ಬಿಜೆಪಿ ಬೆದರಿಕೆಗೆ ಹೆದರುವುದಿಲ್ಲ, ಮಣ್ಣಿನಲ್ಲಿ ಹೂತು ಹಾಕಿದರೂ ಎದ್ದು ಬರುತ್ತೇವೆ : ಖರ್ಗೆ ಕಿಡಿ

Date:

  • ಬೆಳಗಾವಿಯ ಯುವ ಕ್ರಾಂತಿ ಸಮಾವೇಶದಲ್ಲಿ ಮೋದಿ ವಿರುದ್ಧ ಗುಡುಗಿದ ಖರ್ಗೆ
  • ನೀವು ನಮ್ಮನ್ನು ಮಣ್ಣಿನಲ್ಲಿ ಹೂತು ಹಾಕಿದರೂ ನಾವು ಮತ್ತೆ ಹುಟ್ಟಿಬರುತ್ತೇವೆ

ಪ್ರಧಾನಿ ಮೋದಿ ಅವರು ಬೆಳಗಾವಿಗೆ ಬಂದಾಗ ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ಹಾಗಾದರೆ ನಿಮ್ಮ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಮೋದಿ ಅವರೇ? ಅದಾನಿ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ಕಡತದಿಂದ ತೆಗೆದು ಹಾಕುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.

- Advertisement -

ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ಸೋಮವಾರ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ದೇಶದಲ್ಲಿ ಜಾತಿವಾದ ಇದೆ, ಜಾತಿ ತಾರತಮ್ಯವಿದೆ ಎಂದು ಹೇಳಿದರೆ ಅದೇ ತಪ್ಪಾ? ಬಿಜೆಪಿಯವರು ಬರೀ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಇಷ್ಟು ಭ್ರಷ್ಟಾಚಾರ ಎಂದೂ ಇರಲಿಲ್ಲ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ. ಇದನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಹೇಳಿದ್ದಾರೆ. ಇವರು ಮೋದಿ ಅವರಿಗೆ ದೂರು ನೀಡಿದ್ದಾರೆ. ಗುತ್ತಿಗೆದಾರರು ದೂರು ನೀಡಿದಾಗ ಇದರ ತನಿಖೆಗೆ ಅಮಿತ್ ಶಾ ಅವರು ಯಾಕೆ ಆದೇಶ ಮಾಡಲಿಲ್ಲ” ಎಂದು ಪ್ರಶ್ನಿಸಿದರು.

“ಕಾಶ್ಮೀರದಲ್ಲಿ 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ದೆಹಲಿ ಪೊಲೀಸರು ಸಾಕ್ಷಿ ಕೇಳಿಕೊಂಡು ರಾಹುಲ್ ಗಾಂಧಿ ಅವರ ಮನೆ ಮುಂದೆ ಹೋಗಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡುತ್ತಿದ್ದರೂ ಇಲ್ಲಿ ತನಿಖೆ ಮಾಡುತ್ತಿಲ್ಲ. ರಾಜ್ಯದಲ್ಲಿ 100 ರೂ. ಕಾಮಗಾರಿ ಇದ್ದರೆ 200 ರೂ. ಅಂದಾಜು ನಿಗದಿ ಮಾಡಿ ರಾಜ್ಯದವರು 40%, ಕೇಂದ್ರದವರು 40% ಕಮಿಷನ್ ಪಡೆಯುತ್ತಿದ್ದಾರೆ” ಎಂದು ದೂರಿದರು.

“ಸಿಬಿಐ ನಮ್ಮನ್ನು ಮಣಿಸುವುದಿಲ್ಲ. ಇವರ ಬೆದರಿಕೆಗೆ ರಾಹುಲ್ ಗಾಂಧಿ ಅವರು ಎಂದಿಗೂ ಹೆದರುವುದಿಲ್ಲ. ಇವರು ಎಷ್ಟು ದಿನ ತೊಂದರೆ ನೀಡುತ್ತಾರೋ ನೀಡಲಿ. ನಾವು ಎಲ್ಲದಕ್ಕೂ ಸಿದ್ಧವಿದ್ದೇವೆ. ಮೋದಿ ಅವರೇ ನೀವು ನಮ್ಮನ್ನು ಮಣ್ಣಿನಲ್ಲಿ ಹೂತು ಹಾಕಲು ಪ್ರಯತ್ನಿಸಿ. ನಾವು ಬೀಜವಾಗಿದ್ದು, ಪದೇ ಪದೆ ಹುಟ್ಟಿಬರುತ್ತೇವೆ” ಎಂದು ಗುಡುಗಿದರು.

ಇಡೀ ದೇಶಕ್ಕೆ ಈ ಚುನಾವಣೆ ಸಂದೇಶ ನೀಡಲಿದೆ

“ಈ ಚುನಾವಣೆ ಕರ್ನಾಟಕ ರಾಜ್ಯಕ್ಕೆ ಬಹಳ ಮಹತ್ವವಾದ ಚುನಾವಣೆ. ಇಡೀ ದೇಶಕ್ಕೆ ಈ ಚುನಾವಣೆ ಸಂದೇಶ ನೀಡಲಿದೆ. ಹೀಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಿದೆ. ನಿಮ್ಮೆಲ್ಲರ ಆಶೀರ್ವಾದ, ಸಹಕಾರ ನಮ್ಮ ಮೇಲೆ ಸದಾ ಇರಬೇಕು. ನಾನು ಎಐಸಿಸಿ ಅದ್ಯಕ್ಷನಾದ ನಂತರ ಬೆಳಗಾವಿ ಭೂಮಿಗೆ ಬಂದಿದ್ದೇನೆ. ಈ ಬೆಳಗಾವಿ ಕಾಂಗ್ರೆಸ್ ಪಕ್ಷಕ್ಕೆ ಪವಿತ್ರವಾದ ಭೂಮಿ. ಮಹಾತ್ಮ ಗಾಂಧಿ ಅವರು 100 ವರ್ಷಗಳ ಹಿಂದೆ 39ನೇ ಕಾಂಗ್ರೆಸ್ ಅಧಿವೇಶನ ನಡೆಸಿ ಇದೇ ಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿದ್ದರು. ಈಗ ನಾನು ಅದೇ ಸ್ಥಾನಕ್ಕೆ ಆಯ್ಕೆಯಾಗಿದ್ದೇನೆ. ಇದಕ್ಕಾಗಿ ನಿಮ್ಮೆಲ್ಲರಿಗೂ ವಂದನೆ ತಿಳಿಸುವೆ” ಎಂದರು.

“ಕಾಂಗ್ರೆಸ್ ಪಕ್ಷ ಬೆಳಗಾವಿಯ 18 ಕ್ಷೇತ್ರಗಳಲ್ಲಿ 15-16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಿದ್ದರು. ಈ ಬಾರಿ ನಮ್ಮ ನಾಯಕರ ಒಗ್ಗಟ್ಟು ನೋಡಿದರೆ 18ಕ್ಕೆ 18 ಕ್ಷೇತ್ರದಲ್ಲೂ ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಪಕ್ಷ ಗೃಹಲಕ್ಷಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಘೋಷಣೆ ನೀಡಲಾಗಿದೆ. ದೇಶದಲ್ಲಿ 50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ಅದನ್ನು ತುಂಬುತ್ತಿಲ್ಲ. ಇವರು ಹೇಳಿದ 2 ಕೋಟಿ ಉದ್ಯೋಗ ಎಲ್ಲಿ ಹೋದವು ಗೊತ್ತಿಲ್ಲ. ರಾಜ್ಯದಲ್ಲಿ 2.50 ಲಕ್ಷ ಉದ್ಯೋಗ ಖಾಲಿ ಇದ್ದು, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂದೂವರೆ ವರ್ಷಗಳಲ್ಲಿ ಎಲ್ಲ ಹುದ್ದೆ ತುಂಬುತ್ತೇವೆ” ಎಂದು ಭರವಸೆ ನೀಡಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....