ಇಸ್ರೇಲ್-ಇರಾನ್‌ ಸಂಘರ್ಷ | ಟೆಹ್ರಾನ್‌ನಲ್ಲಿ ಭಾರತೀಯರು: ತಕ್ಷಣವೇ ರಾಯಭಾರಿ ಕಚೇರಿ ಸಂಪರ್ಕಿಸಲು ಸೂಚನೆ

Date:

Advertisements

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವವರು ನಗರವನ್ನು ತೊರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಕರೆಕೊಟ್ಟಿದ್ದಾರೆ. ಈ ಬೆನ್ನಲ್ಲೇ, ಇಸ್ರೇಲ್‌ ಕೂಡ ಶೀಘ್ರವೇ ಟೆಹ್ರಾನ್ ತೊರೆಯಿರಿ ಎಂದಿದ್ದು, ಟೆಹ್ರಾನ್‌ ಮೇಲೆ ದಾಳಿ ನಡೆಸುವ ಸೂಚನೆ ನೀಡಿದೆ. ಹೀಗಾಗಿ, ಇರಾನ್‌ನ ರಾಜಧಾನಿಯಲ್ಲಿರುವವರು ನಗರವನ್ನು ತೊರೆಯುತ್ತಿದ್ದಾರೆ. ಅಲ್ಲಿ, ಭಾರತೀಯರು ಕೂಡ ಸಿಲುಕಿಕೊಂಡಿದ್ದು, ಅವರೆಲ್ಲರೂ ಭಾರತೀಯ ರಾಯಭಾರಿ ಕಚೇರಿಯನ್ನು ತ್ವರಿತವಾಗಿ ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಟೆಹ್ರಾನ್‌ನಲ್ಲಿರುವ ಎಲ್ಲ ಭಾರತೀಯ ಪ್ರಜೆಗಳು ತಕ್ಷಣವೇ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಬೇಕು. ತಮ್ಮ ಸ್ಥಳ ಮತ್ತು ಸಂಪರ್ಕ ಸಂಖ್ಯೆಗಳನ್ನು ಒದಗಿಸಬೇಕು ಎಂದು ಭಾರತೀಯ ರಾಯಭಾರ ಕಚೇರಿಯು ಮಂಗಳವಾರ ಘೋಷಿಸಿದೆ. ತಮ್ಮಲ್ಲಿರುವ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಂಡು ಟೆಹರಾನ್‌ನಿಂದ ಹೊರಹೋಗಲು ಸಾಧ್ಯವಿರುವವರು ನಗರವನ್ನು ತೊರೆಯಬೇಕು. ಆಗದೇ ಇರುವವರು ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ನೆರವು ಪಡೆಯಬೇಕು ಎಂದು ಸಲಹೆ ನೀಡಿದೆ.

“ಭಾರತೀಯ ಪ್ರಜೆಗಳು ತಕ್ಷಣ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಲು +989010144557; +989128109115; +989128109109, ಟೋಲ್ ಫ್ರೀ ಸಂಖ್ಯೆ, 1800118797, ಅಥವಾ ವಾಟ್ಸ್‌ಆ್ಯಪ್ ಸಂಖ್ಯೆ +91-11-23012113, +91-11-23014104, +91-11-23017905 +91-9968291988 ಹಾಗೂ situationroom@mea.gov.in ಮೂಲಕ ಸಂಪರ್ಕಿಸಬಹುದು ಎಂದು ಸೂಚಿಸಿದೆ.

Advertisements

ಈ ಲೇಖನ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ ಶುರುವಾಗಿದ್ದು ಎಲ್ಲಿಂದ? ಇತಿಹಾಸದ ಹಿನ್ನೋಟ!

ಜೊತೆಗೆ, ಟೆಹರಾನ್‌ನ ತುರ್ತು ಸಹಾಯವಾಣಿ ಸಂಖ್ಯೆ: +98 9128109115, +98 9128109109; ವಾಟ್ಸ್‌ಆ್ಯಪ್ ಸಂಖ್ಯೆ: +98 901044557, +98 9015993320, +91 8086871709, +98 9177699036, +98 9396356649 ಸಂಖ್ಯೆಗಳ ಮೂಲಕವೂ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X