ಪ್ರವಾಸೋದ್ಯಮ, ಆರ್ಥಿಕತೆಯಲ್ಲಿ ಹಿನ್ನಡೆ; ‘ವೆಲ್‌ಕಮ್ ಇಂಡಿಯಾ’ ಅಭಿಯಾನ ನಡೆಸುತ್ತಿದೆ ಮಾಲ್ಡೀವ್ಸ್

Date:

Advertisements

ಸುಮಾರು ಒಂಬತ್ತು ತಿಂಗಳ ನಂತರ, ಮಾಲ್ಡೀವ್ಸ್ ಸರ್ಕಾರವು ತನ್ನ ಭಾರತ ವಿರೋಧಿ ನಿಲುವಿನಿಂದ ಹಿಂದೆ ಸರಿದಿದೆ. ಭಾರತವು ಉಡುಗೊರೆಯಾಗಿ ನೀಡಿದ್ದ ಡಾರ್ನಿಯರ್ ವಿಮಾನವನ್ನು ವೈದ್ಯಕೀಯ ಸಮಯಕ್ಕಾಗಿ ಬಳಲಾಗುವುದು ಎಂದು ಘೋಷಿಸುವುದರಿಂದ ಹಿಡಿದು, ಭಾರತೀಯ ಪ್ರವಾಸಿಗರನ್ನು ಸೆಳೆಯಲು ಭಾರತದಲ್ಲಿ ‘ವೆಲ್‌ಕಮ್ ಇಂಡಿಯಾ’ ಶೀರ್ಷಿಕೆಯ ರೋಡ್‌ಶೋಗಳನ್ನು ನಡೆಸುವವರೆಗೆ ಗಮನಾರ್ಹ ಬದಲಾವಣೆಗಳು ಮಾಲ್ಡೀವ್ಸ್‌ನಿಂದ ಕಂಡುಬಂದಿವೆ.

ಮಾಲ್ಡೀವ್ಸ್ ಮಾರ್ಕೆಟಿಂಗ್ ಅಂಡ್ ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಷನ್, ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಅಂಡ್‌ ಟೂರ್ ಆಪರೇಟರ್ಸ್ ಹಾಗೂ ಮಾಲ್ಡೀವ್ಸ್‌ನ ನ್ಯಾಷನಲ್ ಹೋಟೆಲ್‌ಗಳು ಮತ್ತು ಗೆಸ್ಟ್‌ಹೌಸ್ ಅಸೋಸಿಯೇಷನ್‌ನ ಸಹಯೋಗದೊಂದಿಗೆ ಮುಂಬೈ ಮತ್ತು ಬೆಂಗಳೂರಿನಲ್ಲಿ ‘ವೆಲ್‌ಕಮ್ ಇಂಡಿಯಾ’ ಶೀರ್ಷಿಕೆಯ ರೋಡ್‌ಶೋಗಳನ್ನು ಮಾಲ್ಡೀವ್ಸ್‌ ನಡೆಸುತ್ತಿದೆ.

ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರು ಮುಂದಿನ ವಾರಾಂತ್ಯದಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದಾರೆ. “ಜೈಶಂಕರ್ ಅವರು ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮದ್ ಮುಯಿಜ್ಜು ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಅಲ್ಲದೆ, ಭಾರತದ ಬೆಂಬಲದೊಂದಿಗೆ ಕೈಗೊಳ್ಳಲಾಗುತ್ತಿರುವ ಮೂರು ಯೋಜನೆಗಳನ್ನು (ಉತ್ತರ ಹನಿಮಾಧುದಲ್ಲಿ ವಿಮಾನ ನಿಲ್ದಾಣ ಯೋಜನೆ, ಗ್ಯಾನ್‌ನಲ್ಲಿ ವಿಮಾನ ನಿಲ್ದಾಣ ಯೋಜನೆ ಮತ್ತು ಗ್ರೇಟರ್ ಮ್ಯಾಲೆ ಪ್ರದೇಶದ ಸೇತುವೆ ಸಂಪರ್ಕ) ಜೈಶಂಕರ್ ಪರಿಶೀಲಿಸಲಿದ್ದಾರೆ” ಎಂದು ಮೂಲಗಳು ತಿಳಿಸಿವೆ.

Advertisements

ಮಾಲ್ಡೀವಿಯನ್ ಧೋರಣೆಯಲ್ಲಿನ ಬದಲಾವಣೆಯು ಪ್ರಾಥಮಿಕವಾಗಿ ಆರ್ಥಿಕ ಕಾರಣಗಳಿಂದಾಗಿದೆ. ಮಾಲ್ಡೀವ್ಸ್‌ಗೆ ಭಾರತೀಯ ಪ್ರವಾಸಿಗರ ಭೇಟಿಯು ಕಡಿಮೆಯಾಗಿದೆ.

ಮುಯಿಝು ಅವರು ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ದಿನವೇ ಭಾರತೀಯ ಸೈನಿಕರನ್ನು ತಮ್ಮ ದೇಶದಿಂದ ಹೊರಕ್ಕೆ ಕಳುಹಿಸುವುದಾಗಿ ಹೇಳಿದ್ದರು. ಮಾಲ್ಡೀವ್ಸ್‌ನಲ್ಲಿ 88 ಭಾರತೀಯ ಸೈನಿಕರಿದ್ದರು. ಅವರು ಎರಡು ಡಾರ್ನಿಯರ್ ವಿಮಾನ ಮತ್ತು ಒಂದು ಹೆಲಿಕಾಪ್ಟರ್‌ಅನ್ನು ನಿರ್ವಹಿಸುತ್ತಿದ್ದರು. ಈಗ ಸೇನಾ ಸಿಬ್ಬಂದಿಯ ಬದಲಾಗಿ, ಭಾರತದ ನಾಗರಿಕರು ಅವುಗಳನ್ನು ನಿರ್ವಹಿಸುತ್ತಿದ್ದಾರೆ.

ಮಾಲ್ಡೀವ್ಸ್‌ನಲ್ಲಿ ಪ್ರವಾಸೋದ್ಯಮಕ್ಕೆ ಕೊಡುಗೆ ನೀಡುವ ಪ್ರಮುಖ ದೇಶ ಭಾರತವಾಗಿದೆ. ಆದರೆ, ಕಳೆದ ವರ್ಷ ಮಾಲ್ಡೀವ್ಸ್ ಶಾಸಕರೊಬ್ಬರು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ನಂತರ ಕೆಲ ಭಾರತೀಯರು ‘ಬಾಯ್‌ಕಾಟ್‌ ಮಾಲ್ಡೀವ್ಸ್’ ಅಭಿಯಾನ ಆರಂಭಿಸಿದ್ದರು. 2024ರ ಜೂನ್ ಹೊತ್ತಿಗೆ, ಸುಮಾರು 63,451 ಪ್ರವಾಸಿಗರು ಆ ದೇಶಕ್ಕೆ ಭೇಟಿ ನೀಡಿದ್ದಾರೆ. ಇದು ಸಾಮಾನ್ಯವಾಗಿ ಆ ದೇಶಕ್ಕೆ ಭೇಟಿ ನೀಡುವ ಭಾರತೀಯರ ಪೈಕಿ ಕೇವಲ ಸುಮಾರು 6.2% ಆಗಿದೆ.

ಹೀಗಾಗಿ, ಇದೀಗ ಕುತೂಹಲಕಾರಿಯಾಗಿ, ಮಾಲ್ಡೀವಿಯನ್ನರು ಭಾರತೀಯ ಪ್ರವಾಸಿಗರನ್ನು ಓಲೈಸುತ್ತಿದ್ದಾರೆ. ‘ವೆಲ್‌ಕಮ್ ಇಂಡಿಯಾ’ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X