಚನ್ನಳ್ಳಿ ಗ್ರಾಮದ ವೃದ್ಧರಾದ ಬಾಗಮ್ಮ (70) ಹಾಗೂ ಗುಡದಮ್ಮ (60) ಅವರ ಬದುಕು ದುಸ್ತರವಾಗಿದೆ.

ಬಾಗಮ್ಮ ಹಾಗೂ ಗುಡದಮ್ಮ ಇಬ್ಬರು ವಿಧವೆಯರು, ನೋಡಿಕೊಳ್ಳಲು ಮಕ್ಕಳಿಲ್ಲ. ಕೂಲಿ ನಾಲಿ ಮಾಡಿ ಬದುಕು ಸಾಗಿಸಲು ಮೈಯಲ್ಲಿ ಶಕ್ತಿಯಿಲ್ಲ. ಹೀಗಾಗಿ ಎಲ್ಲ ಸೌಕರ್ಯಗಳಿಂದ ವಂಚಿತರಾಗಿ ದಿನ ದೂಡುತ್ತಿದ್ದಾರೆ.

“ಪಡಿತರ ಚೀಟಿಗಾಗಿ ಅನೇಕ ಬಾರಿ ಅರ್ಜಿ ಹಾಕಿದ್ದೇವೆ, ಅಧಿಕಾರಿಗಳ ಬಾಗಿಲು ತಟ್ಟಿದ್ದೇವೆ. ಭರವಸೆಯ ಮಾತು ಹೇಳಿದರೆ, ಹೊರತು ಪರಿಹಾರ ಸಿಕ್ಕಿಲ್ಲ. ರೇಷನ್ ಕಾರ್ಡ್ ಇಲ್ಲದಿರುವುದರಿಂದ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳು ಸಿಗುತ್ತಿಲ್ಲ” ಎಂದು ನೋವು ತೋಡಿಕೊಂಡರು.

1000192026 1

ನಮ್ಮ ಗ್ರಾಮದ ಬಾಗಮ್ಮ, ಗುಡದಮ್ಮ ಅವರಂತೆ ಇನ್ನೂ ಅನೇಕ ಬಡ ಕುಟುಂಬಗಳಿಗೆ ರೇಷನ್ ಕಾರ್ಡ್ ಇಲ್ಲ. ಪಡಿತರ ಕಾರ್ಡ್ ಗಾಗಿ ಅಲೆದಾಡಿ ಸಾಕಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಡವರಿಗೆ ಸರ್ಕಾರಿ ಸೌಲಭ್ಯ ದಕ್ಕುತ್ತಿಲ್ಲ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

1000192029

ರೇಷನ್‌ ಕಾರ್ಡ್‌ ಸೇರಿದಂತೆ ಇತರೆ ಸೌಲಭ್ಯಗಳಿಂದ ವಂಚಿತರಾದ ಬಡಕುಟುಂಬದ ವೃದ್ಧರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಸರ್ಕಾರವು ವಿಶೇಷ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ಹಿರಿಯರು ಕಾಗದ ಪತ್ರಗಳ ಗೊಂದಲದಲ್ಲಿ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಂಡು ಯೋಜನೆ ಮುಟ್ಟಿಸಬೇಕುʼ ಎಂದು ಸಾಮಾಜಿಕ ಕಾರ್ಯಕರ್ತರ ಅಭಿಪ್ರಾಯ.

ಈ ಸುದ್ದಿ ಓದಿದ್ದೀರಾ? ದಲಿತ ಹೋರಾಟಗಾರ, ‘ಬುದ್ಧಘೋಷ’ ದೇವೇಂದ್ರ ಹೆಗ್ಗಡೆ ನಿಧನ: ಒಡನಾಡಿಗಳ ಕಂಬನಿ

ರಾಜ್ಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿರೂಪಮಾ ಮಾತನಾಡಿ, ʼವೃದ್ಧರು ಶಾಲೆಯ ಬಿಸಿಯೂಟದ ಮೇಲೆ ಬದುಕು ಸಾಗಿಸುತ್ತಿರುವುದು ತುಂಬಾ ದುಃಖಕರ ಸಂಗತಿ. ಹಲವಾರು ಬಾರಿ ಅರ್ಜಿ ಹಾಕಿದರೂ ಕಾರ್ಡ್ ದೊರೆಯದೇ ಇರುವುದು ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತದೆ. ಕೂಡಲೇ ವೃದ್ಧರಿಗೆ ಸೌಲಭ್ಯ ಕಲ್ಪಿಸಬೇಕುʼ ಎಂದು ಆಗ್ರಹಿಸಿದರು.

1000192027 1
mdrafi
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ | ಮಹಿಳಾ ಬೈಕ್ ರೈಡ್ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ

 ತುಮಕೂರು ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ಬೈಕ್ ರೈಡ್‌ಗೆ ಗೃಹ...

ರಾಯಚೂರು | ಧಾರಾಕಾರ ಮಳೆಗೆ ಗೋಡೆ ಕುಸಿತ – ವೃದ್ದೆ ಸಾವು, ಇಬ್ಬರು ಗಾಯ

ಸುರಿದ ಧಾರಾಕಾರ ಮಳೆಗೆ ಮೇಲ್ಚಾವಣೆ ಗೋಡೆ ಕುಸಿದು ವೃದ್ದೆ ಮೃತಪಟ್ಟಿದ್ದು, ಇಬ್ಬರು...

ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡಿದ್ದ ಹೈದರಾಬಾದ್ ಪ್ರವಾಸಿಗರಿಗೆ...

ಕಾವೇರಿ ಆರತಿ | ರೈತರಿಂದ ಭಾರಿ ವಿರೋಧ, ಆದರೂ ಅದ್ದೂರಿ ಸಮಾರಂಭ ಮಾಡಿದ ಡಿ ಕೆ ಶಿವಕುಮಾರ್

ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌) ಬೃಂದಾವನ ಉದ್ಯಾನದ ಆವರಣದಲ್ಲಿ ಇದೇ ಮೊದಲ...

Download Eedina App Android / iOS

X