ತುಮಕೂರು ದಸರಾ | ಮಹಿಳಾ ಬೈಕ್ ರೈಡ್ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ

Date:

Advertisements

 ತುಮಕೂರು ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ಬೈಕ್ ರೈಡ್‌ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಶನಿವಾರ ನಗರದ ಬಟವಾಡಿ ಬಳಿ ಚಾಲನೆ ನೀಡಿದರು. 

     ಬೈಕ್ ರೈಡಿನ ಮುಂದಿನ ಸಾಲಿನಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಕಣ್ಣಿಗೆ ಗಾಗಲ್, ತಲೆಗೆ ಹೆಲ್ಮೆಟ್ ಧರಿಸಿ ರಾಯಲ್ ಎನ್‌ಫೀಲ್ಡ್ ಭಾರಿ ಬೈಕನ್ನು ಚಲಾಯಿಸಿದ್ದು ನೋಡುಗರಿಗೆ ಅಚ್ಚರಿ ಮೂಡಿಸಿತು.  ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಅವರೂ ಸಹ ರಾಯಲ್ ಎನ್‌ಫೀಲ್ಡ್ ಚಾಲನೆ ಮಾಡುವ ಮೂಲಕ ಜಿಲ್ಲಾಧಿಕಾರಿಗಳಿಗೆ ಸಾತ್ ನೀಡಿದರು. ಸುಮಾರು 300 ದ್ವಿಚಕ್ರ ವಾಹನಗಳ ಮಹಿಳಾ ಸವಾರರು ಈ ರೈಡ್‌ನಲ್ಲಿ ಭಾಗವಹಿಸಿದ್ದರು. 

1002114937

     ಮಹಿಳೆಯರು ಮನೆಯಲ್ಲಿ “ಸೌಟು ಹಿಡಿದು ಅಡುಗೆ ಮಾಡಲು ಸೈ-ಹ್ಯಾಂಡಲ್ ಹಿಡಿದು ಬೈಕ್ ಓಡಿಸಲು ಸೈ” ಎಂದು ಹೊಂಡಾ ಆಕ್ಟಿವಾ, ಜುಪಿಟರ್, ಡಿಯೋ, ಆ್ಯಕ್ಸೆಸ್, ಫ್ಯಾಸಿನೋ ಬೈಕ್ ಸವಾರಿ ಮಾಡುತ್ತಾ ಬಟವಾಡಿ ವೃತ್ತದಿಂದ ಎಸ್‌ಐಟಿ ಬ್ಯಾಕ್ ಗೇಟ್-ಶೆಟ್ಟಿಹಳ್ಳಿ ಅಂಡರ್ ಪಾಸ್-ಉಪ್ಪಾರಹಳ್ಳಿ ಅಂಡರ್ ಪಾಸ್-ಭದ್ರಮ್ಮ ವೃತ್ತ-ಬಿ.ಜಿ.ಎಸ್. ವೃತ್ತ-ಕಾಲ್ಟೆಕ್ಸ್ ವೃತ್ತ-ಕುಣಿಗಲ್ ವೃತ್ತ-ಡಾ: ಗಂಗಾಧರಯ್ಯ ವೃತ್ತ-ಗುಬ್ಬಿಗೇಟ್-ಕಾಲ್ಟೆಕ್ಸ್ ವೃತ್ತ-ಮಂಡಿಪೇಟೆ ವೃತ್ತ, -ಬಿ.ಜಿ.ಎಸ್.ವೃತ್ತ-ಎಂ.ಜಿ.ರಸ್ತೆ-ಗುಂಚಿವೃತ್ತ-ಡೀಸಿ ಕಚೇರಿ ವೃತ್ತ-ಕೋತಿತೋಪು ವೃತ್ತ-ತಮ್ಮಯ್ಯ ಆಸ್ಪತ್ರೆ ವೃತ್ತ-ಎಸ್.ಎಸ್.ವೃತ್ತ-ಭದ್ರಮ್ಮ ವೃತ್ತ ಮರ‍್ಗದಲ್ಲಿ ರ‍್ಕಾರಿ ಪದವಿ ಪರ‍್ವ ಕಾಲೇಜು ಮೈದಾನದವರೆಗೂ ಸಾಗಿದರು.

Advertisements
1002114949 1

    ವಿಕಲಚೇತನ ಮಹಿಳೆಯರಾದ ಲಲಿತಾ, ನಾಗರತ್ನ, ಪವಿತ್ರ, ವೀಣಾ, ನಿವೇದಿತಾ, ಉಮತ್ ಖಾನಂ ಬೈಕ್ ರೈಡ್‌ನಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. 

ಸಚಿವರಿಂದ ಗಜಪಡೆಗೆ ಪೂಜೆ :

     ವಿಜಯದಶಮಿಯಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಶ್ರೀರಾಮ, ನೊಣವಿನಕೆರೆಯ ಲಕ್ಷ್ಮೀ ಹಾಗೂ ಕರಿಬಸವೇಶ್ವರ ಮಠದ ಲಕ್ಷ್ಮೀ ಸೇರಿದಂತೆ 3 ಆನೆಗಳಿಗೆ ನಗರದ ಬಿ.ಜಿ.ಎಸ್. ವೃತ್ತದ ಬಳಿ ಸಚಿವರು ಪೂಜೆ ಸಲ್ಲಿಸಿದರು.

1002114988

     ನಂತರ ಗಜಪಡೆಯು ಬಿ.ಜಿ.ಎಸ್. ವೃತ್ತದಿಂದ ರ‍್ಚ್ ರ‍್ಕಲ್ ಮರ‍್ಗವಾಗಿ ಮತ್ತೆ ಬಿ.ಜಿ.ಎಸ್. ವೃತ್ತದವರೆಗೂ ಮೆರವಣಿಗೆಯ ತಾಲೀಮು ನಡೆಸಿತು.

    ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಸಚಿವರ ವಿಶೇಷ ಕರ‍್ತವ್ಯಾಧಿಕಾರಿ ನಾಗಣ್ಣ, ಮತ್ತಿತರ ಅಧಿಕಾರಿ, ಸರ‍್ವಜನಿಕರು ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಧಾರಾಕಾರ ಮಳೆಗೆ ಗೋಡೆ ಕುಸಿತ – ವೃದ್ದೆ ಸಾವು, ಇಬ್ಬರು ಗಾಯ

ಸುರಿದ ಧಾರಾಕಾರ ಮಳೆಗೆ ಮೇಲ್ಚಾವಣೆ ಗೋಡೆ ಕುಸಿದು ವೃದ್ದೆ ಮೃತಪಟ್ಟಿದ್ದು, ಇಬ್ಬರು...

ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡಿದ್ದ ಹೈದರಾಬಾದ್ ಪ್ರವಾಸಿಗರಿಗೆ...

ಕಾವೇರಿ ಆರತಿ | ರೈತರಿಂದ ಭಾರಿ ವಿರೋಧ, ಆದರೂ ಅದ್ದೂರಿ ಸಮಾರಂಭ ಮಾಡಿದ ಡಿ ಕೆ ಶಿವಕುಮಾರ್

ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌) ಬೃಂದಾವನ ಉದ್ಯಾನದ ಆವರಣದಲ್ಲಿ ಇದೇ ಮೊದಲ...

ರಾಯಚೂರು | ಬಸ್ ಪಲ್ಟಿ : ಹಲವರಿಗೆ ಗಾಯ

ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ...

Download Eedina App Android / iOS

X