ಭಾರತದಲ್ಲಿ ಸಿಎಎ ಅನುಷ್ಠಾನ: ಕಳವಳ ವ್ಯಕ್ತಪಡಿಸಿದ ಅಮೆರಿಕ

Date:

Advertisements

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿರುವ ಬಗ್ಗೆ ಅಮೆರಿಕ ಪ್ರತಿಕ್ರಿಯೆ ನೀಡಿದ್ದು, ವಿವಾದಾತ್ಮಕ ಕಾಯ್ದೆ ಬಗ್ಗೆ ನಿಕಟವಾಗಿ ಮೇಲ್ವಿಚಾರಣೆಗೊಳಿಸುತ್ತಿರುವುದಾಗಿ ತಿಳಿಸಿದೆ.

“ಮಾರ್ಚ್‌ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿರುವುದಕ್ಕೆ ನಾವು ಕಳವಳಗೊಂಡಿದ್ದೇವೆ. ಕಾಯ್ದೆಯನ್ನು ಹೇಗೆ ಅನುಷ್ಠಾನಗೊಳಿಸಲಾಗುವುದರ ಬಗ್ಗೆ ನಾವು ನಿಕಟವಾಗಿ ಮೇಲ್ವಿಚಾರಣೆಗೊಳಿಸುತ್ತಿದ್ದೇವೆ. ಎಲ್ಲ ಸಮುದಾಯಗಳಿಗೆ ಮೂಲಭೂತ ಪ್ರಜಾಸತ್ತಾತ್ಮಕ ತತ್ವಗಳ ಕಾನೂನಿನಡಿ ಧಾರ್ಮಿಕ ಸ್ವಾತಂತ್ರ ಹಾಗೂ ಸಮಾನವಾಗಿ ನಡೆಸಿಕೊಳ್ಳಬೇಕು” ಎಂದು ಅಮೆರಿಕದ ವಕ್ತಾರರಾದ ಮ್ಯಾಥ್ಯೋ ಮಿಲ್ಲರ್ ತಿಳಿಸಿದ್ದಾರೆ.

ಅಮೆರಿಕದಲ್ಲಿನ ಹಿಂದು ಸಮುದಾಯಗಳು ಸಿಎಎಯನ್ನು ಸ್ವಾಗತಿಸಿದ ನಂತರ ಬೈಡೆನ್‌ ಆಡಳಿತದಿಂದ ಹೇಳಿಕೆ ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

ಮಾರ್ಚ್‌ 11 ರಂದು ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದು, ಕಾಯ್ದೆಯನ್ವಯ 2014 ಡಿಸೆಂಬರ್‌ 31 ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಭಾರತಕ್ಕೆ ಆಗಮಿಸಿದ ಮುಸ್ಲಿಂಯೇತರ ವಲಸಿಗರಿಗೆ ದಾಖಲೆ ರಹಿತ ಪೌರತ್ವ ದೊರಕಿಸಿಕೊಡಲಾಗುತ್ತದೆ.

ಪ್ರತಿಪಕ್ಷಗಳ ಪ್ರತಿಭಟನೆಯ ನಂತರ ಹೇಳಿಕೆ ಹೊರಡಿಸಿರುವ ಕೇಂದ್ರ ಸರ್ಕಾರ, ಸಿಎಎ ಕಾಯ್ದೆ ಬಗ್ಗೆ ಮುಸ್ಲಿಂ ಸಮುದಾಯ ಚಿಂತಿಸಬೇಕಾಗಿಲ್ಲ. ಸಿಎಎ ಮುಸ್ಲಿಂ ಸಮುದಾಯದ ಪೌರತ್ವಕ್ಕೆ ಯಾವುದೇ ರೀತಿಯ ತೊಂದರೆ ನೀಡುವುದಿಲ್ಲ. ಹಿಂದೂ ಸಮುದಾಯದಂತೆ ಮುಸ್ಲಿಂ ಸಮುದಾಯ ಕೂಡ ಸಮಾನ ಅವಕಾಶ ಹೊಂದಿರುತ್ತಾರೆ ಎಂದು ತಿಳಿಸಿತ್ತು.

ಸಿಎಎ ಜಾರಿಯ ಬಗ್ಗೆ ಪಾಕಿಸ್ತಾನ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಸ್ವಾಭಾವತಃ ತಾರತಮ್ಯದಿಂದ ಕೂಡಿದ್ದು, ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಎಂದು ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X