ತಾಯಿಗೆ ಅನಾರೋಗ್ಯ: ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ಬೆಂಗಳೂರಿಗೆ ಬರಲು ವಿಸಾ ನಿರಾಕರಣೆ

Date:

Advertisements

ಬೆಂಗಳೂರಿನಲ್ಲಿರುವ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗಲು ಭಾರತ ಸರಕಾರ ವಿಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಹೇಳಿದ್ದಾರೆ.

ಅಮೆರಿಕದಲ್ಲಿ ನೆಲೆಸಿರುವ ಕ್ಷಮಾ ಸಾವಂತ್ ಅವರು 2014 ರಿಂದ 2023ರವರೆಗೆ ಸಿಯಾಟಲ್ ನಗರ ಮಂಡಳಿಯ ಪ್ರತಿನಿಧಿಯಾಗಿ ಚುನಾಯಿತರಾಗಿದ್ದರು. ಅವರು ಸಿಯಾಟಲ್ ನಗರ ಮಂಡಳಿಯಲ್ಲಿ ಮಂಡಿಸಿದ ಜಾತಿ ತಾರತಮ್ಯ ನಿಷೇಧ ನಿರ್ಣಯವನ್ನು ಅಂಗೀಕರಿಸಲಾಗಿತ್ತು. ಇದರೊಂದಿಗೆ 2023 ಫೆಬ್ರವರಿಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಅಮೆರಿಕದ ಮೊದಲ ನಗರ ಎಂಬ ಹೆಗ್ಗಳಿಕೆಗೆ ಸಿಯಾಟಲ್ ಪಾತ್ರವಾಗಿತ್ತು.

ತನ್ನ ವಿಸಾ ನಿರಾಕರಣೆಯನ್ನು ಬಿಜೆಪಿ ಸರಕಾರದ ರಾಜಕೀಯ ಪ್ರತೀಕಾರ ಎಂದು ಸಾವಂತ್ ಹೇಳಿದ್ದಾರೆ. ಭಾರತ ಸರಕಾರದ ಈ ನಡೆಯ ವಿರುದ್ಧ ಪ್ರತಿಭಟಿಸಿ ಅವರು ಅನ್‌ಲೈನ್ ದೂರು ಅಭಿಯಾನ ಆರಂಭಿಸಿದ್ದಾರೆ. ‘‘ಭಾರತಕ್ಕೆ ಪ್ರವೇಶಿಸುವುದನ್ನು ರದ್ದುಗೊಳಿಸುವ ಹಾಗೂ ನಿರಾಕರಿಸುವ ಮೂಲಕ ಮೋದಿ ಇತರ ಹೋರಾಟಗಾರರು ಹಾಗೂ ಪತ್ರಕರ್ತರ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದ್ದಾರೆ. ನನ್ನ 82 ವರ್ಷದ ತಾಯಿಯ ಆರೋಗ್ಯ ತೀವ್ರವಾಗಿ ಕುಸಿಯುತ್ತಿದೆ ಎಂದು ಅವರು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

‘‘ಮಾನವೀಯ ನೀತಿಯನ್ನು ಅನುಸರಿಸುವಂತೆ ನಾವು ಮೋದಿ ಸರಕಾರವನ್ನು ಆಗ್ರಹಿಸುತ್ತೇವೆ. ಕ್ಷಮಾ ಅವರ ತಾಯಿಯನ್ನು ನೋಡಲು ಭಾರತಕ್ಕೆ ಪ್ರಯಾಣಿಸಲು ಸಾಧ್ಯವಾಗುವಂತೆ ಕ್ಷಮಾ ಸಾವಂತ್ ಹಾಗೂ ಅವರ ಪತಿ ಕೆಲ್ವಿನ್ ಪ್ರಿಯೆಸ್ಟ್‌ಗೆ ತುರ್ತಾಗಿ ವಿಸಾ ಮಂಜೂರು ಮಾಡಿ’’ ಆನ್‌ಲೈನ್ ದೂರಿನಲ್ಲಿ ಹೇಳಲಾಗಿದೆ.

‘‘ಅವರ ಅಧಿಕಾರದ ಅವಧಿಯಲ್ಲಿ ಮೋದಿ ಹಾಗೂ ಬಿಜೆಪಿ ಸರಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ (ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಿದ್ದರು. ಅಲ್ಲದೆ, ಮೋದಿ ಅವರ ಕ್ರೂರ ಹಾಗೂ ಶೋಷಕ ನೀತಿಯ ವಿರುದ್ಧದ ರೈತರ ಚಳುವಳಿಗೆ ಬೆಂಬಲ ವ್ಯಕ್ತಪಡಿಸಿದ್ದರು’’ ಎಂದು ದೂರಿನಲ್ಲಿ ಹೇಳಲಾಗಿದೆ.

ಪುಣೆ ಹಾಗೂ ಮುಂಬೈನಲ್ಲಿ ಬಾಲ್ಯ, ಶಿಕ್ಷಣ ಪೂರೈಸಿದ ಕ್ಷಮಾ ವಸಂತ್‌ ಅವರು ಉದ್ಯೋಗದ ನಿಮಿತ್ತ ಅಮೆರಿಕಕ್ಕೆ ತೆರಳಿದ್ದರು.2014 ರಿಂದ ಸಿಯಾಟಲ್ ನಗರ ಮಂಡಳಿಯ ಪ್ರತಿನಿಧಿಯಾಗಿ ಚುನಾಯಿತರಾಗಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X