ಅಫ್ಘಾನಿಸ್ತಾನದಿಂದ ಭಾರತಕ್ಕೆ ಸರಕು ಸಾಗಾಟ; ಪಾಕಿಸ್ತಾನ ಅನುಮತಿ

Date:

Advertisements

ಭಾರತಕ್ಕೆ ಸರಕು ಸೇವೆಗಳನ್ನು ಸಾಗಿಸುವುದಕ್ಕೆ ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಅನುಮತಿ ನೀಡಿದೆ. ವಾಘಾ – ಅಟ್ಟಾರಿ ಗಡಿಯ ಮೂಲಕ ಸರಕು ಸಾಗಾಟಕ್ಕೆ ಅನುಮತಿ ನೀಡಲಾಗಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ಅಫ್ಘಾನಿಸ್ತಾನ ರಾಯಬಾರಿ ಕಚೇರಿಗೆ ಈ ಬಗ್ಗೆ ಪತ್ರ ಬರೆದಿದೆ. 150 ಅಫ್ಘಾನ್ ಟ್ರಕ್‍ಗಳಿಗೆ ವಾಘಾ ಗಡಿಯ ಮೂಲಕ ಭಾರತ ಪ್ರವೇಶಿಸಲು ಅನುಮತಿ ಸಿಕ್ಕಿದೆ.

ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಇದಾದ ಬಳಿಕ ವಾಘಾ ಗಡಿಯನ್ನು ಎರಡೂ ದೇಶಗಳು ಬಂದ್ ಮಾಡಿದ್ದವು. ಇದರಿಂದ ಭಾರತಕ್ಕೆ ಅಫ್ಘಾನಿಸ್ತಾನದಿಂದ ಬರುತ್ತಿದ್ದ ಸರಕುಗಳು ನಿಂತಿದ್ದವು. ಸರಕು ಸಾಗಾಟ ಮಾಡಲು ಅನುಮತಿ ನೀಡುವಂತೆ ಅಫ್ಘಾನಿಸ್ತಾನ ಪಾಕಿಸ್ತಾನಕ್ಕೆ ಮನವಿ ಮಾಡಿತ್ತು. ಈ ಮನವಿ ಮೇರೆಗೆ ಪಾಕ್ ಅನುಮತಿ ನೀಡಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ಏ.22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯ ನಂತರ ಭಾರತ ಪಾಕ್‌ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿಯಲಾಗಿತ್ತು.

ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ಆದೇಶಿಸಿತ್ತು. ಇದಲ್ಲದೆ ಸಾರ್ಕ್ ವೀಸಾ ವಿನಾಯಿತಿ ಯೋಜನೆ ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ ಎಸ್‌ವಿಇಎಸ್ ವೀಸಾಗಳನ್ನು ರದ್ದುಗೊಳಿಸಿ, ಭಾರತ ತೊರೆಯುವಂತೆ ಸೂಚಿಸಲಾಗಿತ್ತು. ಇದಕ್ಕೆ ತಕ್ಕಂತೆ ಪಾಕ್ ಸಹ ಪ್ರತಿ ತಂತ್ರಗಳನ್ನು ರೂಪಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X