ಚಾಮರಾಜನಗರ | ನಾಲ್ವರ ಮೇಲೆ ಕಾಡಾನೆ ದಾಳಿ; ಇಬ್ಬರು ಬಾಲಕರ ಸ್ಥಿತಿ ಗಂಭೀರ

Date:

  • ದೇವಸ್ಥಾನದ ಬಳಿ ಮಲಗಿದ್ದ ವೇಳೆ ದಾಳಿ ಮಾಡಿರುವ ಕಾಡಾನೆ
  • ಜಾತ್ರೆ ಹಿನ್ನೆಲೆ ದೇವಸ್ಥಾನದ ಮುಂದಿನ ಚಪ್ಪರದಲ್ಲಿ ಮಲಗಿದ್ದರು

ದೇವಾಲಯದ ಬಳಿ ಮಲಗಿದ್ದ ನಾಲ್ವರು ಬಾಲಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಬಾಲಕರು ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಳ್ಯ ಸಮೀಪದ ಎತ್ತೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಣಿಕಂಠ (17), ಅರಸ (12), ಸ್ವಾಮಿ (11) ಹಾಗೂ ಅಭಿ (12) ಗಾಯಗೊಂಡಿದ್ದು, ಎಲ್ಲರನ್ನೂ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಎತ್ತೆಗೌಡನದೊಡ್ಡಿ ಗ್ರಾಮದಲ್ಲಿ ಜಡೇಸ್ವಾಮಿ ದೇವಾಲಯದ ಜಾತ್ರೆ ನಡೆಯಲಿದೆ. ಈ ಹಿನ್ನೆಲೆ ದೇವಸ್ಥಾನದ ಮುಂದೆ ಚಪ್ಪರ ಹಾಕಿ ಗ್ರಾಮಸ್ಥರು ಜಾತ್ರೆಗೆ ಸಿದ್ಧತೆ ನಡೆಸುತ್ತಿದ್ದರು. ದೇವಾಲಯದ ಕೆಲಸ‌ ಮುಗಿಸಿ 20ಕ್ಕೂ ಹೆಚ್ಚು ಗ್ರಾಮಸ್ಥರ ಜೊತೆಗೆ ಈ ಬಾಲಕರು ದೇವಸ್ಥಾನದ ಬಳಿ ಮಲಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?  ಮೈಸೂರು | ನೆರವಿಗೆ ಧಾವಿಸುವಂತೆ ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯದ ಜನ ಮನವಿ

ದಿಢೀರನೇ ಕಾಡಾನೆಯೊಂದು ದಾಳಿ ಮಾಡಿದ್ದು, ದೇಗುಲಕ್ಕೆ ಹಾಕಿದ್ದ ಚಪ್ಪರ ದ್ವಂಸ ಮಾಡಿ ಮಲಗಿದ್ದವರ ಮೇಲೆ ಎರಗಿದೆ. ಈ ವೇಳೆ ನಾಲ್ವರು ಬಾಲಕರು ಗಾಯಗೊಂಡಿದ್ದಾರೆ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...