ಅಪಘಾತಕ್ಕೀಡಾದ ಕೋಳಿ ಸಾಗಾಟದ ವಾಹನ: ಚಾಲಕನ ರಕ್ಷಣೆ ಮಾಡುವ ಬದಲು ಕೋಳಿ ಕದ್ದೊಯ್ದ ಗ್ರಾಮಸ್ಥರು!

Date:

Advertisements

ಅತಿಯಾಗಿ ಮಂಜು ಕವಿದಿದ್ದ ಕಾರಣ ಬೆಳ್ಳಂಬೆಳಗ್ಗೆ ಅಪಘಾತಕ್ಕೀಡಾಗಿದ್ದ ಕೋಳಿ ಸಾಗಾಟದ ವಾಹನದಲ್ಲಿ ಪಿಕಪ್ ಚಾಲಕ ಹಾಗೂ ಕ್ಲೀನರ್‌ ತೀವ್ರವಾಗಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ಕೂಡ ಅವರನ್ನು ರಕ್ಷಣೆ ಮಾಡುವ ಬದಲು ಗ್ರಾಮಸ್ಥರು, ಕೋಳಿ ಕದ್ದೊಯ್ದು ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ದಿಲ್ಲಿ- ಆಗ್ರಾ ಹೆದ್ದಾರಿಯ ಜೇವರ್ ಪೊಲೀಸ್ ಠಾಣಾ ವ್ಯಾಪ್ತಿಯ ದಯನಾಥಪುರ ಪ್ರದೇಶದ ಎಕ್ಸ್‌ಪ್ರೆಸ್‌ವೇಯ ಆಗ್ರಾದಿಂದ ನೋಯ್ಡಾ ಲೇನ್‌ನಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕೋಳಿ ತುಂಬಿದ್ದ ಪಿಕಪ್ ವಾಹನವು ಆಗ್ರಾದಿಂದ ಕಸಾಗಂಜ್‌ಗೆ ತೆರಳುತ್ತಿತ್ತು. ಈ ವೇಳೆ ಮಂಜಿನ ಕಾರಣದಿಂದಾಗಿ ಟ್ರಕ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದೆ.

ಈ ವೇಳೆ ಗಾಯಾಳು ಆಗಿದ್ದ ವಾಹನ ಚಾಲಕ ಸುನಿಲ್ ಕುಮಾರ್ ಅವರನ್ನು ಆರೈಕೆ ಮಾಡುವ ಬದಲು ಜನ ಪಿಕಪ್‌ನಲ್ಲಿದ್ದ ಕೋಳಿ ಕದಿಯುವುದಲ್ಲೇ ವ್ಯಸ್ತರಾಗಿದ್ದರು. ಆರಂಭದಲ್ಲಿ ಜನರನ್ನು ತಡೆಯಲು ಚಾಲಕ ಯತ್ನಿಸಿದರಾದರೂ, ಜನರು ಗುಂಪು ಗುಂಪಾಗಿ ಬಂದು ಚೀಲದಲ್ಲಿ ತುಂಬಿಸಲು ಯತ್ನಿಸಿದ್ದರಿಂದ ನನಗೆ ತಡೆಯಲು ಸಾಧ್ಯವಾಗಿಲ್ಲ ಎಂದು ಚಾಲಕ ತಿಳಿಸಿದ್ದಾನೆ.

Advertisements

ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಕೋಳಿಗಳು ಕಳ್ಳತನ ಆಗಿವೆ ಎಂದು ತಿಳಿದು ಬಂದಿದೆ. ಇದರಿಂದ ಕೋಳಿ ಪೌಲ್ಟ್ರಿ ಮಾಲೀಕರಿಗೆ ಅಪಾರ ನಷ್ಟ ಸಂಭವಿಸಿದೆ. ಜನರು ಕೋಳಿಗಳನ್ನು ಕದಿಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೆಟ್ಟಿಗರು ಗ್ರಾಮಸ್ಥರ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಪೊಲೀಸ್, ಆಂಬ್ಯುಲೆನ್ಸ್ ಸೇರಿದಂತೆ ರಕ್ಷಣಾ ಸಿಬ್ಬಂದಿಗೆ ತುರ್ತು ಕರೆಯಾದರೂ ಮಾಡಬಹುದಿತ್ತು. ಅದನ್ನು ಬಿಟ್ಟು ಕೋಳಿಗಳ ಕಳ್ಳತನದಲ್ಲೇ ಜನರು ಬ್ಯುಝಿಯಾಗಿರುವುದನ್ನು ನೋಡಿದರೆ ಕನಿಷ್ಠ ಮಾನವೀಯತೆ ಕೂಡ ಸತ್ತು ಹೋಗಿದೆ ಎಂದೇ ಭಾಸವಾಗಿತ್ತಿದೆ. ಯೋಗಿ ಆಡಳಿತವಿರುವ ರಾಜ್ಯದಲ್ಲಿ ಇಂಥದ್ದೆಲ್ಲ ಸಾಮಾನ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಆದರೆ ಸಮೀಪದ ಗ್ರಾಮಗಳ ಜನರು ಮಾತ್ರ ಕೋಳಿ ಕದಿಯುವುದರಲ್ಲೇ ಬ್ಯುಸಿಯಾಗಿದ್ದರು. ಲಾರಿಯ ಚಾಲಕ ತೀವ್ರವಾಗಿ ಗಾಯಗೊಂಡು ಕೂಗುತ್ತಿದ್ದರೂ ಕೂಡಾ ಗ್ರಾಮಸ್ಥರು ಅ ಕಡೆ ಗಮನ ಹರಿಸಲಿಲ್ಲ ಎಂದು ಪೊಲೀಸರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮದ್ಯ, ದಿನಸಿ ಸೇರಿದಂತೆ ಯಾವುದೇ ವಸ್ತು ತುಂಬಿದ್ದ ಲಾರಿಗಳು ಉರುಳಿ ಬಿದ್ದಾಗಲೂ ಹೆದ್ದಾರಿ ಪಕ್ಕದ ಜನತೆ ಇದೇ ರೀತಿ ವರ್ತಿಸಿದ್ದು ಈ ಹಿಂದೆ ವರದಿಯಾಗಿದ್ದವು.

ಉತ್ತರ ಪ್ರದೇಶ ಮತ್ತು ದೆಹಲಿ ಸೇರಿದಂತೆ ದೇಶದ ಉತ್ತರ ಭಾರತದ ಭಾಗದಲ್ಲಿ ತಾಪಮಾನ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಜಿನಿಂದಾಗಿ ರಸ್ತೆ ಕಾಣುವುದು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ವಿಮಾನ ಮತ್ತು ರೈಲು ವೇಳಾಪಟ್ಟಿಗಳ ವಿಳಂಬಕ್ಕೂ ಇದು ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X