ದುಬೈನಲ್ಲಿದ್ದ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ.ಸಯ್ಯದ್ ಖಲೀಲ್‌ ನಿಧನ

Date:

Advertisements

ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ. ಎಸ್ ಎಂ ಸಯ್ಯದ್ ಖಲೀಲ್ ಬುಧವಾರ ತಡರಾತ್ರಿ ದುಬೈಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಭಟ್ಕಳದ ಪ್ರಪ್ರಥಮ ಚಾರ್ಟರ್ಡ್ಅಕೌಂಟೆಂಟ್‌ಗಳಲ್ಲಿ ಒಬ್ಬರಾದ ಸಯ್ಯದ್ ಖಲೀಲ್ ಅವರು ‘ ಸಿ ಎ ಖಲೀಲ್ ‘ ಎಂದೇ ಚಿರಪರಿಚಿತರಾಗಿದ್ದರು. ದುಬೈನಲ್ಲಿ ವಾಸವಿದ್ದ ಅವರು, ಖ್ಯಾತ ಅನಿವಾಸಿ ಕನ್ನಡಿಗರಲ್ಲೊಬ್ಬರಾಗಿ ಗುರುತಿಸಿಕೊಂಡಿದ್ದರು.

“ಬುಧವಾರ ತಡರಾತ್ರಿ 1.30 ರ ಸುಮಾರಿಗೆ ನಮ್ಮ ತಂದೆ ಇಹಲೋಕ ತ್ಯಜಿಸಿದ್ದಾರೆ. ಗುರುವಾರ ಮಗ್ರಿಬ್(ಸಂಜೆ) ನಮಾಝಿನ ನಂತರ ಅಂತಿಮ ವಿಧಿವಿಧಾನಗಳನ್ನು ನಡೆಸಲಾಗುವುದು” ಎಂದು ಸಯ್ಯದ್ ಖಲೀಲ್ ಅವರ ಪುತ್ರ ಎಸ್ ಎಂ ಸಯ್ಯದ್ ರಯೀಸ್ ಖಲೀಲ್ ಮಾಹಿತಿ ನೀಡಿದ್ದಾರೆ.

Advertisements

ದುಬೈ ಸಹಿತ ಗಲ್ಫ್ ದೇಶಗಳಲ್ಲಿ ಕನ್ನಡ ಹಾಗೂ ಕೊಂಕಣಿ ಭಾಷೆ ಹಾಗೂ ಸಂಸ್ಕೃತಿಯ ಕಂಪು ಹರಡುವಲ್ಲಿ ಮಹತ್ವದ ಕೊಡುಗೆ ನೀಡಿದವರು. ನೂರಾರು ಯುವಜನರಿಗೆ ಉದ್ಯೋಗ ಪಡೆಯಲು ನೆರವಾದವರು. ಭಟ್ಕಳ, ಮಂಗಳೂರು ಸಹಿತ ಹತ್ತಾರು ಕಡೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸಂಘ ಸಂಸ್ಥೆಗಳಿಗೆ ಪೋಷಕರಾಗಿ, ಪದಾಧಿಕಾರಿಯಾಗಿ ಆಸರೆಯಾಗಿ ನಿಂತಿದ್ದರು.

1002426589

ಚಾರ್ಟರ್ಡ್ ಅಕೌಂಟೆಂಟ್ ಪದವಿ ಪಡೆದ ಬಳಿಕ ಭಾರತದಲ್ಲಿ ಕೆಲ ಸಮಯ ಮಹೀಂದ್ರ ಕಂಪೆನಿಯಲ್ಲಿ ಸೇವೆ ಸಲ್ಲಿಸಿದ್ದ ಎಸ್ ಎಂ ಖಲೀಲ್ ಅವರು, 1978 ರಲ್ಲಿ ದುಬೈಗೆ ಹೋಗಿದ್ದರು. ಅಲ್ಲಿ ಅವರು ಪ್ರತಿಷ್ಠಿತ ಗಲದಾರಿ ಸಮೂಹ ಸಂಸ್ಥೆಗಳಲ್ಲಿ ಉದ್ಯೋಗಕ್ಕೆ ಸೇರಿ ಅಲ್ಲೇ ದಶಕಗಳ ಕಾಲ ಸೇವೆ ಸಲ್ಲಿಸಿ ಅತ್ಯುನ್ನತ ಹುದ್ದೆಗೆ ತಲುಪಿ ಆ ಸಮೂಹದ ಅಭಿವೃದ್ಧಿಗೆ ನಿರ್ಣಾಯಕ ಕೊಡುಗೆ ನೀಡಿದವರು. ಬಳಿಕ ತಮ್ಮ ಸ್ವಂತ ಸಂಸ್ಥೆ ಕೆ & ಕೆ ಎಂಟರ್ ಪ್ರೈಸಸ್ ಸ್ಥಾಪಿಸಿದ್ದರು.

ಭಟ್ಕಳದ ಅಂಜುಮನ್ ಹಾಮಿ ಎ ಮುಸ್ಲಿಮೀನ್, ರಾಬಿತಾ ಸೊಸೈಟಿ ಸಹಿತ ಹಲವಾರು ಸಂಘ ಸಂಸ್ಥೆಗಳ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಹತ್ತಾರು ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ದೇಶದ ಖ್ಯಾತ ರಾಜಕೀಯ, ಧಾರ್ಮಿಕ ನಾಯಕರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದರು.

ಡಾ ಎಸ್ ಎಂ ಸೈಯದ್ ಖಲೀಲ್ ಅವರು 2022ರಲ್ಲಿ ಯುಎಇಯ 100 ಬುದ್ಧಿವಂತ ವ್ಯಕ್ತಿಗಳ ಪಟ್ಟಿಯಲ್ಲಿ ಹೆಸರು ಗಿಟ್ಟಿಸಿಕೊಂಡಿದ್ದರು.

ದುಬೈನಿಂದ ಇಂಗ್ಲಿಷ್ ಮತ್ತು ಅರೇಬಿಕ್ ಭಾಷೆಗಳಲ್ಲಿ ಪ್ರಕಟವಾಗುತ್ತಿರುವ ‘ಅರೇಬಿಯನ್ ಬ್ಯುಸಿನೆಸ್’ ಎಂಬ ಸಾಪ್ತಾಹಿಕವು ‘ಯುಎಇಯಲ್ಲಿನ 100 ಬುದ್ಧಿವಂತ ಜನರು(The 100 smartest people in the UAE) ಎಂಬ ವಿಶೇಷ ಸಂಚಿಕೆಯನ್ನು ಹೊರತಂದಿತ್ತು. ಈ ಪಟ್ಟಿಯಲ್ಲಿ ಡಾ ಸೈಯದ್ ಖಲೀಲುರ್ರಹ್ಮಾನ್ ಅವರ ಹೆಸರನ್ನು ಉಲ್ಲೇಖಿಸಿದ್ದರಿಂದ ನಮ್ಮ ದೇಶಕ್ಕೆ ಹೆಸರು ತಂದುಕೊಟ್ಟಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X