‘ನಾವೇನು ಉಗ್ರರಲ್ಲ, ಪ್ರಧಾನಿ ಭೇಟಿಗೆ ಅವಕಾಶ ಕೊಡಿ’: ಇ-20 ಪೆಟ್ರೋಲ್ ವಿರುದ್ಧ ಸಿಡಿದೆದ್ದ ಕೇಜ್ರಿವಾಲ್

Date:

ಇ-20 ಪೆಟ್ರೋಲ್ (ಎಥೆನಾಲ್ ಮಿಶ್ರಿತ ಪೆಟ್ರೋಲ್) ಬಳಕೆಯನ್ನು ವಿರೋಧಿಸಿ, ಸಾರ್ವಜನಿಕರ ಸಹಿಯುಳ್ಳ ಲಕ್ಷಾಂತರ ಅರ್ಜಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ತಮ್ಮ ಬೆಂಬಲಿಗರೊಂದಿಗೆ ತೆರಳುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಮಾರ್ಗಮಧ್ಯೆ ತಡೆದಿದ್ದಾರೆ.

- Advertisement -

ಪ್ರಧಾನಿ ನಿವಾಸದತ್ತ ಸುಮಾರು 100 ಜನರೊಂದಿಗೆ ಮೆರವಣಿಗೆಯಲ್ಲಿ ಹೊರಟಿದ್ದ ಕೇಜ್ರಿವಾಲ್ ಅವರನ್ನು ಪೊಲೀಸರು ತಡೆದಾಗ, “ನಾವೇನು ಉಗ್ರರಲ್ಲ, ಇ-20 ಇಂಧನ ವಿಚಾರವಾಗಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಬೇಕಿದೆ. ದಯವಿಟ್ಟು ಅವರಿಗೆ ಮಾಹಿತಿ ನೀಡಿ,” ಎಂದು ಪೊಲೀಸರಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಕುರಿತು ಮಾತನಾಡಿದ ಎಎಪಿ ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್, “ಜನರು ಲಕ್ಷಾಂತರ ಅರ್ಜಿಗಳೊಂದಿಗೆ ಇಲ್ಲಿಗೆ ಬಂದಿದ್ದಾರೆ. ನಾವು ಪ್ರಧಾನಿಯವರಿಗೆ ಈ ಅರ್ಜಿಗಳನ್ನು ನೀಡಿ, ಎಥೆನಾಲ್ ಕುರಿತು ಮುಕ್ತ ಚರ್ಚೆ ನಡೆಸಲು ಬಯಸಿದ್ದೇವೆ. ಈ ವಿಚಾರವಾಗಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಗೆ ಪತ್ರವನ್ನೂ ಬರೆದಿದ್ದರು, ಹಲವು ಬಾರಿ ಪತ್ರಿಕಾಗೋಷ್ಠಿಗಳಲ್ಲೂ ಒತ್ತಾಯಿಸಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ನಾವೇ ಖುದ್ದಾಗಿ ಭೇಟಿಯಾಗಲು ಬಂದಿದ್ದೇವೆ,” ಎಂದರು. ಆದರೆ, ಈ ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಕೇಂದ್ರ ಸರ್ಕಾರದ ಶೇ. 20ರಷ್ಟು ಎಥೆನಾಲ್ ಮಿಶ್ರಣದ ನೀತಿಯು ಹಸಿರು ಇಂಧನ ಗುರಿಗಳಿಗಿಂತ ಹೆಚ್ಚಾಗಿ ಅಂತಾರಾಷ್ಟ್ರೀಯ ವ್ಯಾಪಾರ ಒಪ್ಪಂದಗಳ ಒತ್ತಡಕ್ಕೆ ಮಣಿದು ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ. ಭಾರತೀಯ ವಾಹನ ಸವಾರರು ದುಬಾರಿ ಬೆಲೆ ಕೊಟ್ಟು ಪೆಟ್ರೋಲ್ ಖರೀದಿಸುತ್ತಿದ್ದಾರೆ. ಆದರೆ, ಎಥೆನಾಲ್ ಮಿಶ್ರಣದಿಂದ ವಾಹನದ ಮೈಲೇಜ್ ಕಡಿಮೆಯಾಗುವುದರ ಜೊತೆಗೆ ಇಂಜಿನ್ ಬೇಗ ಹಾಳಾಗುತ್ತಿದೆ. ಇಷ್ಟೆಲ್ಲಾ ಗುಪ್ತ ನಷ್ಟಗಳಿದ್ದರೂ, ಸಾರ್ವಜನಿಕರಿಗೆ ಒಂದು ರೂಪಾಯಿ ರಿಯಾಯಿತಿಯನ್ನೂ ನೀಡದೆ ವಂಚಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಕಳೆದ ತಿಂಗಳು ಪ್ರಧಾನಿಗೆ ಪತ್ರ ಬರೆದಿದ್ದ ಕೇಜ್ರಿವಾಲ್, ಪೆಟ್ರೋಲ್ ಬಂಕ್‌ಗಳಲ್ಲಿ ‘ಶುದ್ಧ ಪೆಟ್ರೋಲ್’ ಹಾಗೂ ‘ಇ-20 ಪೆಟ್ರೋಲ್’ – ಎರಡೂ ಆಯ್ಕೆಗಳನ್ನು ಗ್ರಾಹಕರಿಗೆ ಒದಗಿಸುವಂತೆ ಮತ್ತು ಎಥೆನಾಲ್ ಮಿಶ್ರಿತ ಪೆಟ್ರೋಲ್ ಬೆಲೆಯನ್ನು ಇಳಿಕೆ ಮಾಡುವಂತೆ ಒತ್ತಾಯಿಸಿದ್ದರು. “ಪತ್ರಕ್ಕೆ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ನಾವೇ ಖುದ್ದಾಗಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದೇವೆ. 2 ಲಕ್ಷಕ್ಕೂ ಹೆಚ್ಚು ಮಂದಿ ನಮ್ಮ ಅಭಿಯಾನದಲ್ಲಿ ಸಹಿ ಮಾಡಿದ್ದಾರೆ ಹಾಗೂ ಇತ್ತೀಚೆಗೆ ಆಯೋಜಿಸಿದ್ದ ‘ಎಥೆನಾಲ್ ಟೌನ್‌ಹಾಲ್’ ಕೂಡ ಭಾರಿ ಯಶಸ್ವಿಯಾಗಿದೆ” ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...