ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ: ಬ್ರಿಟನ್ ಉದ್ಯಮಿಗಳಾದ ಹಿಂದೂಜಾ ಸಹೋದರರಿಗೆ 4 ವರ್ಷ ಜೈಲು

Date:

Advertisements

ಸ್ವಿಟ್ಜರ್‌ಲ್ಯಾಂಡ್‌ನ ಜೆನಿವಾ ಮ್ಯಾನ್ಷನ್‌ನಲ್ಲಿ ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ ಮಾಡಿದ ಆರೋಪದ ಮೇಲೆ ಇಂಗ್ಲೆಂಡಿನ ಶ್ರೀಮಂತ ಉದ್ಯಮಿ ಕುಟುಂಬ ಹಿಂದೂಜಾದ ನಾಲ್ವರು ಸದಸ್ಯರಿಗೆ ಸ್ವಿಸ್‌ ನ್ಯಾಯಾಲಯ 4 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ತೀರ್ಪು ನಿಡುವ ಸಂದರ್ಭದಲ್ಲಿ ಹಿಂದೂಜಾ ಸಹೋದರರು ಕೋರ್ಟಿನಲ್ಲಿರಲಿಲ್ಲ. 47 ಬಿಲಿಯನ್‌ ಡಾಲರ್‌ ಆಸ್ತಿ ಹೊಂದಿರುವ ಹಿಂದೂಜಾ ಕುಟುಂಬದ ಸಹೋದರರಿಗೆ ಮಾನವ ಕಳ್ಳ ಸಾಗಣೆ ಆರೋಪದಿಂದ ಮುಕ್ತಗೊಳಿಸಲಾಗಿದ್ದು, ಇತರ ಆರೋಪಗಳಲ್ಲಿ ಶಿಕ್ಷೆ ನೀಡಲಾಗಿದೆ.

ಪ್ರಕಾಶ್ ಹಿಂದೂಜಾ ಹಾಗೂ ಆತನ ಪತ್ನಿ ಕಮಲಾ ಹಿಂದೂಜಾ ಅವರಿಗೆ 4 ವರ್ಷ 6 ತಿಂಗಳು, ಮತ್ತೊಬ್ಬ ಪುತ್ರ ಅಜಯ್‌ ಹಾಗೂ ಈತನ ಪತ್ನಿ ನಮ್ರತಾ ಅವರಿಗೆ ನಾಲ್ಕು ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಅನುಮತಿ ನೀಡದ ಕೇಂದ್ರ ಗೃಹ ಇಲಾಖೆ: ಭಾರತ ತೊರೆದ ಫ್ರೆಂಚ್ ಪತ್ರಕರ್ತ

ಕೆಲಸಗಾರರನ್ನು ಭಾರತದಿಂದ ಕರೆತಂದಿದ್ದ ಹಿಂದೂಜಾ ಕುಟುಂಬ ಸ್ವಿಟ್ಜರ್‌ಲ್ಯಾಂಡ್‌ಗೆ ಆಗಮಿಸಿದ ನಂತರ ಅವರ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬ ಆರೋಪ ಕೋರ್ಟಿನಲ್ಲಿ ಸಾಬೀತಾಗಿದೆ.

ಪ್ರಾಸಿಕ್ಯೂಷನ್ ಪರ ವಕೀಲರು ಹಿಂದೂಜಾ ಸಹೋದರರು ಸಿಬ್ಬಂದಿಗೆ ಅತ್ಯಲ್ಪ ವೇತನ ನೀಡಿದ್ದು, ಅವರು ತಮ್ಮ ಮನೆಗಳಿಗೆ ಹೋಗಲು ಹೆಚ್ಚು ಸ್ವಾತಂತ್ರ್ಯ ನೀಡಿರಲಿಲ್ಲ ಎಂದು ವಾದಿಸಿದರು.

ಪ್ರಾಸಿಕ್ಯೂಷನ್ ವಾದವನ್ನು ಹಿಂದೂಜಾ ಪರ ವಕೀಲರು ನಿರಾಕರಿಸಿದರೂ ಸಾಕ್ಷ್ಯಗಳ ಮೂಲಕ ಇದು ಸಾಬೀತಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಅಫ್ಘಾನಿಸ್ತಾನ | ಭೀಕರ ಅಪಘಾತ: ಹೊತ್ತಿ ಉರಿದ ಬಸ್, 17 ಮಕ್ಕಳು ಸೇರಿ 71 ಮಂದಿ ದಾರುಣ ಸಾವು

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್...

ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ...

Download Eedina App Android / iOS

X