ಇರಾನ್-ಇಸ್ರೇಲ್ ಸಂಘರ್ಷ | ಇಸ್ರೇಲ್‌ಗೆ ಅವಾಚ್ಯ ಶಬ್ದಗಳಿಂದ ಬೈದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!

Date:

Advertisements

ಇಸ್ರೇಲ್ ಹಾಗೂ ಇರಾನ್ ನಡುವೆ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಕದನಕ್ಕೆ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಘೋಷಿಸಿದ್ದರೂ ದಾಳಿ ನಿಂತಿರಲಿಲ್ಲ. ಈ ಸಂಘರ್ಷದ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ಮಾಧ್ಯಮಗಳ ಎದುರು ಇಸ್ರೇಲ್‌ ದೇಶದ ನಡೆಯಿಂದ ಬಾಯಿಗೆ ಬಂದಂತೆ ಬಹಿರಂಗ ವಾಗ್ದಾಳಿ ನಡೆಸಿದ ಬೆಳವಣಿಗೆ ನಡೆದಿದೆ.

ಸದ್ಯ ನಡೆಯುತ್ತಿರುವ ಇಸ್ರೇಲ್-ಇರಾನ್ ಸಂಘರ್ಷದ ಬಗ್ಗೆ ಅಧ್ಯಕ್ಷ ಟ್ರಂಪ್ ತಮ್ಮ ಹತಾಶೆಯನ್ನು ಹೊರಹಾಕಿದ್ದು, “ಇಸ್ರೇಲ್ ಮತ್ತು ಇರಾನ್ ಎರಡೂ ದೇಶಗಳು ತಮ್ಮ ಕದನ ವಿರಾಮ ಘೋಷಣೆಯನ್ನು ತ್ವರಿತವಾಗಿ ಧಿಕ್ಕರಿಸಿದ್ದಾರೆ. ಅವರು ಮತ್ತೊಮ್ಮೆ ಪರಸ್ಪರ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಹಗೆತನವನ್ನು ಮುಂದುವರೆಸಿದ್ದಾರೆ. ತಮ್ಮ ಮಿತ್ರರಾಷ್ಟ್ರಗಳ ನಡೆಯ ಬಗ್ಗೆ ಸಂತೋಷವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ಇಸ್ರೇಲ್ ಮೇಲೆ ದಾಳಿ ನಡೆಸಿ ‘ಈಗ ಕದನ ವಿರಾಮ’ ಜಾರಿಯಾಗಿದೆ ಎಂದ ಇರಾನ್

Advertisements

“ಎರಡು ಮಿತ್ರರಾಷ್ಟ್ರಗಳು ಬಹಳ ಸಮಯದಿಂದ ಸಂಘರ್ಷ ನಡೆಸುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆಂದು ಅವರಿಗೇ ತಿಳಿದಿಲ್ಲ” ಎಂದು ಕೋಪದಿಂದಲೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

“ಇರಾನ್ ಮಾತ್ರವಲ್ಲದೇ ಇಸ್ರೇಲ್‌ ಕೂಡ ಕದನ ವಿರಾಮ ಉಲ್ಲಂಘಿಸಿದೆ. ಕದನ ವಿರಾಮದ ಬಗ್ಗೆ ಮಾತನಾಡಲು ಕರೆದಿದ್ದು ಇಸ್ರೇಲ್. ಆ ಬಳಿಕ ದಾಳಿ ನಡೆಸಿರುವುದು ಕೂಡ ಅವರೇ. ಇಷ್ಟೊಂದು ಪ್ರಮಾಣದಲ್ಲಿ ಬಾಂಬ್‌ಗಳನ್ನು ಇಸ್ರೇಲ್‌ ಸುರಿಸಿರುವುದನ್ನು ನಾನು ಈ ಮೊದಲು ಕಂಡಿರಲಿಲ್ಲ. ಇಸ್ರೇಲ್‌ನ ನಡೆಯ ಬಗ್ಗೆ ನಾನು ಸಂತೋಷಗೊಂಡಿಲ್ಲ” ಎಂದು ಕೋಪದಿಂದಲೇ ಡೊನಾಲ್ಡ್ ಟ್ರಂಪ್ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಮೆರಿಕದ ಈವರೆಗಿನ ಅಧ್ಯಕ್ಷರುಗಳ ಪೈಕಿ ಈ ರೀತಿಯಾಗಿ ಯಾರೂ ಕೂಡ ಈ ಹಿಂದೆ ಈ ರೀತಿಯಲ್ಲಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿರಲಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಫ್ಘಾನಿಸ್ತಾನ | ಭೀಕರ ಅಪಘಾತ: ಹೊತ್ತಿ ಉರಿದ ಬಸ್, 17 ಮಕ್ಕಳು ಸೇರಿ 71 ಮಂದಿ ದಾರುಣ ಸಾವು

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್...

ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

Download Eedina App Android / iOS

X