ಪಾಕಿಸ್ತಾನ | ಎರಡು ಬುಡಕಟ್ಟುಗಳ ನಡುವೆ ಘರ್ಷಣೆ; 16 ಮಂದಿ ಸಾವು

Date:

Advertisements
  • ಸನ್ನಿಖೇಲ್, ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಗಣಿ ವಿಚಾರ ಸಂಬಂಧ ಘರ್ಷಣೆ
  • ಪಾಕಿಸ್ತಾನ ಕೋಹತ್‌ ಜಿಲ್ಲೆಯ ಪೇಶಾವರದ ನೈಋತ್ಯದ ದರ್ರಾ ಆಡಮ್‌ ಖೇಕ್‌ ಪ್ರದೇಶದಲ್ಲಿ ಘಟನೆ

ಪಾಕಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಕಲ್ಲಿದ್ದಲು ಗಣಿ ವಿಚಾರಕ್ಕೆ ಸಂಬಂಧಿಸಿ ಎರಡು ಬುಡಕಟ್ಟು ಸಮುದಾಯಗಳ ನಡುವೆ ಸೋಮವಾರ (ಮೇ 15) ಘರ್ಷಣೆ ಉಂಟಾಗಿ 16 ಮಂದಿ ಮೃತಪಟ್ಟಿದ್ದಾರೆ.

ಕೋಹತ್‌ ಜಿಲ್ಲೆಯ ಪೇಶಾವರದ ನೈಋತ್ಯಕ್ಕೆ 35 ಕಿಮೀ ದೂರದಲ್ಲಿರುವ ದರ್ರಾ ಆಡಮ್ ಖೇಕ್ ಪ್ರದೇಶದಲ್ಲಿ ಸನ್ನಿಖೇಲ್ ಮತ್ತು ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಕಲ್ಲಿದ್ದಲು ಗಣಿ ಗಡಿ ನಿರ್ಧಾರದ ಸಂಬಂಧ ಗಲಭೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತದೇಹಗಳು ಮತ್ತು ಗಲಭೆಯಲ್ಲಿ ಗಾಯಗೊಂಡ ಜನರನ್ನು ಪಾಕಿಸ್ತಾನದ ಪೇಶಾವರದ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ.

Advertisements

ಗಲಭೆಯಲ್ಲಿ ಗಾಯಗೊಂಡವರ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಆದರೆ, ಎರಡು ಬುಡಕಟ್ಟಿನ ಸಮುದಾಯಗಳು ನಡೆಸಿದ ಗುಂಡಿನ ದಾಳಿಯಲ್ಲಿ ಉಭಯ ಸಮುದಾಯಗಳ ನಡುವೆ ಸಾವು- ನೋವು ಸಂಭವಿಸಿದೆ ಎಂದು ಪೊಲೀಸರು ಹೇಳಿದರು.

ಗಲಭೆ ಸ್ಥಳಕ್ಕೆ ಪೊಲೀಸ್‌ ಮತ್ತು ಭದ್ರತಾ ಪಡೆಗಳ ಜಂಟಿ ತಂಡಗಳು ದೌಡಾಯಿಸಿವೆ. ಎರಡು ಸಮುದಾಯಗಳ ನಡುವಿನ ಗುಂಡಿನ ದಾಳಿಯನ್ನು ನಿಯಂತ್ರಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? 2016ರಿಂದ ಅದಾನಿ ಸಮೂಹದ ತನಿಖೆ ಮಾಡಿಲ್ಲ; ಸುಪ್ರೀಂ ಕೋರ್ಟ್‌ಗೆ ಸೆಬಿ ಮಾಹಿತಿ

ಪಾಕಿಸ್ತಾನ ಡರ್ರಾ ಆಡಮ್‌ ಖೇಕ್ ಪೊಲೀಸ್‌ ಠಾಣೆಯಲ್ಲಿ ಗಲಭೆಗೆ ಸಂಬಂಧಿಸಿ ಪ್ರಕರಣವೊಂದನ್ನು ದಾಖಲಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸನ್ನಿಖೇಲ್ ಮತ್ತು ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಕಲ್ಲಿದ್ದಲು ಗಣಿಯ ಗಡಿ ನಿರ್ಧಾರದ ವಿಚಾರಕ್ಕೆ ಸಂಬಂಧಿಸಿ ಎರಡು ವರ್ಷಗಳಿಂದ ವಿವಾದ ನಡೆಯುತ್ತಿತ್ತು. ಎರಡು ಬುಡಕಟ್ಟಿನ ಸಮುದಾಯಗಳ ನಡುವಿನ ಕಲ್ಲಿದ್ದಲು ಗಣಿ ಸಂಬಂಧದ ವಿವಾದವನ್ನು ಬಗೆಹರಿಸಲು ಪ್ರಯತ್ನ ನಡೆಸಲಾಗುತ್ತಿತ್ತು. ಆದರೆ ಯಾವುದೂ ಪರಿಹಾರ ರೂಪ ಪಡೆದಿರಲಿಲ್ಲ. ಈ ವಿವಾದ ಈಗ ಗಲಭೆ ರೂಪ ಪಡೆದಿದೆ. ಪ್ರದೇಶದಲ್ಲಿ ಪೊಲೀಸ್‌ ಪಡೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X