ಗಾಝಾದ ಅತಿದೊಡ್ಡ ಆಸ್ಪತ್ರೆ ಅಲ್-ಶಿಫಾದ ಮೇಲೂ ದಾಳಿ ನಡೆಸಿದ ಇಸ್ರೇಲ್: ನೂರಾರು ಮಂದಿ ಬಲಿ

Date:

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಂದುವರಿದಿರುವ ನಡುವೆಯೇ ಗಾಝಾದ ಪ್ರಮುಖ ಆಸ್ಪತ್ರೆ ಅಲ್-ಶಿಫಾದ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಡೆಸಿದೆ.

ಅಲ್-ಶಿಫಾ ಆಸ್ಪತ್ರೆಯ ಮುಂಭಾಗದಲ್ಲಿ ರೋಗಿಗಳನ್ನು ಚಿಕಿತ್ಸೆಗಾಗಿ ರಫಾ ಕ್ರಾಸಿಂಗ್‌ಗೆ ಕರೆದೊಯ್ಯಲು ತಯಾರಿ ನಡೆಸುತ್ತಿದ್ದಾಗಲೇ ಈ ದಾಳಿ ನಡೆಸಲಾಗಿದ್ದು, ನೂರಾರು ಮಂದಿ ಬಲಿಯಾಗಿರುವುದಾಗಿ ವರದಿಯಾಗಿದೆ. ಆದರೆ, ಇನ್ನೂ ನಿಖರವಾದ ಅಂಕಿ ಅಂಶ ತಿಳಿದು ಬಂದಿಲ್ಲ ಎಂದು ಅಲ್-ಜಝೀರಾ ವರದಿ ಮಾಡಿದೆ.

ಡ್ರೋನ್ ದಾಳಿಯಿಂದ ಅಪಾರ ಸಾವುನೋವುಗಳು ಸಂಭವಿಸಿದೆ ಎಂದು ಟೈಮ್ಸ್ ಆಫ್ ಗಾಝಾ ವಿಡಿಯೋವೊಂದನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಅಲ್-ಶಿಫಾ ಆಸ್ಪತ್ರೆಯ ಮುಂಭಾಗದಲ್ಲಿ ನೂರಾರು ಮಂದಿ ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಲ್-ಶಿಫಾ ಆಸ್ಪತ್ರೆಯು ಗಾಝಾ ಪಟ್ಟಿಯಲ್ಲಿರುವ ಅತಿದೊಡ್ಡ ಆಸ್ಪತ್ರೆಯಾಗಿದೆ. ಈಗಾಗಲೇ ಈ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿ ತುಳುಕುತ್ತಿದ್ದಾರೆ.

ಹಾಗಾಗಿ, ಹೆಚ್ಚಿನ ಚಿಕಿತ್ಸೆ ಬೇಕಾಗಿದ್ದವರನ್ನು ರಫಾ ಗಡಿಯ ಮೂಲಕ ಈಜಿಪ್ಟ್‌ಗೆ ಆಂಬುಲೆನ್ಸ್‌ಗಳ ಮೂಲಕ ಕಳುಹಿಸಲು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯವು ವ್ಯವಸ್ಥೆ ಮಾಡುತ್ತಿತ್ತು. ಇದೇ ವೇಳೆ ಇಸ್ರೇಲ್ ಡ್ರೋನ್ ದಾಳಿ ನಡೆಸುವ ಮೂಲಕ, ಅಮಾನವೀಯ ಕೃತ್ಯ ಎಸಗಿದೆ.

ಈ ಹಿಂದೆ ಇಸ್ರೇಲ್ ಅಲ್ ಅಹ್ಲಿ ಆಸ್ಪತ್ರೆಯ ಮೇಲೂ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ, 500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...

ಮೋದಿ ಹೇಳಿಕೆ ಟೀಕಿಸಿದ ಬಿಜೆಪಿಯ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರ ಬಂಧನ!

ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ...

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು...

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....