ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಉಳಿಸಿ-ಬೆಳೆಸಲು ಅಟ್ಲಾಂಟದಲ್ಲೊಂದು ಪ್ರದರ್ಶನ

Date:

Advertisements

ಅಮೇರಿಕಾದ ಅಟ್ಲಾಂಟ ನಗರದ ಮಾರ್ಟಿನ್ ಲೂಥರ್ ಕಿಂಗ್ ಸ್ಮಾರಕದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗ ಅನಿವಾಸಿ ಭಾರತೀಯರು ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಜಾತ್ಯತೀತತೆಯ ರಕ್ಷಣೆಗಾಗಿ ಮೇ 20, 2023 ಶನಿವಾರದಂದು ಪ್ರದರ್ಶನ ನಡೆಸಿದರು.

ಭಾರತದ ಮೋದಿ ಸರಕಾರದ ಜನವಿರೋಧಿ, ಪ್ರಜಾಪ್ರಭುತ್ವ ವಿರೋಧಿ ನೀತಿಗಳು, ಪತ್ರಿಕಾ ಸ್ವಾತಂತ್ರ್ಯದ ದಮನ, ಮಹಿಳಾ ಕುಸ್ತಿ ಪಟುಗಳ ಮೇಲಿನ ಅತ್ಯಾಚಾರ ಹಾಗೂ ಧರ್ಮ ದ್ವೇಷದ ರಾಜಕಾರಣವನ್ನು ಅಮೇರಿಕಾದ ಸರಕಾರದ ಹಾಗೂ ಅಮೆರಿಕನ್ ಪ್ರಜೆಗಳ ಗಮನ ಸೆಳೆಯಲು ಈ ಪ್ರದರ್ಶನ ಮಾಡಲಾಯಿತು.

ಮಾರ್ಟಿನ್ ಲೂಥರ್ ಕಿಂಗ್ ಅವರ ಹೋರಾಟಕ್ಕೆ ಮಹಾತ್ಮ ಗಾಂಧಿಯವರೇ ಸ್ಪೂರ್ತಿ. ಆದ್ದರಿಂದ ಈ ಸ್ಮಾರಕ ವೀಕ್ಷಿಸಲು ಪ್ರಪಂಚದ ವಿವಿಧ ದೇಶಗಳಿಂದ ಬರುತ್ತಾರೆ. ಶನಿವಾರದ ರಜೆಯಾದ್ದರಿಂದ ಹಲವಾರು ಜನರು ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿ ಆಸಕ್ತಿಯಿಂದ ಆಲಿಸಿ ತಮ್ಮ ಅಭಿಪ್ರಾಯವನ್ನು ತಿಳಿಸಿದರಲ್ಲದೆ ಅಮೇರಿಕಾದ ಬೈಡನ್ ಸರಕಾರವು ಭಾರತದ ಮೋದಿ ಸರಕಾರದ ಈ ಜನವಿರೋಧಿ ಕ್ರಮಗಳ ಬಗ್ಗೆ ಗಟ್ಟಿ ನಿಲುವು ತೋರಬೇಕೆಂದು ಆಗ್ರಹಿಸಿದರು.

Advertisements

ಪ್ರದರ್ಶನ ಆಯೋಜನೆ ಮಾಡಿದ್ದ ದಿನೇಶ್ ಪಟೇಲ್ ಇನ್ನು ಮುಂದೆಯೂ ಸಹ ಅಟ್ಲಾಂಟ ನಗರದ ವಿವಿಧ ಭಾಗಗಳಲ್ಲಿ ಇಂತಹ ಪ್ರತಿಭಟನೆಗಳನ್ನು ನಡೆಸಲಾಗುವುದೆಂದು ಹೇಳಿದರು. ದಿನೇಶ್ ಪಟೇಲ್ ಈ ಹಿಂದೆ ‘ಭಾರತ್ ಜೋಡೋ’ ಯಾತ್ರೆ ಬೆಂಬಲಿಸಿ ಸೆಪ್ಟೆಂಬರ್ 7, 2022 ರಿಂದ ಜನವರಿ 30, 2023 ರವರೆಗೆ ಅಮೇರಿಕಾದ ಕೊರೆಯುವ ಚಳಿಯಲ್ಲಿ ಸಂಪೂರ್ಣ ಬರಿಗಾಲಿನಲ್ಲಿದ್ದು ತಮ್ಮ ಬೆಂಬಲ ವ್ಯಕ್ತಪಡಿಸಿ ಪ್ರಸಿದ್ಧ ಪತ್ರಕರ್ತ ರವೀಶ್ ಕುಮಾರ್ ಅವರ ಗಮನ ಸೆಳೆದಿದ್ದರು.

ಭಾರತದಲ್ಲಿ ಮುಂಬರುವ ಚುನಾವಣೆಗಳಲ್ಲಿ ಜನರ ಮನಸ್ಸುಗಳನ್ನು ಜೋಡಿಸುವ, ಒಂದುಗೂಡಿಸುವ ಸರಕಾರದ ಅನಿವಾರ್ಯತೆ ಇದೆಯೆಂದು ಹೇಳಿದರು.

-ಶ್ರೇಯಸ್, ಅಟ್ಲಾಂಟ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X