ಪಾಕಿಸ್ತಾನ | ಆಲಿಕಲ್ಲು ಸಹಿತ ಭಾರೀ ಮಳೆಗೆ 25 ಮಂದಿ ಸಾವು; 145 ಮಂದಿಗೆ ಗಾಯ

Date:

Advertisements
  • ಕಳೆದ ವರ್ಷ ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ 1,700 ಮಂದಿ ಸಾವು
  • ಹವಾಮಾನ ವೈಪರೀತ್ಯ ಪರಿಹಾರಕ್ಕಾಗಿ 2.3 ಬಿಲಿಯನ್‌ ಡಾಲರ್ ಮೀಸಲು

ಪಾಕಿಸ್ತಾನ ದೇಶದಲ್ಲಿ ಬಿಪರ್‌ಜಾಯ್ ಚಂಡಮಾರುತ ಅಪ್ಪಳಿಸುವುದಕ್ಕೂ ಮುನ್ನ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಿಂದ 25 ಮಂದಿ ಮೃತಪಟ್ಟಿದ್ದಾರೆ ಎಂದು ಭಾನುವಾರ (ಜೂನ್‌ 11) ವರದಿಯಾಗಿದೆ.

ದೇಶದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬನ್ನು, ಲಕ್ಕಿ ಮಾರ್ವಾಟ್ ಮತ್ತು ಕರಕ್ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಇದರಿಂದ ಮರಗಳು ನೆಲಕ್ಕೆ ಉರುಳಿವೆ. ವಿದ್ಯುತ್‌ ಕಂಬಗಳು ಬಿದ್ದಿವೆ. ಮನೆಗಳು ನೆಲಸಮಗೊಂಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಲಿಕಲ್ಲು ಸಹಿತ ಮಳೆಗೆ 145 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಪಾಕಿಸ್ತಾನದ ನಾನಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

Advertisements

ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿ ಖತೀರ್‌ ಅಹಮದ್‌ ತಿಳಿಸಿದರು.

ಬಿಪರ್‌ಜಾಯ್‌ ಚಂಡಮಾರುತ ಪಾಕಿಸ್ತಾನದ ಕರಾಚಿಗೆ ಅಪ್ಪಳಿಸುವ ಮುನ್ನವೇ ಈ ಅವಘಡ ನಡೆದಿದೆ.

ಕಳೆದ ವರ್ಷ ಪಾಕಿಸ್ತಾನ ಭಾಗದಲ್ಲಿ ಉಂಟಾದ ಮಾನ್ಸೂನ್‌ ಮಳೆ ಮತ್ತು ಪ್ರವಾಹದಿಂದಾಗಿ 1,700ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಇದರಿಂದ ದೇಶದ 3.3 ಕೋಟಿ ಜನರಿಗೆ ತೊಂದರೆಯುಂಟಾಗಿತ್ತು. ಅಲ್ಲದೆ ಸುಮಾರು 80 ಲಕ್ಷ ಮಂದಿ ಬೇರೆಡೆ ವಲಸೆ ಹೋಗಿದ್ದರು.

ಪಾಕಿಸ್ತಾನ ಸರ್ಕಾರ ಶುಕ್ರವಾರ ಮಂಡಿಸಿದ ರಾಷ್ಟ್ರೀಯ ಬಜೆಟ್‌ನಲ್ಲಿ ಹವಾಮಾನ ವೈಪರೀತ್ಯದ ಪರಿಹಾರಕ್ಕಾಗಿ 2.3 ಬಿಲಿಯನ್‌ ಅಮೆರಿಕ ಡಾಲರ್‌ ಮೀಸಲಿಟ್ಟಿದೆ.

ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಜ್‌ ಶರೀಫ್‌ ಶನಿವಾರ ಮಳೆ ಸಂಬಂಧಿತ ಅವಘಡದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಬಿಪರ್‌ಜಾಯ್‌ ಚಂಡಮಾರುತ ತೀವ್ರ ಸ್ವರೂಪದಲ್ಲಿ ಪಾಕಿಸ್ತಾನಕ್ಕೆ ಅಪ್ಪಳಿಸುವ ಹಿನ್ನೆಲೆ ತುರ್ತು ಕ್ರಮಗಳನ್ನು ಕೈಗೊಳ್ಳಲು ಶಹಬಾಜ್ ಶರೀಫ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತೀವ್ರ ಸ್ವರೂದಲ್ಲಿ ಬಿಪರ್‌ಜಾಯ್ ಚಂಡಮಾರುತ ಗಂಟಗೆ 150 ಕಿ.ಮೀ ವೇಗದಲ್ಲಿ ಬೀಸುತ್ತಿದೆ. ಇದು ದೇಶದ ದಕ್ಷಿಣ ಭಾಗಕ್ಕೆ ಆಗಮಿಸುತ್ತಿದೆ ಎಂದು ಪಾಕಿಸ್ತಾನ ವಿಪತ್ತು ನಿರ್ವಹಣಾ ಸಂಸ್ಥೆ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X