ಇಂಗ್ಲೆಂಡ್‌ನಲ್ಲಿ 12 ಮಂದಿ ಭಾರತೀಯರ ಬಂಧನ

Date:

Advertisements

ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ 11 ಮಂದಿ ಪುರುಷರು ಮತ್ತು ಓರ್ವ ಮಹಿಳೆಯನ್ನು ಇಂಗ್ಲೆಂಡ್‌ನ ‘ಇಮಿಗ್ರೇಷನ್’ (ವಲಸೆ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಭಾರತೀಯ ಪ್ರಜೆಗಳು ಎಂದು ಹೇಳಲಾಗಿದೆ. ಅವರೆಲ್ಲರೂ ಹಾಸಿಗೆ ಮತ್ತು ಕೇಕ್‌ ತಯಾರಿಕಾ ಫ್ಯಾಕ್ಟರಿಗಳಲ್ಲಿ ಅಕ್ರಮವಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಇಂಗ್ಲೆಂಡ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ ಪ್ರದೇಶದ ಫ್ಯಾಕ್ಟರಿಯಲ್ಲಿ ಅಕ್ರಮ ಕೆಲಸ ನಡೆಯುತ್ತಿದೆ ಎಂಬ ಗುಪ್ತಚರ ಮಾಹಿತಿ ಆಧಾರದ ಮೇಲೆ ‘ಇಮಿಗ್ರೇಷನ್‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಇಂಗ್ಲೆಂಡ್‌ ಗೃಹ ಕಚೇರಿ ಮಾಹಿತಿ ನೀಡಿದೆ.

“ಮಿಡ್‌ಲ್ಯಾಂಡ್ಸ್‌ನಲ್ಲಿದ್ದ ಹಾಸಿಗೆ ಫ್ಯಾಕ್ಟರಿಯಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ. ಸಮೀಪವೇ ಇದ್ದ ಕೇಕ್‌ ಫ್ಯಾಕ್ಟರಿಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಅಲ್ಲದೆ, ಮನೆಗೆಲಸ ಮಾಡುತ್ತಿದ್ದ ಮಹಿಳೆಯನ್ನು ಮನೆಯೊಂದರಲ್ಲಿ ಬಂಧಿಸಲಾಗಿದೆ. ಇವೆಲ್ಲರೂ ಭಾರತೀಯ ಪ್ರಜೆಗಳು” ಎಂದು ಗೃಹ ಕಚೇರಿ ತಿಳಿಸಿದೆ.

Advertisements

“ಬಂಧಿತರು ಇಂಗ್ಲೆಂಡ್‌ನ ವೀಸಾ ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಒಬ್ಬರು ಕಾನೂನುಬಾಹಿರವಾಗಿ ಕೆಲಸ ಮಾಡುತ್ತಿದ್ದಾರೆ. ನಾಲ್ವರು ಅಪರಾಧಿಗಳನ್ನು ಇಂಗ್ಲೆಂಡ್‌ನಿಂದ ಭಾರತಕ್ಕೆ ಗಡೀಪಾರು ಮಾಡಲು ಪರಿಗಣಿಸುವ ಪ್ರಕ್ರಿಯೆ ಬಾಕಿ ಇವೆ. ಉಳಿದ ಎಂಟು ಮಂದಿಯನ್ನು ಗೃಹ ಕಚೇರಿಗೆ ನಿಯಮಿತವಾಗಿ ವರದಿ ಮಾಡಿಕೊಳ್ಳುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನಿಯಮಗಳನ್ನು ಉಲ್ಲಂಘಿಸುತ್ತಿರುವ ಉದ್ಯೋಗದಾತರು ಕ್ರಮ ಮತ್ತು ದಂಡಕ್ಕೆ ಗುರಿಯಾಗುತ್ತಾರೆ. ಬಂಧಿತ ಕಾರ್ಮಿಕರಿಗೆ ಇಂಗ್ಲೆಂಡ್‌ನಲ್ಲಿ ವಾಸಿಸಲು ಅಥವಾ ಕೆಲಸ ಮಾಡಲು ಯಾವುದೇ ಹಕ್ಕಿಲ್ಲ ಎಂದು ಕಂಡುಬಂದರೆ, ನಾವು ಅವರನ್ನು ದೇಶದಿಂದ ಗಡಿಪಾರು ಮಾಡಲು ಹಿಂಜರಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಮಾನವ ಕಳ್ಳಸಾಗಣೆದಾರರು ವಲಸಿಗರಿಗೆ ಇಂಗ್ಲೆಂಡ್‌ನಲ್ಲಿ ಕೆಲಸ ಮಾಡಬಹುದೆಂದು ಸುಳ್ಳು ಹೇಳಿ ಕರೆತರುತ್ತಾರೆ. ವಾಸ್ತವದಲ್ಲಿ, ಅಂತಹ ಯಾವುದೇ ಅವಕಾಶವಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X