ಯಮುನಾ ನದಿಯ ಅಬ್ಬರಕ್ಕೆ ತತ್ತರಿಸಿದ ದೆಹಲಿ; ಸಿಎಂ ಮನೆಯ ಹತ್ತಿರ ತಲುಪಿದ ಪ್ರವಾಹದ ನೀರು

Date:

  • ಅಗತ್ಯ ಸೇವೆ ಹೊರತುಪಡಿಸಿ ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ‘ವರ್ಕ್ ಫ್ರಂ ಹೋಮ್’
  • ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿರುವ ಯಮುನಾ; 208.62 ಮೀಟರ್ ಮಟ್ಟಕ್ಕೆ ನೀರು

ದೆಹಲಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಯಮುನಾ ನದಿಯ ನೀರಿನ ಮಟ್ಟವು ಮತ್ತಷ್ಟು ಏರಿಕೆಯಾಗಿದೆ.

- Advertisement -

ಇದರಿಂದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಬಳಿಯೂ ಪ್ರವಾಹದ ನೀರು ಹರಿಯುತ್ತಿದ್ದು, ತಗ್ಗು ಪ್ರದೇಶದಲ್ಲಿರುವ ಮನೆ ಮತ್ತು ರಸ್ತೆಗಳು ಜಲಾವೃತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನಿಂದ ಯಮುನಾ ನದಿಗೆ ನೀರನ್ನು ಹರಿಬಿಡುತ್ತಿರುವುದರಿಂದ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನೀರಿನ ಮಟ್ಟ 208.62 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟವು ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ.

ಸಾರ್ವಜನಿಕ ಸಾರಿಗೆಯ ಮೇಲೆ ಪರಿಣಾಮ ಬೀರಿದ್ದು, ಹಲವೆಡೆ ವಿಪರೀತ ಟ್ರಾಫಿಕ್ ಜಾಮ್‌ಗೆ ಸಿಲುಕಿ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ, ಹಲವಾರು ಗಣ್ಯರ ಸಮಾಧಿ ಇದ್ದ ಸ್ಥಳ ಕೂಡ ನೀರಿನಿಂದ ಆವೃತವಾಗಿದೆ.

ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ ಬಳಿಕ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳು ಭಾನುವಾರದವರೆಗೆ ಮುಚ್ಚಲ್ಪಡುತ್ತವೆ. ಅಗತ್ಯ ಸೇವೆಗಳನ್ನು ಒದಗಿಸುವ ಹೊರತುಪಡಿಸಿ ಉಳಿದ ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ‘ವರ್ಕ್ ಫ್ರಂ ಹೋಮ್’ ಮಾಡುವಂತೆ ಸೂಚನೆ ನೀಡಲಾಗಿದೆ. ಮೂರು ನೀರು ಸಂಸ್ಕರಣಾ ಘಟಕಗಳು ಮುಚ್ಚಿರುವುದರಿಂದ ಈಗ ಶೇ.50ರಷ್ಟು ಮಾತ್ರ ನೀರಿನ ಶೇಖರಣೆ ಲಭ್ಯವಿದೆ. ಒಂದು ಅಥವಾ ಎರಡು ದಿನಗಳವರೆಗೆ ನೀರಿನ ಸಮಸ್ಯೆ ಎದುರಿಸಬೇಕಾಗಬಹುದು. ಈಗಾಗಲೇ ಆರಂಭಿಸಿರುವ ಶಿಬಿರಗಳಲ್ಲಿ ಶೌಚಾಲಯ ಮತ್ತು ಸ್ನಾನಗೃಹಗಳ ಸಮಸ್ಯೆಗಳಿವೆ. ಆದ್ದರಿಂದ ಶಿಬಿರಗಳನ್ನು ಶಾಲೆಗಳಿಗೆ ಸ್ಥಳಾಂತರಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...