ಭಾರತ-ಪಾಕ್ ಸಂಘರ್ಷ | ಉದ್ವಿಗ್ನತೆ ಶಮನಗೊಳಿಸಲು ಪಾಕ್‌ಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ತಾಕೀತು

Date:

Advertisements

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ನೆರವು ನೀಡುವುದಾಗಿ ಹೇಳಿಕೊಂಡಿದೆ. ಇದೀಗ, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ. ಉದ್ವಿಗ್ನತೆಯನ್ನು ಶಮನಗೊಳಿಸಲು ತಾಕೀತು ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಅಮೆರಿಕ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. “ಭಾರತ ಮತ್ತು ಪಾಕಿಸ್ತಾನ ನಡುವಿನ ಹಗೆತನದಲ್ಲಿ ಉದ್ವಿಗ್ನತೆಯು ನಾಟಕೀಯವಾಗಿ ಏರುತ್ತಿದೆ. ಇದು ಸುಮಾರು ಮೂರು ದಶಕಗಳಲ್ಲಿ ನಂತರದ ಅತ್ಯಂತ ತೀವ್ರವಾದ ಮುಖಾಮುಖಿಯಾಗಿದೆ” ಎಂದು ಹೇಳಿದೆ.

“ಉದ್ವಿಗ್ನತೆಯನ್ನು ಶಮನಗೊಳಿಸಲು ಅಗತ್ಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ಎರಡೂ ದೇಶಗಳ ನಾಯಕರಿಗೆ ಅಮೆರಿಕ ಕಾರ್ಯದರ್ಶಿ ರುಬಿಯೊ ಒತ್ತಾಯಿಸಿದ್ದಾರೆ. ಭವಿಷ್ಯದ ಘರ್ಷಣೆಗಳನ್ನು ತಡೆಗಟ್ಟಲು ರಚನಾತ್ಮಕ ಸಂವಾದವನ್ನು ಪ್ರಾರಂಭಿಸುವಲ್ಲಿ ಅಮೆರಿಕವು ಸಹಾಯ ಮಾಡಲಿದೆ. ಪ್ರಾದೇಶಿಕ ಸ್ಥಿರತೆ ಮತ್ತು ಶಾಂತಿಗಾಗಿ ಅಮೆರಿಕವು ಬದ್ಧತೆಯಿಂದ ಬೆಂಬಲಿಸುವ ಇಚ್ಛೆಯನ್ನು ಹೊಂದಿರುವುದಾಗಿ ರುಬಿಯೋ ಹೇಳಿದ್ದಾರೆ” ಎಂದು ಇಲಾಖೆ ಹೇಳಿದೆ.

Advertisements

ಪಾಕಿಸ್ತಾನವು ಶನಿವಾರ ಮುಂಜಾನೆ ಭಾರತದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಜಮ್ಮು ಮತ್ತು ಕಾಶ್ಮೀರದ ಉತ್ತರ ಭಾಗದ ಕ್ಷಿಪಣಿ ಸಂಗ್ರಹಣಾ ನೆಲೆಗಳ ಮೇಲೆ ದಾಳಿ ನಡೆದಿದೆ. ದಾಳಿಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X