ಇಸ್ರೇಲ್ ವಿರುದ್ಧದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಹಮಾಸ್: ನೆತನ್ಯಾಹು ಸರ್ಕಾರದ ಮೇಲೆ ಒತ್ತಡ

Date:

Advertisements

2023ರ ಅಕ್ಟೋಬರ್‌ ತಿಂಗಳಿನಿಂದ ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ವಿರಾಮ ಹಾಕಲು ಹಮಾಸ್ ಬಯಸಿರುವುದಾಗಿ ‘ಅಲ್-ಜಝೀರಾ’ ವರದಿ ಮಾಡಿದೆ.

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರು ಕತಾರ್ ಮತ್ತು ಈಜಿಪ್ಟ್ ಮಧ್ಯ ಪ್ರವೇಶದ ಬಳಿಕ ಕದನ ವಿರಾಮದ ಪ್ರಸ್ತಾಪವನ್ನು ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ.

ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ ಸೂಚಿಸಿದರೆ, ತಮ್ಮ ಬಳಿಯಲ್ಲಿರುವ ಎಲ್ಲ ಒತ್ತೆಯಾಳು ಇಸ್ರೇಲ್ ಪ್ರಜೆಗಳನ್ನು ಬಿಡುಗಡೆಗೊಳಿಸುವುದಾಗಿಯೂ ಕೂಡ ತಿಳಿಸಿದೆ.

Advertisements

“ಆಕ್ರಮಣ ಸನ್ನಿಹಿತವಾಗಿದೆ, ತಕ್ಷಣ ಹೊರಡಿ” ಎಂದು ರಫಾ ನಿವಾಸಿಗಳಿಗೆ ಇಸ್ರೇಲ್ ಸೇನೆ ಸೂಚನೆ ನೀಡಿದ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವಂತೆ ಇಸ್ರೇಲ್‌ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ನಡುವೆಯೇ ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವ ವಿಚಾರ ತಿಳಿಯುತ್ತಿದ್ದಂತೆಯೇ, ನೂರಾರು ಮಂದಿ ಪ್ರತಿಭಟನೆಗೆ ಸೇರಿಕೊಂಡಿದ್ದು, ಇಸ್ರೇಲ್ ಕೂಡ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವಂತೆ ಒತ್ತಾಯಿಸುತ್ತಿದ್ದಾರೆ.

“ಒಂದು ವೇಳೆ ಬೆಂಜಮಿನ್ ನೆತನ್ಯಾಹು ಸರ್ಕಾರವು ಒಪ್ಪಿಗೆ ಸೂಚಿಸದೆ ಯುದ್ಧ ಮುಂದುವರಿಸಿದರೆ, ನಮ್ಮವರ ಪ್ರಾಣ ಹೋದಲ್ಲಿ ನೀವೇ ಜವಾಬ್ದಾರರು. ಒಂದು ವೇಳೆ ಆ ರೀತಿ ನಡೆದಲ್ಲಿ ದೇಶದಲ್ಲಿ ಹೋರಾಟ ಮತ್ತಷ್ಟು ಹೆಚ್ಚಲಿದ್ದು, ಕಿಚ್ಚು ಹಚ್ಚಲಿದ್ದೇವೆ” ಎಂದು ಇಸ್ರೇಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

“ಹಮಾಸ್ ಕದನ ವಿರಾಮ ಪ್ರಸ್ತಾಪಕ್ಕೆ ಈವರೆಗೆ ಇಸ್ರೇಲ್ ಯಾವುದೇ ತೀರ್ಮಾನ ಪ್ರಕಟಿಸಿಲ್ಲ. ಆದರೆ ಈ ಬಗ್ಗೆ ತುರ್ತು ಸಭೆ ನಡೆಸಿ, ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ” ಎಂದು ಇಸ್ರೇಲ್‌ನ ಚಾನೆಲ್ 12 ವರದಿ ಮಾಡಿದ್ದನ್ನು ಅಲ್-ಜಝೀರಾ ಉಲ್ಲೇಖಿಸಿದೆ. ಈ ನಡುವೆ ಹಮಾಸ್, “ಚೆಂಡು ನಿಮ್ಮ ಅಂಗಳದಲ್ಲಿದೆ. ನಿಮ್ಮ ತೀರ್ಮಾನ ಪ್ರಕಟಿಸಿ” ಎಂದು ಇಸ್ರೇಲ್‌ಗೆ ತಿಳಿಸಿದೆ.

ಗಾಝಾದಲ್ಲಿ ಜನರಿಂದ ಸಂಭ್ರಮಾಚರಣೆ

ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಗಾಝಾ ಹಾಗೂ ರಫಾ ಗಡಿಗಳಲ್ಲಿ ಜನರು ರಸ್ತೆಗೆ ಇಳಿದಿದ್ದು, ಸಂಭ್ರಮಾಚರಣೆ ಮಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

2023ರ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್‌ನ ಮೇಲೆ ಅನಿರೀಕ್ಷಿತ ರಾಕೆಟ್ ದಾಳಿ ನಡೆಸಿದ ನಂತರ ಹಮಾಸ್ ವಿರುದ್ಧ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರವು ಯುದ್ಧ ಘೋಷಣೆ ಮಾಡಿತ್ತು. ಈ ಯುದ್ಧದಲ್ಲಿ ಈವರೆಗೆ ಲಕ್ಷಾಂತರ ಮಂದಿ ನೆಲೆ ಕಳೆದುಕೊಂಡಿದ್ದು, ಲಕ್ಷಗಟ್ಟಲೆ ಜನ ಪ್ರಾಣ ಕಳೆದುಕೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X