ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಭೂಕಂಪ: ದೆಹಲಿಯಲ್ಲಿ ಕಂಪಿಸಿದ ಭೂಮಿ

Date:

Advertisements

ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ ವರದಿ ಮಾಡಿದೆ.

ಬಾಗ್ಲಾನ್‌ನಿಂದ ಪೂರ್ವಕ್ಕೆ 164 ಕಿಮೀ ದೂರದಲ್ಲಿ ಹಾಗೂ ಭೂಮಿಯ‌ ಮೇಲ್ಮೈನಿಂದ 121 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಇಎಂಎಸ್‌ಸಿ ಮೊದಲು ಭೂಕಂಪದ ತೀವ್ರತೆಯನ್ನು 6.4 ತೀವ್ರತೆ ಎಂದು ವರದಿ ಮಾಡಿತ್ತು. ಬಳಿಕ ಪರಿಷ್ಕರಿಸಿ 5.6 ಎಂದು ಉಲ್ಲೇಖಿಸಿದೆ. ಸ್ಥಳೀಯ ಅಧಿಕಾರಿಗಳು ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದಾರೆ. ಹಿಂದೂ ಕುಶ್ ಪ್ರದೇಶವು ಟೆಕ್ಟೋನಿಕ್ ಪ್ಲೇಟ್ ಗಡಿಗಳಲ್ಲಿ ಇರುವುದರಿಂದ ಆಗಾಗ್ಗೆ ಭೂಕಂಪನ ಸಂಭವಿಸುತ್ತಿರುತ್ತದೆ.

ಇದರ ಪರಿಣಾಮ ದೆಹಲಿ ಮತ್ತು ಎನ್‌ಸಿಆರ್ ಪ್ರದೇಶ ಸೇರಿದಂತೆ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ನಗರವೋ-ನರಕವೋ, ಕೇಳುವವರಾರು?

ಸದ್ಯ ಹೆಚ್ಚಿನ ಹಾನಿಯಾಗಲಿ, ಸಾವುನೋವುಗಳಾಗಲಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಹಲವರು ಇದರ ವಿಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಿಂಡಾನಾವೊ ದ್ವೀಪದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಮೈತುಮ್ ಪಟ್ಟಣದ ನೈಋತ್ಯಕ್ಕೆ 43 ಕಿ.ಮೀ. ದೂರದಲ್ಲಿ ಭೂಕಂಪನವಾಗಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ, ಯಾವುದೇ ದೊಡ್ಡ ಹಾನಿ ಅಥವಾ ಸಾವುನೋವುಗಳು ಸಂಭವಿಸಿಲ್ಲ.

ಕಳೆದ ಎರಡು ದಿನಗಳಲ್ಲಿ ತಜಕಿಸ್ತಾನದಲ್ಲಿ ಮೂರು ಭೂಕಂಪಗಳು ಸಂಭವಿಸಿವೆ. ಅಲ್ಲದೆ ವರ್ಷದ ಆರಂಭದಲ್ಲಿ ಭೂಕಂಪದಿಂದಾಗಿ ಟಿಬೆಟ್‌ನಲ್ಲಿ ವಿನಾಶಕಾರಿ ಪರಿಸ್ಥಿತಿ ಉದ್ಭವಿಸಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X