ಗುಜರಾತ್ ಹತ್ಯಾಕಾಂಡದ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ ದೋಷಿಗಳಾಗಿದ್ದ 11 ಮಂದಿಗೆ ಶಿಕ್ಷೆ ತಗ್ಗಿಸಿದ್ದ ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಜ.8, ಸೋಮವಾರ) ಮಹತ್ವದ ತೀರ್ಪು ಪ್ರಕಟಿಸಲಿದೆ.
ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಹಾಗೂ ಕರ್ನಾಟಕದ ಬಿ ವಿ ನಾಗರತ್ನ ಅವರಿದ್ದ ಪೀಠ ಅಕ್ಟೋಬರ್ 12ರಂದು ಕಾಯ್ದಿರಿಸಿತ್ತು.
ಇಪ್ಪತ್ತೆರಡು ವರ್ಷಗಳ ಹಿಂದೆ ನಡೆದಿದ್ದ ಗುಜರಾತ್ ಗಲಭೆ ವೇಳೆ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ್ದ 11 ಅಪರಾಧಿಗಳನ್ನು ಅವಧಿಪೂರ್ವದಲ್ಲೇ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿದ್ದ ಪ್ರಕರಣ ಇದಾಗಿದೆ.
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನಾಳೆ (ಸೋಮವಾರ) ತೀರ್ಪು ನೀಡಲಿದೆ ಸುಪ್ರೀಂ ಕೋರ್ಟ್.#BilkisBano #SupremeCourt pic.twitter.com/ziG20A0U9g
— ಬಾರ್ & ಬೆಂಚ್ – Kannada Bar & Bench (@Kbarandbench) January 7, 2024
ಕ್ಷಮಾದಾನದ ಅರ್ಜಿಯನ್ನು ಅಪರಾಧ ನಡೆದ ರಾಜ್ಯದ ನೀತಿಗೆ ಅನುಗುಣವಾಗಿ ಪರಿಗಣಿಸಬೇಕೆ ವಿನಾ ವಿಚಾರಣೆ ನಡೆದ ಸ್ಥಳದಲ್ಲಿನ ನೀತಿಗೆ ಅನುಗುಣವಾಗಿ ಅಲ್ಲ ಎಂದು ಮೇ 2022ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಂತೆ ಗುಜರಾತ್ ಸರ್ಕಾರ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿತ್ತು.

ತೀರ್ಪಿಗೆ ಅನುಗುಣವಾಗಿ ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆದಿದ್ದರೂ ಅಪರಾಧಿಗಳನ್ನು ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ತನ್ನ ಕ್ಷಮಾದಾನ ನೀತಿಯನ್ನು ಅನ್ವಯಿಸಿತ್ತು. ಅದರಂತೆ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಯ ವೇಳೆ ಇವರೆಲ್ಲರನ್ನೂ ಆರತಿ ಎತ್ತಿ, ಸ್ವಾಗತಿಸಲಾಗಿತ್ತು. ಇದು ದೇಶಾದ್ಯಂತ ವ್ಯಾಪಕ ಟೀಕೆಗೂ ಕಾರಣವಾಗಿತ್ತು.
ಇದನ್ನು ಓದಿದ್ದೀರಾ? ಕೇಂದ್ರ ಸರ್ಕಾರ ಕರ್ನಾಟಕವನ್ನು ಪ್ರತಿಯೊಂದರಲ್ಲೂ ಸವತಿ ಮಗನಂತೆ ನೋಡುತ್ತಿದೆ: ಸಚಿವ ಗುಂಡೂರಾವ್
ಜೈಲಿನಲ್ಲಿ 14 ವರ್ಷಗಳನ್ನು ಪೂರ್ಣಗೊಳಿಸಿದ ಕಾರಣ ಮತ್ತು ವಯಸ್ಸು, ಅಪರಾಧದ ಸ್ವರೂಪ, ಜೈಲಿನಲ್ಲಿನ ನಡವಳಿಕೆ ಮುಂತಾದ ಅಂಶಗಳಿಂದಾಗಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜ್ ಕುಮಾರ್ ಹೇಳಿದ್ದರು.
ಗುಜರಾತ್ ಸರ್ಕಾರದ ನಿರ್ಧಾರವನ್ನು ಬಾನೊ ಸೇರಿದಂತೆ ಹಲವು ಅರ್ಜಿದಾರರು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದರ ತೀರ್ಪನ್ನು ಸುಪ್ರೀಂ ಕೋರ್ಟ್ ನಾಳೆ(ಜ.8) ತೀರ್ಪು ಪ್ರಕಟಿಸಲಿದೆ.