ದುಬೈ | ಬ್ಯಾರೀಸ್ ಚೇಂಬರ್ ಯುಎಇ ವತಿಯಿಂದ ಫೆಬ್ರವರಿ 9ರಂದು ಅದ್ದೂರಿಯ ಬ್ಯಾರಿ ಮೇಳ

Date:

Advertisements

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ಯುಎಇ ನೇತೃತ್ವದಲ್ಲಿ ಯುಎಇಯಲ್ಲಿರುವ ಎಲ್ಲಾ ಬ್ಯಾರಿ ಸಂಘಟನೆಗಳ ಸಹಯೋಗದಲ್ಲಿ 2025ರ ಫೆಬ್ರವರಿ 9ರಂದು ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ಅದ್ದೂರಿಯ ಬ್ಯಾರಿ ಮೇಳ ನಡೆಯಲಿದೆ.

ಇದರ ಅಂಗವಾಗಿ 8 ಡಿಸೆಂಬರ್ ಅಜ್ಮಾನ್ ತುಂಬೆ ಮೆಡಿಸಿಟಿ ಸಭಾಂಗಣದಲ್ಲಿ ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು.

1002645127

ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತುಂಬೆ ಗ್ರೂಪ್ ಸ್ಥಾಪಕರು, ಅನಿವಾಸಿ ಉದ್ಯಮಿ ತುಂಬೆ ಮೊಹಿದ್ದೀನ್ ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮದ ಸಿದ್ಧತೆಗೆ ಅಧಿಕೃತ ಚಾಲನೆ ನೀಡಿದರು.

Advertisements

ಇದನ್ನು ಓದಿದ್ದೀರಾ? ದುಬೈನಲ್ಲಿದ್ದ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ.ಸಯ್ಯದ್ ಖಲೀಲ್‌ ನಿಧನ

ಬ್ಯಾರೀಸ್ ಚೇಂಬರ್ ಯುಎಇ ಅಧ್ಯಕ್ಷ ಹಿದಾಯತ್ ಅಡ್ಡೂರ್ ಬ್ಯಾರಿ ಸಮುದಾಯದ ಉದ್ಯಮ ಕ್ಷೇತ್ರದ ಇತಿಹಾಸದ ಬಗ್ಗೆ, ಬ್ಯಾರೀಸ್ ಚೇಂಬರ್‌ನ ಗುರಿ ಹಾಗೂ ಬ್ಯಾರಿ ಮೇಳದ ಉದ್ದೇಶದ ಬಗ್ಗೆ ಮಾತನಾಡಿದರು.

ದುಬೈ1

ಬ್ಯಾರಿ ಮೇಳದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ, ಭಾಗವಹಿಸಿಸುವ ಅತಿಥಿಗಳ ಬಗ್ಗೆ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಹಂಝ ಅಬ್ದುಲ್ ಖಾದರ್, ಮಹಮ್ಮದ್ ಅಲಿ ಉಚ್ಚಿಲ್, ಇಮ್ರಾನ್ ಎರ್ಮಾಳ್ ವಿವರಿಸಿದರು. ಉದ್ಯೋಗ ಮೇಳ, ದೊರಕಲಿರುವ ಹಲವಾರು ಉದ್ಯೋಗಾವಕಾಶಗಳ ಬಗ್ಗೆ ಮಹಮ್ಮದ್ ಮುಸ್ತಾಕ್ ಮಾಹಿತಿ ನೀಡಿದರು.

ಬ್ಯಾರಿ ಮೇಳದಲ್ಲಿ ಬ್ಯಾರಿ ಸಾಂಸ್ಕೃತಿಕ ಕಾರ್ಯಕ್ರಮ, ಯಶಸ್ವಿ ಉದ್ಯಮಿ ಗಳನ್ನು, ಸಮುದಾಯದ ಸಾಧಕರನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು, ಕರಾವಳಿಯ ಪ್ರಸಿದ್ಧ ಆಹಾರ, ತಿಂಡಿಗಳ ಮಳಿಗೆಗಳು, ವಿವಿಧ ಉದ್ಯಮ ಕ್ಷೇತ್ರದ 60ಕ್ಕೂ ಹೆಚ್ಚಿನ ಮಳಿಗೆಗಳು ಇರಲಿವೆ.

ದುಬೈ2 1

ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಯುಎಇಯ ಪ್ರಮುಖ ಬ್ಯಾರಿ ಸಂಘಟನೆಗಳಾದ ಬಿ.ಸಿ.ಎಫ್, ಬಿ.ಡಬ್ಲ್ಯೂ.ಎಫ್, ಕೆ.ಸಿ.ಎಫ್, ಕೆ.ಐ.ಸಿ, ದಾರುಲ್ ಇರ್ಷಾದ್, ಡಿ.ಕೆ.ಎಸ್.ಸಿ, ಕೆ.ಎಂ.ಎ.ಎಸ್, ಹಿದಾಯ ಫೌಂಡೇಶನ್, ಕೆ.ಡಿ.ಸಿ, ಅಲ್ ಖಮರ್, ಎಸ್.ಯು.ಎ.ಸಿ, ಪ್ರವಾಸಿ ಕೂಟ ವಿಟ್ಲ, ಟಿ.ಓ.ಡಿ, ಕೆ.ಎ.ಎಫ್, ಕೆ.ಎಂ.ಎ.ಜೆ, ಎಂ.ಎಫ್.ಡಿ, ಎಸ್.ಕೆ.ಎಸ್.ಎಸ್.ಎಫ್ ಯುಎಇ, ದಾರುನ್ನೂರು, ದಾರುಸ್ಸಲಾಂ, ಶಂಶುಲ್ ಉಲಾಮ ಸೆಂಟರ್, ದಾರುಲ್ ಹಸನಿಯ್ಯ ಎಜುಕೇಷನ್ ಸೆಂಟರ್, ಅಲ್ ಇಸ್ಲಾಮೀಯ ವೆಲ್ಫೇರ್, ಮೂಳೂರು ವೆಲ್ಫೇರ್, ಅಲ್ ಹುದಾ, ಅಲ್ ಇಬಾದ್ ಇಂಡಿಯನ್ ಸ್ಕೂಲ್, ನೂರ್ ಫ್ರೆಂಡ್ಸ್, ಸಾದಿಯ ಬೆಂಗಳೂರು, ಕೊಡಗು ವೆಲ್ಫೇರ್, ಮಸ್ದರ್ ಕೊಪ್ಪಳ, ಅಲ್ ಮದೀನಾ ಮಂಜನಾಡಿ, ಮುಹಿನ್ನುಸುನ್ನ ದಾವಣಗೆರೆ, ಮರ್ಕಝ್ ಉಲ್ ಹುದಾ ಕುಂಬ್ರ, ದಾರುಲ್ ಹಿದಾ ಬೆಳ್ಳಾರೆ ಹಾಗೂ ಹಲವು ಮುಖಂಡರು, ಉದ್ಯಮಿಗಳು ಭಾಗವಹಿಸಿದರು.

ದುಬೈ3

ಬ್ಯಾರಿ ಮೇಳ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾದ ಅಶ್ರಫ್ ಷಾ ಮಂತೂರ್ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಬ್ಯಾರೀಸ್ ಚೇಂಬರ್ ಯುಎಇ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್ ಕಾರ್ಯಕ್ರಮ ನಿರೂಪಿಸಿದರು.

ದುಬೈ5
ದುಬೈ4
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

Download Eedina App Android / iOS

X