ಟ್ರಂಪ್ ಆಡಳಿತದ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ ಹಾರ್ವರ್ಡ್ ವಿವಿ

Date:

Advertisements

ಅನುದಾನ ಸ್ಥಗಿತ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇತೃತ್ವದ ಆಡಳಿತ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ನಡುವೆ ಸಂಘರ್ಷ ನಡೆಯುತ್ತಿದೆ. ಇದೀಗ, ಸಂಘರ್ಷವು ನ್ಯಾಯಾಲಯದ ಕಟಕಟೆಗೆ ಬಂದು ನಿಂತಿದೆ. ಟ್ರಂಪ್‌ ಆಡಳಿತದ ವಿರುದ್ಧ ಹಾರ್ವರ್ಡ್‌ ವಿಶ್ವವಿದ್ಯಾಲಯ ಮೊಕದಮೆ ದಾಖಲಿಸಿದೆ.

ವಿಶ್ವವಿದ್ಯಾಲಯದ ಕ್ಯಾಪಂಸ್‌ನಲ್ಲಿ ಕ್ರಿಯಾಶೀಲನೆಯನ್ನು ಮೊಟಗುಗೊಳಿಸಲು ಟ್ರಂಪ್‌ ಆಡಳಿತ ಹೇಳುತ್ತಿದೆ. ಟ್ರಂಪ್ ಅವರ ನಿರ್ದೇಶನವನ್ನು ಜಾರಿಗೊಳಿಸಲು ನಿರಾಕರಿಸಿದ್ದಕ್ಕಾಗಿ, ವಿಶ್ವವಿದ್ಯಾಲಯಕ್ಕೆ ಬರಬೇಕಿದ್ದ ಅನುದಾನದಲ್ಲಿ 2.2 ಶತಕೋಟಿ ಡಾಲರ್‌ಅನ್ನು ಸ್ಥಗಿತಗೊಳಿಸಿದೆ ಎಂದು ವಿಶ್ವವಿದ್ಯಾಲಯ ಆರೋಪಿಸಿದೆ. ಪೂರ್ಣ ಅನುದಾನದ ಬಿಡುಗಡೆಗಾಗಿ ಮ್ಯಾಸಚೂಸೆಟ್ಸ್ ನ್ಯಾಯಾಲಯ ಮೊಕದಮೆ ಹೂಡಿದೆ.

“ಟ್ರಂಪ್‌ ಆಡಳಿತವು ಶಿಕ್ಷಣಿಕ ನಿರ್ಧಾರಗಳ ಮೇಲೆ ನಿಯಂತ್ರಣ ಸಾಧಿಸಲು ಹವಣಿಸುತ್ತಿದೆ. ಅದಕ್ಕಾಗಿ ಫೆಡರಲ್ ನಿಧಿಯನ್ನು ತಡೆಹಿಡಿದಿದೆ. ಕೇವಲ ಹಾರ್ವರ್ಡ್‌ ವಿಶ್ವವಿದ್ಯಾಲಯ ಮಾತ್ರವಲ್ಲ, ಹಲವಾರು ಶಿಕ್ಷಣ ಸಂಸ್ಥೆಗಳನ್ನು ಟ್ರಂಪ್‌ ಆಡಳಿತ ಗುರಿಯಾಗಿಸಿಕೊಂಡಿದೆ. ಟ್ರಂಪ್ ಅವರ ಕ್ರಮಗಳು ಏಕಪಕ್ಷೀಯವಾಗಿವೆ. ಫೆಡರಲ್ ಕಾನೂನುಗಳು ಮತ್ತು ನಿಯಮಗಳನ್ನು ಉಲ್ಲಂಘಿಸಿವೆ” ಎಂದು ಆರೋಪಿಸಿದೆ.

Advertisements

“ಶ್ವೇತಭವನವು ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಹಲವಾರು ನಿಯಮಗಳನ್ನು ಹೊರಡಿಸಿದೆ. ಅವೆಲ್ಲವೂ ವಿಶ್ವವಿದ್ಯಾಲಯದ ಕ್ಯಾಂಪಸ್‌ಗಳಲ್ಲಿ ಯೆಹೂದ್ಯ ವಿರೋಧಿ ಪ್ರತಿಭಟನೆಗಳನ್ನು ನಡೆಸುವುದಕ್ಕೆ ಸಂಬಂಧಿಸಿವೆ. ಆದರೆ, ಇಂತಹ ಪ್ರಚೋದನೆಗಳನ್ನು ವಿಶ್ವವಿದ್ಯಾನಿಲಯದ ಅಧ್ಯಕ್ಷ ಅಲನ್ ಗಾರ್ಬರ್ ವಿರೋಧಿಸುತ್ತಾರೆ” ಎಂದು ವಿಶ್ವವಿದ್ಯಾಲಯವು ಹೇಳಿದೆ.

“ಶ್ವೇತಭವನದ ಬೇಡಿಕೆಗಳಿಗೆ ನಾವು ಮಣಿಯುವುದಿಲ್ಲ. ಟ್ರಂಪ್‌ ಆಡಳಿತದ ಬೇಡಿಕೆಗಳನ್ನು ಸಾರ್ವಜನಿಕವಾಗಿ ತಿರಸ್ಕರಿಸಿದ್ದೇವೆ. ಹೀಗಾಗಿ, ಟ್ರಂಪ್ ಆಡಳಿತವು ಅನುದಾನ ಕಡಿತದ ಬೆದರಿಕೆ ಹಾಕುತ್ತಿದೆ” ಎಂದು ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X