ಚೀನಾದ ಒಪ್ಪಂದ ರದ್ದು; ಭಾರತದೊಂದಿಗೆ ಶ್ರೀಲಂಕಾ ಇಂಧನ ಒಪ್ಪಂದ

Date:

Advertisements

ಚೀನಾದ ಸಂಸ್ಥೆಯೊಂದು ಪಡೆದ ಟೆಂಡರ್‌ಅನ್ನು ರದ್ದುಗೊಳಿಸಿರುವ ಶ್ರೀಲಂಕಾ, ಮೂರು ಸೌರ ಮತ್ತು ಪವನ ಶಕ್ತಿಯಿಂದ ಹೈಬ್ರಿಡ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣದ ಟೆಂಡರ್‌ಅನ್ನು ಭಾರತೀಯ ಕಂಪನಿಗೆ ನೀಡಿದೆ.

ಭಾರತವು ತನ್ನ ಪ್ರಭಾವದ ವ್ಯಾಪ್ತಿ ಹಾಗೂ ಪ್ರಮುಖ ಜಾಗತಿಕ ಹಡಗು ಮಾರ್ಗಗಳ ಬಳಿ ಇರುವ ಶ್ರೀಲಂಕಾದಲ್ಲಿ ಚೀನೀ ಪ್ರಭಾವ ಬೆಳೆಯುತ್ತಿರುವ ಬಗ್ಗೆ ಭಾರತ ಹಿಂದಿನಿಂದಲೂ ಚಿಂತಿಸುತ್ತಿದೆ. ಎರಡು ವರ್ಷಗಳ ಹಿಂದೆ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ (ಎಡಿಬಿ) ಸಾಲ ಪಡೆದು ವಿದ್ಯುತ್‌ ಘಟಕ ನಿರ್ಮಾಣ ಯೋಜನೆಯನ್ನು ಚೀನಾ ಕಂಪನಿಗೆ ಶ್ರೀಲಂಕಾ ಟೆಂಡರ್‌ ನೀಡಿತ್ತು. ಈ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿತ್ತು. ಆದರೆ, ಇತ್ತೀಚೆಗೆ ಆ ಟೆಂಡರ್‌ಅನ್ನು ರದ್ದುಪಡಿಸಿದ್ದ ಶ್ರೀಲಂಕಾ, ಯೋಜನೆಯನ್ನು ಸ್ಥಗಿತಗೊಳಿಸಿತ್ತು.

ಈಗ, ಆ ಯೋಜನೆಯನ್ನು ಪುನರುಜ್ಜೀವನಗೊಳಿಸಿದೆ. ಭಾರತದ ಕಂಪನಿಗೆ ಟೆಂಡರ್‌ ನೀಡಿದೆ. ಯೋಜನೆಗೆ 11 ದಶಲಕ್ಷ ಡಾಲರ್‌ನಷ್ಟು ಹಣವನ್ನು ಭಾರತ ಸರ್ಕಾರದ ಅನುದಾನದಿಂದ ನೀಡಲಾಗಿದೆ ಎಂದು ಶ್ರೀಲಂಕಾದ ಇಂಧನ ಸಚಿವಾಲಯ ಶುಕ್ರವಾರ ತಿಳಿಸಿದೆ.

Advertisements

ಭಾರತದ ಟೆಕ್ ಹಬ್ ಎಂದೇ ಹೆಸರಾಗಿರುವ ಬೆಂಗಳೂರು ಮೂಲದ ‘ಯು-ಸೋಲಾರ್’ ಕಂಪನಿಗೆ ಕಟ್ಟಡದ ಗುತ್ತಿಗೆ ನೀಡಲಾಗಿದೆ ಎಂದು ಅದು ಹೇಳಿದೆ.

“ಭಾರತದ ನೆರವು ದ್ವಿಪಕ್ಷೀಯ ಇಂಧನ ಪಾಲುದಾರಿಕೆಗೆ ಹೊಸ ಮಹತ್ವ ನೀಡುತ್ತದೆ” ಎಂದು ಭಾರತೀಯ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ನ್ಯೂಸ್‌ ಚಾನೆಲ್‌ಗಳಲ್ಲಿ ಕೋಮು ದ್ವೇಷ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌18ಗೆ ದಂಡ; ಆಜ್ ತಕ್‌ಗೆ ಎಚ್ಚರಿಕೆ

ಮೂರು ಹೈಬ್ರಿಡ್ ವಿದ್ಯುತ್ ಉತ್ಪಾದನಾ ಘಟಕಗಳ ಮೂಲಕ 2,230 ಕಿಲೋವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಶ್ರೀಲಂಕಾ ಹೊಂದಿದೆ. ಈ ಘಟಕಗಳನ್ನು ಶ್ರೀಲಂಕಾದ ಜಾಫ್ನಾ ನಗರದ ಸಮೀಪದ ದ್ವೀಪಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಚೀನಾ ಮತ್ತು ಭಾರತವು ಶ್ರೀಲಂಕಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಒಪ್ಪಂದಗಳಿಗಾಗಿ ಪೈಪೋಟಿ ನಡೆಸುತ್ತಿವೆ. ಆದರೆ, ಶ್ರೀಲಂಕಾ 1948ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ನಂತರದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಪ್ರಸ್ತುತದ ದಿನಗಳಲ್ಲಿ ಎದುರಿಸುತ್ತಿದ್ದು, ಬಿಕ್ಕಟ್ಟಿನಿಂದ ಹೊರ ಬರಲು ಯತ್ನಿಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X