ಭಾರತದ ಜತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಪಾಕ್‌ನಲ್ಲಿ ಔಷಧ ಪೂರೈಕೆಗೆ ವ್ಯತ್ಯಯ

Date:

Advertisements

ಪಹಲ್ಗಾಮ್’ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಜತೆಗಿನ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿದ ಬೆನ್ನಲ್ಲೇ,ಭಾರತದ ಜತೆಗಿನ ಎಲ್ಲ ವ್ಯಾಪಾರ ಒಪ್ಪಂದಗಳನ್ನು ಪಾಕಿಸ್ತಾನ ಕಡಿದುಕೊಂಡಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟದಿಂದ ಜರ್ಜರಿತವಾಗಿರುವ ದೇಶದಲ್ಲಿ ಔಷಧಿಗಳ ಪೂರೈಕೆ ವ್ಯತ್ಯಯವಾಗಿದೆ.

ಭಾರತದ ಜತೆಗೆ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ ಕ್ರಮದಿಂದಾಗಿ ಪಾಕಿಸ್ತಾನದಲ್ಲಿ ಔಷಧೀಯ ಅಗತ್ಯತೆಗಳ ಪೂರೈಕೆಗೆ ಪಾಕಿಸ್ತಾನ ತುರ್ತು ಕ್ರಮಗಳನ್ನು ಕೈಗೊಂಡಿದೆ.

ಆರೋಗ್ಯ ಅಧಿಕಾರಿಗಳು ಔಷಧಿಗಳನ್ನು ಪಡೆದುಕೊಳ್ಳಲು ತುರ್ತು ಸರ್ವಸನ್ನದ್ಧತೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

Advertisements

ವ್ಯಾಪಾರ ವಹಿವಾಟು ಸ್ಥಗಿತದಿಂದ ಔಷಧ ಉದ್ಯಮದ ಮೇಲೆ ಉಂಟಾಗಿರುವ ನೇರ ಪರಿಣಾಮದ ಬಗ್ಗೆ ಯಾವುದೇ ಅಧಿಕೃತ ಅಧಿಸೂಚನೆ ಇಲ್ಲ; ಆದರೆ ತುರ್ತು ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ ಎಂದು ಪಾಕಿಸ್ತಾನದ ಔಷಧ ನಿಯಂತ್ರಣ ಪ್ರಾಧಿಕಾರ ದೃಢಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

2019ರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂತಹ ತುರ್ತು ಸನ್ನಿವೇಶಗಳಿಗಾಗಿ ನಾವು ಸಜ್ಜಾಗಿದ್ದೇವೆ. ನಮ್ಮ ಔಷಧಿ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಕ್ರಿಯರಾಗಿದ್ದೇವೆ ಎಂದು ಡಿಆರ್ಎಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಪಿಐ (ಆ್ಯಕ್ಟಿವ್ ಫಾರ್ಮಸ್ಯೂಟಿಕಲ್ ಇಂಗ್ರೀಡಿಯೆಂಟ್ಸ್) ಮತ್ತು ವಿವಿಧ ಅತ್ಯಾಧುನಿಕ ಚಿಕಿತ್ಸಾ ಉತ್ಪನ್ನಗಳು ಸೇರಿದಂತೆ ಪಾಕಿಸ್ತಾನದ ಔಷಧೀಯ ಕಚ್ಚಾವಸ್ತುಗಳ ಪೈಕಿ ಶೇಕಡ 30 ರಿಂದ 40ರಷ್ಟು ಪಾಲು ಭಾರತದಿಂದ ಪೂರೈಕೆಯಾಗುತ್ತಿದೆ. ಆದರೆ ಈ ಪೂರೈಕೆ ಸರಣಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಡಿಆರ್ಎಪಿ, ಚೀನಾ, ರಷ್ಯಾ ಮತ್ತು ಇತರ ಹಲವು ಯೂರೋಪಿಯನ್ ದೇಶಗಳಿಂದ ಪರ್ಯಾಯ ಮೂಲಗಳ ಹುಡುಕಾಟದಲ್ಲಿದೆ.

ರೇಬಿಸ್ ತಡೆ ಲಸಿಕೆ, ಹಾವಿನ ವಿಷ, ಕ್ಯಾನ್ಸರ್ ಚಿಕಿತ್ಸೆ, ಮೊನೊಕ್ಲೊನಾಲ್ ಆಂಟಿಬಾಡಿಗಳು ಮತ್ತು ಇತರ ಪ್ರಮುಖ ಜೈವಿಕ ಉತ್ಪನ್ನಗಳು ಸೇರಿದಂತೆ ಅಗತ್ಯ ವೈದ್ಯಕೀಯ ಪೂರೈಕೆಯ ಲಭ್ಯತೆಯ ನಿರಂತರತೆಯನ್ನು ಕಾಪಾಡಿಕೊಳ್ಳಲು ಏಜೆನ್ಸಿ ಪ್ರಯತ್ನ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X