ಭಾರತ-ಪಾಕ್ ಸಂಘರ್ಷ | ಕರಾಚಿ ಬಂದರಿನ ಮೇಲೆ‌ ಭಾರತೀಯ ನೌಕಾಪಡೆ ದಾಳಿ ಎಂಬ ಸುಳ್ಳು ಸುದ್ದಿ‌ ವೈರಲ್

Date:

Advertisements

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ದಿದೇ-ದಿನೇ ಹೆಚ್ಚುತ್ತಿದೆ. ಎರಡು ರಾಷ್ಟ್ರಗಳ ನಡುವೆ ದಾಳಿ-ಪ್ರತಿದಾಳಿಗಳು ನಡೆಯುತ್ತಿವೆ. ಇದೇ ವೇಳೆ, ಮಾಧ್ಯಮಗಳು ಸೇರಿದಂತೆ ಸಾಮಾಜಿಕ‌ ಜಾಲತಾಣದಲ್ಲಿ ನಕಲಿ ವಿಡಿಯೋಗಳು, ಹಳೆಯ ವಿಡಿಯೋಗಳು ಹಾಗೂ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿವೆ. ಇದೀಗ, ಗುರುವಾರ ರಾತ್ರಿ ಭಾರತೀಯ ನೌಕಾಪಡೆಯು ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ ಎಂಬ ಸುಳ್ಳು ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ.

ಅರಬ್ಬೀ ಸಮುದ್ರದಲ್ಲಿ ನೆಲೆಗೊಂಡಿರುವ ನೌಕಾಪಡೆಯ ಪ್ರಬಲ ಐಎನ್‌ಎಸ್ ವಿಕ್ರಾಂತ್ ಯುದ್ಧ ನೌಕೆಯು ಪಾಕಿಸ್ತಾನದ ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ ಎಂಬ ಶೀರ್ಷಿಕೆ ಜೊತೆಗೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳು ವೈರಲ್‌ ಆಗಿದೆ.

ಆದರೆ, ಕರಾಚಿ ಮೇಲಿನ ದಾಳಿ ಬಗ್ಗೆ ಭಾರತ ಸೇನೆಯಾಗಲೀ ಅಥವಾ ಪಾಕಿಸ್ತಾನವಾಗಲೀ ದೃಢಪಡಿಸಿಲ್ಲ. ಅಧಿಕೃತ ಮಾಹಿತಿಯನ್ನೂ ನೀಡಿಲ್ಲ. ಅಧಿಕೃತ ವರದಿಗಳ ಪ್ರಕಾರ, ಭಾರತೀಯ ನೌಕಾಪಡೆ ಇನ್ನೂ ಯಾವುದೇ ದಾಳಿಯನ್ನು ಪ್ರಾರಂಭಿಸಿಲ್ಲ. ಆದರೆ ಭಾರತವನ್ನು ಸಮುದ್ರದಿಂದ ರಕ್ಷಿಸುತ್ತಿದೆ ಮತ್ತು ಪಾಕಿಸ್ತಾನದ ದಾಳಿಯನ್ನು ಎದುರಿಸಲು ಸಿದ್ಧವಾಗಿದೆ.

Advertisements

ವರದಿಗಳ ಪ್ರಕಾರ, ಕರಾಚಿ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ನಾಗರಿಕರು ತಮ್ಮ ಮನೆಗಳೊಳಗೆ ಇರಬೇಕೆಂದು ಎಚ್ಚರಿಕೆಯ ಸೈರನ್‌ಗಳು ನಿರಂತರವಾಗಿ ಸದ್ದು ಮಾಡುತ್ತಿವೆ.

ಈ ನಡುವೆ, ಗುರುವಾರ ಜಮ್ಮು ಮೇಲೆ ಪಾಕಿಸ್ತಾನ ದಾಳಿ ಮಾಡಿದೆ. ಜಮ್ಮುವಿನ ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಕಡೆಗೆ ಪಾಕಿಸ್ತಾನ ಎಂಟು ಕ್ಷಿಪಣಿಗಳನ್ನು ಹಾರಿಸಿದೆ. ಅವೆಲ್ಲವನ್ನೂ ವಾಯು ರಕ್ಷಣಾ ಘಟಕಗಳು ತಡೆಹಿಡಿದು ನಿರ್ಬಂಧಿಸಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಅಲ್ಲದೆ, ರಾಜಸ್ಥಾನದ ಬಿಕಾನೇರ್ ಮತ್ತು ಪಂಜಾಬ್‌ನ ಜಲಂಧರ್‌ನಲ್ಲಿ ಸಂಪೂರ್ಣ ಬ್ಲಾಕೌಟ್ ಜಾರಿಗೊಳಿಸಲಾಗಿದೆ. ಕಿಶ್ತ್ವಾರ್, ಅಖ್ನೂರ್, ಸಾಂಬಾ, ಅಮೃತಸರದಲ್ಲಿಯೂ ಬ್ಲಾಕೌಟ್ ಜಾರಿಗೊಳಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X