ಐದನೇ ದಿನಕ್ಕೆ ಕಾಲಿಟ್ಟ ಇಸ್ರೇಲ್- ಹಮಸ್ ಸಂಘರ್ಷ: 3600ಕ್ಕೂ ಹೆಚ್ಚು ಸಾವು

Date:

Advertisements

ಐದನೇ ದಿನಕ್ಕೆ ಕಾಲಿಟ್ಟ ಇಸ್ರೇಲ್- ಹಮಸ್ ಹೋರಾಟಗಾರರ ಸಂಘರ್ಷದಲ್ಲಿ ಎರಡೂ ಕಡೆಯ ಸೇನೆಯಿಂದ ಅಂದಾಜು 3,600 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಗಾಜಾಪಟ್ಟಿಯ ಹಮಸ್ ಹೋರಾಟಗಾರರು ನಡೆಸುತ್ತಿರುವ ನಿರಂತರ ದಾಳಿಯಿಂದಾಗಿ ಇದುವರೆಗೆ ಇಸ್ರೇಲ್‌ನಲ್ಲಿ 1,200ಕ್ಕೂ ಅಧಿಕ ಮಂದಿ ಮೃತಪಟ್ಟು, ಸಾವಿರಾರು ಜನ ಗಾಯಗೊಂಡಿದ್ದಾರೆ ಎಂಬುದಾಗಿ ಇಸ್ರೇಲ್‌ ಸೇನೆ ಮಾಹಿತಿ ನೀಡಿದೆ.

ಇಸ್ರೇಲ್‌ ದಾಳಿಯಿಂದ ಗಾಜಾದಲ್ಲಿ 900 ಮಂದಿ ಮೃತಪಟ್ಟರೆ, 4,600 ನಾಗರಿಕರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಆದರೆ, ಮೂಲಗಳ ಪ್ರಕಾರ, ಎರಡೂ ದೇಶದಲ್ಲಿ ಇದಕ್ಕಿಂತ ಹೆಚ್ಚಿನ ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Advertisements

ಗಾಜಾಪಟ್ಟಿ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿರುವ ಕಾರಣ ಸಾವಿನ ಸಂಖ್ಯೆ ದಿಢೀರ್‌ ಏರಿಕೆಯಾಗಿದೆ ಎನ್ನಲಾಗಿದೆ. ಇಸ್ರೇಲ್‌ನಲ್ಲೂ ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ?  ಈ ದಿನ ಸಂಪಾದಕೀಯ | ಅಪಹರಿಸಿರುವ ಪ್ಯಾಲೆಸ್ತೀನ್‌ನನ್ನು ಮರಳಿಸಲಿ ಇಸ್ರೇಲ್

ಗಾಜಾ ಪಟ್ಟಿಯಲ್ಲಿ ವಿದ್ಯುತ್, ಅನಿಲ, ಆಹಾರ ಹಾಗೂ ನೀರಿನ ಸಂಪರ್ಕವನ್ನು ಇಸ್ರೇಲ್ ಕಡಿತಗೊಳಿಸಿದೆ. ಇದರಿಂದಾಗಿ 2 ಲಕ್ಷಕ್ಕೂ ಹೆಚ್ಚು ನಾಗರಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಯುದ್ಧದ ಸಮಯದಲ್ಲಿ ಇಸ್ರೇಲ್‌ ಅಸಹಾಯಕ ಸ್ಥಿತಿಗೆ ತಲುಪುವ ಲಕ್ಷಣಗಳು ಗೋಚರಿಸುತ್ತಿವೆ. ಹಮಸ್‌ ದಾಳಿಗೆ ತತ್ತರಿಸಿರುವ ಯಹೂದಿ ರಾಷ್ಟ್ರವು ಈಗ ಲೆಬನಾನ್‌ ಹಾಗೂ ಸಿರಿಯಾ ದೇಶಗಳನ್ನು ಎದುರಿಸಬೇಕಿದೆ. ಈ ಎರಡೂ ದೇಶಗಳು ಉತ್ತರ ಇಸ್ರೇಲ್‌ನಲ್ಲಿ ಮಂಗಳವಾರ ಕ್ಷಿಪಣಿ ದಾಳಿ ನಡೆಸಿವೆ. ಇದು ಇಸ್ರೇಲ್‌ಅನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

ಇಸ್ರೇಲ್ ರಕ್ಷಣಾ ಪಡೆಗಳನ್ನು ಗುರಿಯಾಗಿಸಿ ಲೆಬನಾನ್‌ನ ಪಶ್ಚಿಮ ಗಲಿಲಿಯಲ್ಲಿ 15 ರಾಕೆಟ್‌ಗಳನ್ನು ಹಾರಿಸಲಾಗಿದೆ.

ಗೋಲನ್ ಹೈಟ್ಸ್‌ ಪ್ರದೇಶದಲ್ಲಿ ಸಿರಿಯಾದಿಂದ ಕೆಲ ರಾಕೆಟ್‌ಗಳನ್ನು ಹಾರಿಸಲಾಗಿದೆ. ಹಲವಾರು ಸ್ಪೋಟಕಗಳು ಇಸ್ರೇಲ್ ಭೂಪ್ರದೇಶವನ್ನು ದಾಟಿ ಬಯಲು ಪ್ರದೇಶಗಳಲ್ಲಿ ಬಿದ್ದಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X