ಇರಾನ್ | ಭಾರತೀಯ ಐವರು ನಾವಿಕರ ಬಿಡುಗಡೆ

Date:

Advertisements

ತೆಹರಾನ್‌ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಇಸ್ರೇಲಿ ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಇರಾನ್‌ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತ ಹೇಳಿಕೆ ನೀಡಿದ್ದು, ನಾವಿಕರು ನಿನ್ನೆ ಸಂಜೆಯೇ ಇರಾನ್‌ ತೊರೆದಿದ್ದಾರೆ ಎಂದು ಮಾಹಿತಿ ತಿಳಿಸಿವೆ.

ಬಿಡುಗಡೆಯ ಮಾಹಿತಿಯನ್ನು ಹಂಚಿಕೊಂಡಿರುವ ಭಾರತೀಯ ರಾಯಭಾರ ಕಚೇರಿ, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸಹಭಾಗಿತ್ವದೊಂದಿಗೆ ಭಾರತೀಯರನ್ನು ಬಿಡುಗಡೆ ಮಾಡಿದ್ದಕ್ಕೆ ಇರಾನ್‌ ಸರ್ಕಾರಕ್ಕೆ ಧನ್ಯವಾದ ತಿಳಿಸಿದೆ.

“ಇರಾನ್‌ನ ಎಂಎಸ್‌ಸಿ ಕರಾವಳಿಯಲ್ಲಿದ್ದ ಐವರು ಭಾರತೀಯರನ್ನು ಇಂದು ಮಧ್ಯಾಹ್ನ ಬಿಡುಗಡೆ ಮಾಡಲಾಗಿದೆ. ಇರಾನ್‌ನ ಬಂದಾರ್‌ ಅಬ್ಬಾಸ್‌ನಲ್ಲಿನ ಭಾರತೀಯ ದೂತವಾಸ ಕಚೇರಿಯ ಸಮನ್ವಯತೆಯೊಂದಿಗೆ ಈ ಕಾರ್ಯ ನೆರವೇರಿಸಿದ್ದಕ್ಕಾಗಿ ಇರಾನ್‌ ಅಧಿಕಾರಿಗಳಿಗೆ ನಾವು ಧನ್ಯವಾದ ತಿಳಿಸುತ್ತೇವೆ” ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಗುರುವಾರದ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಇಸ್ರೇಲಿ ಸಂಬಂಧಿತ ಸರಕು ಹಡಗನ್ನು ಇರಾನ್‌ನ ನೌಕಾಪಡೆಯ ಅಧಿಕಾರಿಗಳು ಏಪ್ರಿಲ್‌ 13 ರಂದು ವಶಪಡಿಸಿಕೊಂಡಿತ್ತು. ಬಂಧಿತ 25 ಮಂದಿಯಲ್ಲಿ 17 ಮಂದಿ ನೌಕಾಪಡೆಯ ಸಿಬ್ಬಂದಿಗಳಿದ್ದರು. 17 ಬಂಧಿತರನ್ನು ಏ.18ರಂದು ಬಿಡುಗಡೆಗೊಳಿಸಲಾಗಿತ್ತು.

ಬಂಧಿತರಲ್ಲಿ ಉಳಿದ 11 ಮಂದಿ ಇರಾನ್‌ನಲ್ಲಿಯೇ ಇದ್ದಾರೆ. ಇರಾನ್‌ ಹಾಗೂ ಇಸ್ರೇಲ್‌ ನಡುವೆ ಪ್ರತಿಕಾರದ ದಾಳಿ ನಡೆದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X