ಚಂಡೀಗಢ ಮೇಯರ್ ಚುನಾವಣೆ: ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Date:

ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಮತಪತ್ರಗಳನ್ನು ತಿರುಚಿರುವುದರ ಬಗ್ಗೆ ಚುನಾವಣಾಧಿಕಾರಿ ಅನಿಲ್ ಮಾಸಿಹ್ ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಚಂಡೀಗಢ ಮೇಯರ್ ಚುನಾವಣೆಯ ಫಲಿತಾಂಶದ ಬಗ್ಗೆ ಹೊಸದಾಗಿ ಚುನಾವಣೆಗೆ ಆದೇಶಿಸುವ ಬದಲು ಪ್ರಸ್ತುತ ಬ್ಯಾಲೆಟ್ ಪೇಪರ್‌ಗಳ ಆಧಾರದ ಮೇಲೆ ಘೋಷಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದ್ದು, ಮತ ಪತ್ರಗಳನ್ನು ನಾಳೆ ಬೆಳಗ್ಗೆ 10.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ಇಂದು ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ಚುನಾವಣಾಧಿಕಾರಿ ಅನಿಲ್ ಮಾಸೀಹ್ ಅವರಿಗೆ ನೋಟಿಸ್ ನೀಡಿತ್ತು. ನೋಟಿಸ್ ಹಿನ್ನೆಲೆಯಲ್ಲಿ ಹಾಜರಾಗಿದ್ದ ಅವರು, 8 ಬ್ಯಾಲೆಟ್ ಪೇಪರ್‌ಗಳ ಮೇಲೆ ಮಾರ್ಕ್‌ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಿಟರ್ನಿಂಗ್‌ ಅಧಿಕಾರಿ ಅನಿಲ್ ಮಾಸೀಹ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಮತ ಪತ್ರಗಳನ್ನು ನಾಳೆ ಬೆಳಿಗ್ಗೆ, 10.30 ಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ಮತಪತ್ರಗಳನ್ನು ನ್ಯಾಯಾಲಯಕ್ಕೆ ತರಲು ನ್ಯಾಯಾಂಗ ಅಧಿಕಾರಿಯನ್ನು ನಾಮನಿರ್ದೇಶನ ಮಾಡಲು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರನ್ನು ಕೇಳುವುದಾಗಿ ಹೇಳಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಚಂಡೀಗಢ ಮೇಯರ್ ಚುನಾವಣೆಯ ಅಕ್ರಮದ ವಿಚಾರಣೆ ನಡೆಯುತ್ತಿರುವಾಗಲೇ ಕುದುರೆ ವ್ಯಾಪಾರ ನಡೆಯುತ್ತಿದೆ. ಎಎಪಿಯ ಮೂವರು ಕೌನ್ಸಿಲರ್‌ಗಳಾದ ನೇಹಾ, ಪೂನಂ ಹಾಗೂ ಗುರುಚರಣ್ ಕಾಲಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅನಿಲ್ ಮಾಸಿಹ್ ಅವರು ಮಾಡಿರುವ ಗುರುತುಗಳನ್ನು ಕಡೆಗಣಿಸಿ ಈಗಾಗಲೇ ಚಲಾವಣೆಯಾದ ಮತಗಳನ್ನು ಎಣಿಕೆ ಮಾಡುವಂತೆ ನಿರ್ದೇಶಿಸುವುದಾಗಿ ನ್ಯಾಯಾಲಯ ಹೇಳಿದೆ.

ಚುನಾವಣಾ ಅಧಿಕಾರಿಯಾಗಿ ನಾಮನಿರ್ದೇಶನ ಮಾಡಲು ಚಂಡೀಗಢ ಆಡಳಿತದ ಡೆಪ್ಯುಟಿ ಕಮಿಷನ‌ರ್ ಅವರನ್ನು ಕೇಳುವುದಾಗಿ ನ್ಯಾಯಾಲಯ ತಿಳಿಸಿದ್ದು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ನಾಮ ನಿರ್ದೇಶನಗೊಂಡ ನ್ಯಾಯಾಂಗ ಅಧಿಕಾರಿಯಿಂದ ಸಂಪೂರ್ಣ ಎಣಿಕೆ ಪ್ರಕ್ರಿಯೆಯನ್ನು ನ್ಯಾಯಾಲಯದ  ಮೇಲ್ವಿಚಾರಣೆ ಮೂಲಕ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮಹಾನಗರ ಪಾಲಿಕೆ ಆಯುಕ್ತರಾಗಿ ಮತ್ತೊಮ್ಮೆ ಮಾಯಣ್ಣ ಗೌಡ

ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕವಾಗಿದ್ದರೆ. ಇವರು ಈ ಹಿಂದೆ...

ಬೆಳಗಾವಿ | ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ : ಸಚಿವ ರಾಮಲಿಂಗ ರೆಡ್ಡಿ

"ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ...

ಉಡುಪಿ | ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳ್ಳಲಿ

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗದಿಂದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ...

ಚಿಕ್ಕಮಗಳೂರು l ಕೋಡಿಗಲ್ ರಮೇಶ್ ಮೇಲೆ ಹಲ್ಲೆ ಖಂಡಿಸಿ ಅಪರಾಧಿಗಳನ್ನು ಬಂಧಿಸಿವಂತೆ ದಸಂಸ ಒತ್ತಾಯ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ದಸಂಸ ವತಿಯಿಂದ, ಚಿಂತಾಮಣಿ ತಾಲೂಕಿನ ಕೋಡಿಗಲ್...

Download Eedina App Android / iOS

X