ನದಿಗೆ ಹಾರಿದ್ದ ಜಮ್ಮು ಯುವಕನ ಮೃತದೇಹ ಪಾಕಿಸ್ತಾನದಲ್ಲಿ ಪತ್ತೆ

Date:

ಜಮ್ಮು ಮತ್ತು ಕಾಶ್ಮೀರದ ಜಮ್ಮುವಿನಲ್ಲಿ ಕಳೆದ ತಿಂಗಳು ಚೆನಾಬ್ ನದಿಗೆ ಹಾರಿ ಸಾವನ್ನಪ್ಪಿದ ಯುವಕನ ಮೃತದೇಹವು ಪಾಕಿಸ್ತಾನದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಂತ್ಯಕ್ರಿಯೆಗಾಗಿ ಆತನ ಮೃತದೇಹವನ್ನು ಭಾರತಕ್ಕೆ ತರಿಸಿಕೊಡಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಯುವಕನ ಕುಟುಂಬವು ಕೋರಿದೆ.

- Advertisement -

ಜಮ್ಮುವಿನ ಅಖ್ನೂರ್ ವಲಯದ ಗಡಿ ಗ್ರಾಮದ ನಿವಾಸಿ ಹರಶ್ ನಗೋತ್ರಾ ಜೂನ್ 11ರಂದು ನಾಪತ್ತೆಯಾಗಿದ್ದರು. ಆತನ ಮೋಟಾರ್ ಸೈಕಲ್ ನದಿಯ ದಡದಲ್ಲಿ ಪತ್ತೆಯಾಗಿತ್ತು. ಮರುದಿನ, ಯುವಕನ ಕುಟುಂಬವು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರನ್ನು ದಾಖಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಖಾಸಗಿ ಟೆಲಿಕಮ್ಯುನಿಕೇಷನ್ ಕಂಪನಿಯಲ್ಲಿ ಹರಶ್‌ ಕೆಲಸ ಮಾಡುತ್ತಿದ್ದರು. ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ನಲ್ಲಿ 80,000 ರೂ.ಗಳಿಗೂ ನಷ್ಟ ಅನುಭವಿಸಿದ್ದ ಹರಶ್, ನದಿಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆತನ ಮೊಬೈಲ್‌ ಸಿಮ್ ಕಾರ್ಡ್ಅನ್ನು ಪೋಷಕರು ಮರುಆಕ್ಟಿವೇಟ್ ಮಾಡಿದ್ದಾರೆ. ಬಳಿಕ, ಪಾಕಿಸ್ತಾನಿ ಅಧಿಕಾರಿಯಿಂದ ವಾಟ್ಸಾಪ್ ಸಂದೇಶದ ಮೂಲಕ ಹರಶ್‌ ಸಾವಿನ ಬಗ್ಗೆ ಕುಟುಂಬಕ್ಕೆ ಮಾಹಿತಿ ಸಿಕ್ಕಿದೆ ಎಂದು ವರದಿಯಾಗಿದೆ.

ಜೂನ್ 13ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್‌ಕೋಟ್‌ನ ಕಾಲುವೆಯಲ್ಲಿ ಮೃತದೇಹವನ್ನು ಪಾಕ್ ಅಧಿಕಾರಿಗಳು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತನ ಚೇಜಿನಲ್ಲಿ ಗುರುತಿನ ಚೀಟಿ ಪತ್ತೆಯಾಗಿದೆ ಎಂದು ಪಾಕಿಸ್ತಾನಿ ಅಧಿಕಾರಿ ಮಾಹಿತಿ ನೀಡಿದ್ದಾರೆ ಎಂದು ಯುವಕನ ತಂದೆ ಸುಭಾಷ್ ಶರ್ಮಾ ಹೇಳಿದ್ದಾರೆ.

“ನನ್ನ ಮಗನ ಮೃತದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ಮರಳಿ ಭಾರತಕ್ಕೆ ತರಲು ನಮಗೆ ಸಹಾಯ ಮಾಡುವಂತೆ ಪ್ರಧಾನಿ ಮೋದಿ ಅವರನ್ನು ವಿನಂತಿಸುತ್ತೇವೆ. ನಮ್ಮ ಧರ್ಮದ ಪ್ರಕಾರ ಆತನ ಅಂತ್ಯಕ್ರಿಯೆಯನ್ನು ಮಾಡಲು ನಾವು ಬಯಸುತ್ತೇವೆ” ಎಂದು ಶರ್ಮಾ ಹೇಳಿದ್ದಾರೆ.

ಮೃತ ಯುವಕನ ಸಂಬಂಧಿ ಅಮೃತ್ ಭೂಷಣ್ ಅವರು ಈ ವಿಷಯದ ಬಗ್ಗೆ ಈಗಾಗಲೇ ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಹಾಗೂ ಪ್ರಧಾನ ಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...