ಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಸುಳಿವು ನೀಡಿದವರಿಗೆ 5.5 ಕೋಟಿ ರೂ. ಬಹುಮಾನ: ಆಸ್ಟ್ರೇಲಿಯಾ ಘೋಷಣೆ

Date:

ಸುಮಾರು ಒಂದು ದಶಕದ ಹಿಂದೆ ನಡೆದ ಬೆಂಗಳೂರಿನ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ಪ್ರಕರಣ ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1 ಮಿಲಿಯನ್ ಡಾಲರ್ ಬಹುಮಾನ(5,57,31,700 ರೂ.) ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ.

- Advertisement -

ಪ್ರಭಾ ಅರುಣ್ ಕುಮಾರ್ ಅವರನ್ನು 2015ರ ಮಾರ್ಚ್ 7ರಂದು ಸಿಡ್ನಿಯ ಪಶ್ಚಿಮದಲ್ಲಿನ ಪರಮಟ್ಟ ಪಾರ್ಕ್‌ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ 41 ವರ್ಷದ ಪ್ರಭಾ ಅವರ ಕುತ್ತಿಗೆ ಇರಿದು ಹತ್ಯೆ ಮಾಡಲಾಗಿತ್ತು. ಘಟನೆ ನಡೆದು 10 ವರ್ಷಗಳಾದರೂ ಈವರೆಗೂ ಹಂತಕರ ಸುಳಿವು ದೊರಕಿಲ್ಲ. ಇದು ಆಸ್ಟ್ರೇಲಿಯಾ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ತನಿಖೆ ಸಂದರ್ಭದಲ್ಲಿ ಪೊಲೀಸ್ ಪಡೆಯ ಪತ್ತೇದಾರರು ಅನೇಕ ಹಂತದ ವಿಚಾರಣೆಗಳನ್ನು ನಡೆಸಿದ್ದಾರೆ. ಮಾಹಿತಿಗಾಗಿ ಸಾರ್ವಜನಿಕರ ನೆರವಿಗಾಗಿ ಹಲವು ಬಾರಿ ಮನವಿಗಳನ್ನು ಮಾಡಲಾಗಿದೆ. ಆದರೂ ಈ ಪ್ರಕರಣ ಬಗೆಹರಿಯದೆ ಉಳಿದಿದೆ” ಎಂದು ಎನ್‌ಎಸ್‌ಡಬ್ಲ್ಯೂ ಪೊಲೀಸರು ಹೇಳಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಬೆಂಗಳೂರಿನ ಮೈಂಡ್ ಟ್ರೀ ಕಂಪೆನಿಯ ಉದ್ಯೋಗಿಯಾಗಿದ್ದ ಪ್ರಭಾ ಅವರು ಕರ್ತವ್ಯದ ನಿಯೋಜನೆ ಮೇರೆಗೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಬೆಂಗಳೂರಿನಲ್ಲಿದ್ದ ಪತಿ ಅರುಣ್ ಕುಮಾರ್ ಜತೆ ಫೋನ್‌ನಲ್ಲಿ ಮಾತನಾಡುತ್ತಾ ತೆರಳುತ್ತಿದ್ದ ಅವರಿಗೆ ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂಬ ಅನುಮಾನ ಮೂಡಿತ್ತು. ಅದನ್ನು ಪತಿ ಬಳಿ ಹೇಳಿದ್ದರು. ಅದೇ ವೇಳೆ ಅವರ ಮೇಲೆ ದಾಳಿ ನಡೆದಿತ್ತು. ಅವರು ವಾಸವಿದ್ದ ಸ್ಥಳದಿಂದ ಕೇವಲ 300 ಮೀಟರ್ ದೂರದಲ್ಲಿ ಈ ಹತ್ಯೆ ನಡೆದಿತ್ತು.

ಪತ್ನಿ ಶವವನ್ನು ವಾಪಸ್ ತರುವ ಸಲುವಾಗಿ ಅರುಣ್ ಕುಮಾರ್ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ ಜತೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಹತ್ಯೆ ಮಾಡಿದ ವ್ಯಕ್ತಿ ಪ್ರಭಾ ಅವರಿಗೆ ಅಪರಿಚಿತನಾದರೂ, ಆಸ್ಟ್ರೇಲಿಯಾ ಅಥವಾ ಭಾರತದಲ್ಲಿರುವ ಅವರ ಪರಿಚಿತರೇ ಈ ಕೊಲೆ ಮಾಡಿಸಿರಬಹುದು ಎನ್ನುವುದು ಪೊಲೀಸರ ಅನುಮಾನವಾಗಿದೆ. ತನಿಖೆ ವೇಳೆ ಅನೇಕ ಪುರಾವೆಗಳು ದೊರಕಿದರೂ, ಹಂತಕರ ಬಂಧನಕ್ಕೆ ಅಗತ್ಯವಾದ ಪ್ರಬಲ ಸಾಕ್ಷ್ಯ ಅಥವಾ ಸುಳಿವು ಈವರೆಗೂ ಲಭ್ಯವಾಗಿಲ್ಲ.

ಪ್ರಭಾ ಅವರು ಮನೆ ಸಮೀಪದ ಉದ್ಯಾನದಲ್ಲಿ ನಡೆದುಕೊಂಡು ಬರುವುದನ್ನು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಸೆರೆಹಿಡಿದಿದ್ದವು. ಆದರೆ ಅವರನ್ನು ಹಿಂಬಾಲಿಸುತ್ತಿದ್ದವರು ಯಾರು ಎನ್ನುವುದು ಈವರೆಗೂ ಸ್ಪಷ್ಟವಾಗಿಲ್ಲ. ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದ್ದರೂ ಪ್ರಯೋಜನವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ)...