ಲೋಕಾಯುಕ್ತ ಪೊಲೀಸರ ದಾಳಿ: ಲಂಚದ ಹಣವನ್ನು ನುಂಗಿ ನೀರು ಕುಡಿದ ಅಧಿಕಾರಿ!

Date:

Advertisements
  • ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದ ಘಟನೆ
  • ಪ್ರಕರಣ ದಾಖಲಾಗಿದೆ ಎಂದ ಲೋಕಾಯುಕ್ತ ಪೊಲೀಸರು

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಸಿಕ್ಕಿಬೀಳುವ ಭಯದಲ್ಲಿ ಲಂಚವಾಗಿ ಪಡೆದಿದ್ದ ಹಣವನ್ನು ಬಾಯಿಗೆ ಹಾಕಿ, ನುಂಗಿದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಕಟ್ನಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಯೊಬ್ಬ ವ್ಯಕ್ತಿಯೋರ್ವನಿಂದ ಲಂಚವಾಗಿ ಪಡೆದಿದ್ದ 5 ಸಾವಿರ ರೂ. ಹಣವನ್ನು ಪೊಲೀಸರ ದಾಳಿಯಾಗುತ್ತಿದ್ದಂತೆಯೇ ಹಣವನ್ನು ನುಂಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವೇಳೆ ಹಣವನ್ನು ನುಂಗುತ್ತಿರುವ ದೃಶ್ಯವನ್ನು ಲೋಕಾಯುಕ್ತ ಅಧಿಕಾರಿಗಳು ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

Advertisements

ಈ ಘಟನೆ ನಿನ್ನೆ(ಜು.24)ರಂದು ನಡೆದಿದ್ದು, ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಕಂದಾಯ ಇಲಾಖೆಯ ಅಧಿಕಾರಿಯನ್ನು ಪಟ್ವಾರಿ ಗಜೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂ–ಮೈ ಎಕ್ಸ್‌ಪ್ರೆಸ್-ವೇನಲ್ಲಿ ಲಘು ವಾಹನ ಸಂಚಾರ ನಿರ್ಬಂಧ

ಈ ಬಗ್ಗೆ ಮಾಹಿತಿ ನೀಡಿರುವ ಲೋಕಾಯುಕ್ತ ಸ್ಪೆಷಲ್​ ಪೊಲೀಸ್​ ಎಸ್ಟಾಬ್ಲಿಶ್​ಮೆಂಟ್‌ನ (ಎಸ್‌ಪಿಇ) ಪೊಲೀಸ್ ವರಿಷ್ಠಾಧಿಕಾರಿ ಸಂಜಯ್​ ಸಾಹು, “ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಗಜೇಂದ್ರ ಸಿಂಗ್ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿ ನಮಗೆ ದೂರು ನೀಡಿದ್ದರು. ಹಣವನ್ನು ತೆಗೆದುಕೊಂಡ ನಂತರ ಸ್ಥಳದಲ್ಲಿದ್ದ ಲೋಕಾಯುಕ್ತ ಅಧಿಕಾರಿಗಳನ್ನು ಗಮನಿಸಿ, ರೆಡ್ ಹ್ಯಾಂಡಾಗಿ ಸಿಕ್ಕಿ ಬೀಳುವುದು ಗೊತ್ತಾಗಿದೆ. ಭಯದಿಂದ ಬಳಿಕ ಲಂಚವಾಗಿ ಪಡೆದಿದ್ದ ಐದು ಸಾವಿರ ಮೊತ್ತದಷ್ಟಿದ್ದ ನೋಟುಗಳನ್ನು ಬಾಯಿಗೆ ಹಾಕಿ, ನೀರು ಕುಡಿದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಪರೀಕ್ಷಿಸಿದ ವೈದ್ಯರು, ಆತನ ಆರೋಗ್ಯದಲ್ಲಿ ಏನೂ ಏರುಪೇರಾಗಿಲ್ಲ, ಚೆನ್ನಾಗಿದ್ದಾರೆ ಎಂದು ತಿಳಿಸಿದರು. ಸದ್ಯ ಗಜೇಂದ್ರ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ” ಎಂದು ಅಧಿಕಾರಿ ಹೇಳಿದರು.

ಈ ಘಟನೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಹಲವು ನೆಟ್ಟಿಗರು, ಈವರೆಗೆ ಅಧಿಕಾರಿಗಳು ಹಣವನ್ನು ನುಂಗಿ, ನೀರು ಕುಡಿದಿದ್ದಾರೆ ಎಂದಷ್ಟೇ ಕೇಳಿದ್ದೆವು. ಈತ ಅದನ್ನು ಎಲ್ಲರಿಗೂ ನಿಜವಾಗಿಯೂ ಸಾಕ್ಷಿ ನೀಡಿದ. ಇಂತದ್ದೂ ಕೂಡ ನಮ್ಮ ದೇಶದಲ್ಲಿ ನಡೆಯುತ್ತದೆಯಲ್ವಾ!” ಎಂದು ಆಶ್ಚರ್ಯ ವ್ಯಕ್ತಪಡಿಸಿ, ಟ್ರೋಲ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X