ಅಮೆರಿಕದ ಗಾಜಾ ನಡೆ ವಿರೋಧಿಸಿ ಪಿ.ಹೆಚ್‌ಡಿ, ಎಂಎಸ್‌ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ

Date:

ಇಸ್ರೇಲ್ – ಪ್ಯಾಲಿಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಗಾಜಾ ವಿರೋಧಿ ನೀತಿ ಅನುಸರಿಸುತ್ತಿರುವ ಅಮೆರಿಕದ ನಡೆ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಚಳುವಳಿಗಾರ ಸಂದೀಪ್ ಪಾಂಡೆ ಕ್ಯಾಲಿಫೋರ್ನಿಯ ವಿವಿಯ ಪಿ.ಹೆಚ್‌ಡಿ ಪದವಿಯನ್ನು ಮರಳಿಸಿದ್ದಾರೆ.

ಗಾಜಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಪೈಶಾಚಿಕ ಕೃತ್ಯವನ್ನು ಸಹಕರಿಸುತ್ತಿರುವ ಅಮೆರಿಕದ ನಡೆಯನ್ನು ವಿರೋಧಿಸಿ ಈ ವರ್ಷದ ಜನವರಿಯಲ್ಲಿ ತಮ್ಮ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಕೂಡ ಮರಳಿಸಿದ್ದರು. 2002ರಲ್ಲಿ ಸಂದೀಪ್ ಪಾಂಡೆ ರೊಮನ್‌ ಮ್ಯಾಗ್ಸೆಸೆ ಪ್ರಶಸ್ತಿಗೆ ಪಾತ್ರರಾಗಿದ್ದರು

ಪಾಂಡೆ ಅವರು ಅಮೆರಿಕದ ಸೈರಸ್‌ಕಾಸ್‌ ವಿವಿಯ ಎರಡು ಎಂಎಸ್‌ಸಿ ಪದವಿಗಳನ್ನು ಕೂಡ ವಾಪಸ್‌ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

ತಮ್ಮ ಪದವಿಗಳನ್ನು ಮರಳಿಸಿ ವಿವಿಗಳಿಗೆ ಪತ್ರ ಬರೆದಿರುವ ಪಾಂಡೆ ಪ್ರಸ್ತುತ ನಡೆಯುತ್ತಿರುವ ಇಸ್ರೇಲ್‌-ಪ್ಯಾಲೆಸ್ತೀನ್ ಯುದ್ಧದಲ್ಲಿ ಅಮೆರಿಕದ ಪಾತ್ರವು ಶೋಚನೀಯವಾಗಿದೆ ಎಂದು ಖಂಡಿಸಿದ್ದಾರೆ.

“ಇಸ್ರೇಲ್ – ಪ್ಯಾಲಿಸ್ತೀನ್‌ ಯುದ್ಧದಲ್ಲಿ ಅಮೆರಿಕವು ಮಧ್ಯಸ್ಥಿಕೆ ಪಾತ್ರ ವಹಿಸಿ ಯುದ್ಧವನ್ನು ಅಂತ್ಯಗೊಳಿಸಿ ಶಾಶ್ವತ ಪರಿಹಾರದ ಜೊತೆಗೆ ಪ್ಯಾಲಿಸ್ತೀನ್‌ಗೆ ಸ್ವತಂತ್ರ ದೇಶದ ಸ್ಥಾನಮಾನ ದೊರಕಿಸಿಕೊಡಬಹುದೆಂದು ನಂಬಿದ್ದೆ. ಆದರೆ ಇದರ ಬದಲಿಗೆ ಅಮೆರಿಕವು ಅಪಾರವಾಗಿ ಸೇನಾ ನೆರವು ನೀಡಿ ಇಸ್ರೇಲ್‌ನ ಆಕ್ರಮಣಕಾರಿ ನೀತಿಗೆ ಕಾರಣವಾಗಿ ಸಾವಿರಾರು ಅಮಾಯಕ ಮಕ್ಕಳ ಸಾವಿಗೆ ಕಾರಣವಾಗಿದೆ” ಎಂದು ತಮ್ಮ ಪತ್ರದಲ್ಲಿ ಸಂದೀಪ್‌ ಪಾಂಡೆ ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ಹಾಗೂ ಮಾನವ ಹಕ್ಕುಗಳಿಗಾಗಿ ಅಮೆರಿಕದ ನಿಲುವನ್ನು ನಂಬಲು ಕಷ್ಟಸಾಧ್ಯವಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...