ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದ ಭಾರತ

Date:

Advertisements

ಭಾರತ ಹಾಗೂ ಕೆನಡಾ ನಡುವೆ ರಾಜತಾಂತ್ರಿಕ ವಿವಾದ ಏರ್ಪಟ್ಟ ಎರಡು ತಿಂಗಳ ನಂತರ ಕೆಂದ್ರ ಸರ್ಕಾರವು ಕೆನಡಾ ಪ್ರಜೆಗಳಿಗೆ ಇ – ವೀಸಾ ಸೇವೆಗಳನ್ನು ಪುನರಾರಂಭಿಸಿದೆ.

ಎರಡು ತಿಂಗಳ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಭಾರತದ ಮೇಲೆ ಆರೋಪ ಮಾಡಿದ ನಂತರ ಎರಡು ದೇಶಗಳ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಉಭಯ ದೇಶಗಳಿಂದ ರಾಯಭಾರಿಗಳು ಹಾಗೂ ಸಿಬ್ಬಂದಿಗಳನ್ನು ವಾಪಸ್‌ ಕರೆಸಿಕೊಳ್ಳಲಾಗಿತ್ತು.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18ರಂದು, ‘ಕೆನಡಾದ ಭದ್ರತಾ ಏಜೆನ್ಸಿಗಳು ಭಾರತೀಯ ಸರ್ಕಾರಿ ಏಜೆಂಟರು ಮತ್ತು ನಿಜ್ಜರ್ ಸಾವಿನ ನಡುವಿನ ಸಂಬಂಧವನ್ನು ತನಿಖೆ ನಡೆಸುತ್ತಿವೆ’ ಎಂದು ಹೇಳಿದರು. ಅಲ್ಲದೆ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಅವರು ಹೇಳಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ದೇವಸ್ಥಾನಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗಾವಕಾಶವಿಲ್ಲ: ಆಂಧ್ರ ಹೈಕೋರ್ಟ್

ಟ್ರುಡೊ ಹೇಳಿಕೆಯ ನಂತರ, ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಪ್ರಾರಂಭವಾಯಿತು. ಭಾರತದ ಸೂಚನೆಗಳನ್ನು ಅನುಸರಿಸಿ, ಕೆನಡಾವು 41 ಕೆನಡಾದ ರಾಜತಾಂತ್ರಿಕರನ್ನು ನವದೆಹಲಿಯಿಂದ ತಮ್ಮ ದೇಶಕ್ಕೆ ಕರೆಸಿಕೊಂಡಿತ್ತು.

ಜಸ್ಟಿನ್ ಟ್ರುಡೊ ಆರೋಪವನ್ನು ನಿರಾಕರಿಸಿದ್ದ ವಿದೇಶಾಂಗ ಇಲಾಖೆಯ ಅಧಿಕಾರಿಗಳು, ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳು ಭಾಗಿಯಾಗಿಲ್ಲ. ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದ್ದರೂ, ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರ ಒಪ್ಪಂದವನ್ನು ಮಾತುಕತೆ ನಡೆಸಲು ಕೆನಡಾದೊಂದಿಗೆ ಭಾರತವು ಚರ್ಚೆಗೆ ಮರಳಲು ಬಯಸುತ್ತದೆ ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X