ರಷ್ಯಾ ಉಕ್ರೇನ್ ಯುದ್ಧ: ರಷ್ಯಾ ಸೇನಾ ಶಿಬಿರದಲ್ಲಿದ್ದ ಭಾರತೀಯ ಶೆಲ್ ದಾಳಿಗೆ ಬಲಿ

Date:

Advertisements

ರಷ್ಯಾ ಉಕ್ರೇನ್ ಯುದ್ಧದ ನಡುವೆ ರಷ್ಯಾದ ಮಿಲಿಟರಿ ಶಿಬಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯರೊಬ್ಬರು ಬಲಿಯಾಗಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

36 ವರ್ಷದ ಸಂದೀಪ್ ತ್ರಿಶೂರ್ ಜಿಲ್ಲೆಯ ತ್ರಿಕ್ಕೂರ್ ಪಂಚಾಯತ್‌ನ ನಾಯರಂಗಡಿ ಮೂಲದವರಾಗಿದ್ದರು. ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ಅವರು ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡಲು ಏಪ್ರಿಲ್‌ನಲ್ಲಿ ರಷ್ಯಾಕ್ಕೆ ತೆರಳಿದ್ದರು.

“ಎರಡು ದಿನಗಳ ಹಿಂದೆ, ತ್ರಿಶೂರ್‌ನ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ಮಲಯಾಳಿ ಸಂಘದಿಂದ ನಮಗೆ ಸಂದೇಶ ಬಂದಿತ್ತು. ಈ ರಷ್ಯಾದ ಮಿಲಿಟರಿ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವುದಾಗಿ ಉಲ್ಲೇಖಿಸಲಾಗಿತ್ತು. ಮೃತ ವ್ಯಕ್ತಿಯನ್ನು ಗುರುತಿಸಲು ಸಂಘವು ಬಯಸಿತ್ತು. ನಂತರ, ನಾವು ವಿವರಗಳನ್ನು ಪರಿಶೀಲಿಸಿದ್ದೇವೆ ಮತ್ತು ಅದು ಸಂದೀಪ್ ಎಂದು ತಿಳಿಯಿತು” ಎಂದು ಸಂದೀಪ್ ಅವರ ಸೋದರಸಂಬಂಧಿ ಸರಣ್ ಹೇಳಿದರು.

Advertisements

ಇದನ್ನು ಓದಿದ್ದೀರಾ? ಉಕ್ರೇನ್ ಯುದ್ಧ | ರಷ್ಯಾ ಸೇನೆಯಲ್ಲಿದ್ದ ಭಾರತೀಯ ಯುವಕ ಸಾವು: ಬಲವಂತದ ನೇಮಕಾತಿ ಆರೋಪ

ಇತ್ತೀಚೆಗೆ ಸಂದೀಪ್ ಜತೆ ಸಂಪರ್ಕ ಕಳೆದುಕೊಂಡಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. “ಸಂದೀಪ್ ಮಾಸ್ಕೋದಲ್ಲಿ ಉದ್ಯೋಗಿಯಾಗಿದ್ದ. ಒಂದು ತಿಂಗಳ ಸಂಬಳವನ್ನು ಮನೆಗೆ ಕಳುಹಿಸಿದ್ದ. ಒಂದು ತಿಂಗಳ ನಂತರ, ಅಪರೂಪವಾಗಿ ಕುಟುಂಬದ ಸಂಪರ್ಕಕ್ಕೆ ಸಿಗುತ್ತಿದ್ದರು. ಅವರನ್ನು ಮಾಸ್ಕೋದಿಂದ ಹೊರಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿತ್ತು. ಉಕ್ರೇನ್ ಪಡೆಗಳ ದಾಳಿಗೆ ತುತ್ತಾದ ಸೇನಾ ಕ್ಯಾಂಟೀನ್‌ನಲ್ಲಿ ಸಂದೀಪ್ ಕೂಡಾ ಇದ್ದ ಎಂದು ನಂತರ ನಮಗೆ ತಿಳಿಯಿತು” ಎಂದು ಸರನ್ ತಿಳಿಸಿದ್ದಾರೆ.

ಸಂದೀಪ್ ವಿವಾಹಿತರಲ್ಲ. ಅವರು ತನ್ನ ತಂದೆ ಚಂದ್ರನ್ ಮತ್ತು ತಾಯಿ ವಲ್ಸಲಾ ಅವರನ್ನು ಅಗಲಿದ್ದಾರೆ. ಇವರ ತಂದೆ ತಾಯಿ ಇಬ್ಬರೂ ಕೃಷಿ ಕಾರ್ಮಿಕರಾಗಿದ್ದಾರೆ. ಸಂದೀಪ್ ಮೃತದೇಹವನ್ನು ಕೇರಳಕ್ಕೆ ತರಲು ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಮಧ್ಯಸ್ಥಿಕೆಗಾಗಿ ಕುಟುಂಬವು ಕಾಯುತ್ತಿದೆ ಎಂದು ಸರನ್ ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

Download Eedina App Android / iOS

X