ನದಿಗೆ ಹಾರಿದ್ದ ಜಮ್ಮು ಯುವಕನ ಮೃತದೇಹ ಪಾಕಿಸ್ತಾನದಲ್ಲಿ ಪತ್ತೆ

Date:

Advertisements

ಜಮ್ಮು ಮತ್ತು ಕಾಶ್ಮೀರದ ಜಮ್ಮುವಿನಲ್ಲಿ ಕಳೆದ ತಿಂಗಳು ಚೆನಾಬ್ ನದಿಗೆ ಹಾರಿ ಸಾವನ್ನಪ್ಪಿದ ಯುವಕನ ಮೃತದೇಹವು ಪಾಕಿಸ್ತಾನದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಂತ್ಯಕ್ರಿಯೆಗಾಗಿ ಆತನ ಮೃತದೇಹವನ್ನು ಭಾರತಕ್ಕೆ ತರಿಸಿಕೊಡಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಯುವಕನ ಕುಟುಂಬವು ಕೋರಿದೆ.

ಜಮ್ಮುವಿನ ಅಖ್ನೂರ್ ವಲಯದ ಗಡಿ ಗ್ರಾಮದ ನಿವಾಸಿ ಹರಶ್ ನಗೋತ್ರಾ ಜೂನ್ 11ರಂದು ನಾಪತ್ತೆಯಾಗಿದ್ದರು. ಆತನ ಮೋಟಾರ್ ಸೈಕಲ್ ನದಿಯ ದಡದಲ್ಲಿ ಪತ್ತೆಯಾಗಿತ್ತು. ಮರುದಿನ, ಯುವಕನ ಕುಟುಂಬವು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರನ್ನು ದಾಖಲಿಸಿತ್ತು.

ಖಾಸಗಿ ಟೆಲಿಕಮ್ಯುನಿಕೇಷನ್ ಕಂಪನಿಯಲ್ಲಿ ಹರಶ್‌ ಕೆಲಸ ಮಾಡುತ್ತಿದ್ದರು. ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ನಲ್ಲಿ 80,000 ರೂ.ಗಳಿಗೂ ನಷ್ಟ ಅನುಭವಿಸಿದ್ದ ಹರಶ್, ನದಿಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಆತನ ಮೊಬೈಲ್‌ ಸಿಮ್ ಕಾರ್ಡ್ಅನ್ನು ಪೋಷಕರು ಮರುಆಕ್ಟಿವೇಟ್ ಮಾಡಿದ್ದಾರೆ. ಬಳಿಕ, ಪಾಕಿಸ್ತಾನಿ ಅಧಿಕಾರಿಯಿಂದ ವಾಟ್ಸಾಪ್ ಸಂದೇಶದ ಮೂಲಕ ಹರಶ್‌ ಸಾವಿನ ಬಗ್ಗೆ ಕುಟುಂಬಕ್ಕೆ ಮಾಹಿತಿ ಸಿಕ್ಕಿದೆ ಎಂದು ವರದಿಯಾಗಿದೆ.

ಜೂನ್ 13ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್‌ಕೋಟ್‌ನ ಕಾಲುವೆಯಲ್ಲಿ ಮೃತದೇಹವನ್ನು ಪಾಕ್ ಅಧಿಕಾರಿಗಳು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತನ ಚೇಜಿನಲ್ಲಿ ಗುರುತಿನ ಚೀಟಿ ಪತ್ತೆಯಾಗಿದೆ ಎಂದು ಪಾಕಿಸ್ತಾನಿ ಅಧಿಕಾರಿ ಮಾಹಿತಿ ನೀಡಿದ್ದಾರೆ ಎಂದು ಯುವಕನ ತಂದೆ ಸುಭಾಷ್ ಶರ್ಮಾ ಹೇಳಿದ್ದಾರೆ.

“ನನ್ನ ಮಗನ ಮೃತದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ಮರಳಿ ಭಾರತಕ್ಕೆ ತರಲು ನಮಗೆ ಸಹಾಯ ಮಾಡುವಂತೆ ಪ್ರಧಾನಿ ಮೋದಿ ಅವರನ್ನು ವಿನಂತಿಸುತ್ತೇವೆ. ನಮ್ಮ ಧರ್ಮದ ಪ್ರಕಾರ ಆತನ ಅಂತ್ಯಕ್ರಿಯೆಯನ್ನು ಮಾಡಲು ನಾವು ಬಯಸುತ್ತೇವೆ” ಎಂದು ಶರ್ಮಾ ಹೇಳಿದ್ದಾರೆ.

ಮೃತ ಯುವಕನ ಸಂಬಂಧಿ ಅಮೃತ್ ಭೂಷಣ್ ಅವರು ಈ ವಿಷಯದ ಬಗ್ಗೆ ಈಗಾಗಲೇ ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಹಾಗೂ ಪ್ರಧಾನ ಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X