ರೈಲಲ್ಲಿ ನಿದ್ರಾವಸ್ಥೆಯಲ್ಲಿಯೇ ಸಾವನ್ನಪ್ಪಿದ ವ್ಯಕ್ತಿ: 13 ಗಂಟೆ ಜೊತೆಗೇ ಪ್ರಯಾಣಿಸಿದ ಕುಟುಂಬ!

Date:

Advertisements

ವಿಚಿತ್ರ ಮತ್ತು ದುರಂತ ಘಟನೆಯೊಂದು ಗುಜರಾತ್‌ನ ಅಹಮದಾಬಾದ್‌ನಿಂದ ವರದಿಯಾಗಿದೆ. ವ್ಯಕ್ತಿಯೋರ್ವ ಕುಟುಂಬದೊಂದಿಗೆ ಪ್ರಯಾಣಿಸುತ್ತಿರುವಾಗ ನಿದ್ರಾವಸ್ಥೆಯಲ್ಲಿರುವಾಗಲೇ ನಿಧನ ಹೊಂದಿದ್ದು, ಇದರ ಬಗ್ಗೆ ಮಾಹಿತಿಯೇ ಇಲ್ಲದ ಪತ್ನಿ ಹಾಗೂ ಕುಟುಂಬಸ್ಥರು ಸುಮಾರು 13 ಗಂಟೆಗಳ ಕಾಲ ಜೊತೆಗೇ ಪ್ರಯಾಣಿಸಿದ ಘಟನೆ ವರದಿಯಾಗಿದೆ.

ಗುಜರಾತ್‌ನ ರಾಜಧಾನಿ ಅಹ್ಮದಾಬಾದ್‌ನಿಂದ ತೆರಳುತ್ತಿದ್ದ ಸಬರಮತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದೆ. ದಂಪತಿಗಳು ತಮ್ಮ ಮಕ್ಕಳೊಂದಿಗೆ ಸೂರತ್‌ನಿಂದ ಅಯೋಧ್ಯೆಗೆ ರೈಲು ಹತ್ತಿದ ನಂತರ ಈ ಘಟನೆ ನಡೆದಿದೆ ಎಂದು ಫ್ರೀ ಪ್ರೆಸ್ ಜರ್ನಲ್ (Free Press Journal) ವೆಬ್‌ಸೈಟ್ ವರದಿ ಮಾಡಿದೆ.

ಗಂಡ ಮಲಗಿದ್ದಲ್ಲಿ ಮೃತಪಟ್ಟಿದ್ದಾರೆ. ಆದರೆ ಪಕ್ಕದಲ್ಲೇ ಇದ್ದ ಪತ್ನಿ ಪತಿ ಮಲಗಿದ್ದಾರೆಂದು ತಿಳಿದು ಪ್ರಯಾಣ ಮುಂದುವರಿಸಿದ್ದರು. 13 ಗಂಟೆಗಳಿಂದಲೂ ಹೆಚ್ಚು ಮಲಗಿದ್ದರೂ ಕೂಡ, ಒಮ್ಮೆಯೂ ಎದ್ದಿರಲಿಲ್ಲ. ಇದರಿಂದ ಅನುಮಾನಗೊಂಡು ಎಬ್ಬಿಸಲು ಹೊರಟಾಗ ಮೃತಪಟ್ಟಿರುವುದು ತಿಳಿದುಬಂದಿದೆ.

Advertisements

ಮೃತಪಟ್ಟ ವ್ಯಕ್ತಿ ಕುಟುಂಬ ಸಮೇತ ಸೂರತ್‌ನಿಂದ ಅಯೋಧ್ಯೆಗೆ ಪ್ರಯಾಣಿಸುತ್ತಿದ್ದರು. ಸೂರತ್‌ನಲ್ಲಿ ರೈಲು ಹತ್ತಿದ ವ್ಯಕ್ತಿಯೊಂದಿಗೆ ಆತನ ಪತ್ನಿ, ಮಕ್ಕಳು ಮತ್ತು ಸಹಚರರು ಇದ್ದರು. ಆದರೆ, ರೈಲು ಹತ್ತಿದ ಸ್ವಲ್ಪ ಸಮಯದಲ್ಲೇ ಆ ವ್ಯಕ್ತಿ ತನ್ನ ಹೆಂಡತಿಯನ್ನು ಪಕ್ಕದಲ್ಲಿ ಕೂರಿಸಿಕೊಂಡು ಮಲಗಿದ್ದರು.

ಹಲವಾರು ಗಂಟೆಗಳ ನಂತರ, ವ್ಯಕ್ತಿ ಎಚ್ಚರಗೊಳ್ಳದಿದ್ದಾಗ, ಪ್ರಯಾಣಿಕರ ಕುಟುಂಬ ಮತ್ತು ಇತರರು ಅವನನ್ನು ಎಬ್ಬಿಸಲು ಪ್ರಯತ್ನಿಸಿದರು. ಆದರೆ, ಪ್ರತಿಕ್ರಿಯಿಸಲಿಲ್ಲ. ಅಲ್ಲದೇ, ದೇಹದ ಉಷ್ಣಾಂಶ ಕೂಡ ತಣ್ಣಗಾಗಿತ್ತು. ಎಬ್ಬಿಸಲು ಎಷ್ಟೇ ಪ್ರಯತ್ನಪಟ್ಟರು ಕೂಡ ವಿಫಲವಾದಾಗ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಕೆಪಿಎಸ್​ಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಒಂದು ಬಾರಿ ವಯೋಮಿತಿ ಸಡಿಲಿಕೆಗೆ ಅಸ್ತು

ಮಲಗಿದ್ದಲ್ಲೇ ಹೃದಯಾಘಾತ ಆಗಿರಬಹುದು ಎಂದು ಶಂಕಿಸಲಾಗಿದೆ. ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟ ನಂತರ ರೈಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿ, ಶವವನ್ನು ಝಾನ್ಸಿ ಜಂಕ್ಷನ್‌ನಲ್ಲಿ ಇಳಿಸಲಾಯಿತು. ಈ ವೇಳೆ ಝಾನ್ಸಿಯ ವೈದ್ಯರು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು ಎಂದು ವರದಿಯಾಗಿದೆ. ಈ ಘಟನೆಯು ರೈಲಿನಲ್ಲಿದ್ದ ಪ್ರಯಾಣಿಕರು ಹಾಗೂ ಜೊತೆಗೇ ಪ್ರಯಾಣಿಸುತ್ತಿದ್ದ ಕುಟುಂಬದವರನ್ನು ಆಘಾತಕ್ಕೊಳಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X