ಕೇರಳದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ಭಾರತ ಹೇಳಿದ್ದೇನು?

Date:

Advertisements

ಕೊಲೆ ಪ್ರಕರಣದಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ ನ್ಯಾಯಾಲಯವು ಮರಣದಂಡಣೆ ಶಿಕ್ಷೆ ವಿಧಿಸಿದೆ. ಮರಣದಂಡನೆ ಶಿಕ್ಷೆಯನ್ನು ಅಲ್ಲಿನ ಅಧ್ಯಕ್ಷ ಶಾದ್ ಅಲ್-ಅಲಿಮಿ ಅನುಮೋದಿಸಿದ್ದಾರೆ. ಆ ಶಿಕ್ಷೆಯಿಂದ ಪ್ರಿಯಾ ಅವರನ್ನು ಪಾರು ಮಾಡಲು ಅವರ ಕುಟುಂಬಕ್ಕೆ ಬೇಕಾದ ಎಲ್ಲ ರೀತಿಯ ಸಹಾಯ ಒದಗಿಸುವುದಾಗಿ ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

ಯೆಮನ್‌ ಪ್ರಜೆ ತಲಾಲ್ ಅಬ್ದೋ ಮೆಹದಿ ಅವರನ್ನು ಕೊಲೆ ಮಾಡಿದ ಅಪರಾಧದಲ್ಲಿ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಹತ್ಯೆಗೀಡಾದ ವ್ಯಕ್ತಿಯ ಕುಟುಂಬದಿಂದ ಪ್ರಿಯಾ ಅವರು ಕ್ಷಮೆ ಪಡೆಯಲು ಒಂದು ತಿಂಗಳ ಕಾಲಾವಕಾಶವಿದೆ. ಈ ಅವಧಿಯೊಳಗೆ ಅವರು ಕ್ಷಮೆ ಪಡೆಯಲು ಸಾಧ್ಯವಾಗದಿದ್ದರೆ, ಅವರನ್ನು ಮರಣದಂಡನೆಗೆ ಗುರಿಪಡಿಸಲಾಗುತ್ತದೆ ಎಂದು ಯೆಮನ್ ಹೇಳಿದೆ.

ಮೃತ ತಲಾಲ್ ಅಬ್ದೋ ಅವರ ಕುಟುಂಬವು ಕ್ಷಮೆ ನೀಡುವುದರ ಮೇಲೆ ಪ್ರಿಯಾ ಅವರ ಬಿಡುಗಡೆ ಅಥವಾ ಶಿಕ್ಷೆಯ ಪ್ರಮಾಣ ಕಡಿಮೆಯಾಗುವುದು ಅವಲಂಬಿತವಾಗಿದೆ. ಮೃತ ವ್ಯಕ್ತಿಯ ಕುಟುಂಬವು ಪ್ರಿಯಾ ಅವರನ್ನು ಕ್ಷಮಿಸಿ, ಪರಿಹಾರ ಹಣವನ್ನು ಸ್ವೀಕರಿಸಿದರೆ ಆಕೆಯ ಮರಣದಂಡನೆಯನ್ನು ಮನ್ನಾ ಮಾಡಲು ಅವಕಾಶವಿದೆ.

Advertisements

ಈ ಕುರಿತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಹೇಳಿಕೆ ಬಿಡುಗಡೆ ಮಾಡಿದ್ದು, “ಪ್ರಿಯಾ ಅವರ ಕುಟುಂಬವು ಪರ್ಯಾಯ ಆಯ್ಕೆಗಳನ್ನು ಹುಡುಕುತ್ತಿದೆ ಎಂಬುದು ನಮಗೆ ಅರಿವಾಗಿದೆ. ಆ ಕುಟುಂಬಕ್ಕೆ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯಹಸ್ತವನ್ನು ಚಾಚಲಿದೆ” ಎಂದು ಹೇಳಿದ್ದಾರೆ.

ಮೃತ ವ್ಯಕ್ತಿಯ ಕುಟುಂಬದಿಂದ ಕ್ಷಮಾಪಣೆ ಪಡೆಯುವ ಕುರಿತು ಚರ್ಚೆಗಳು ನಡೆಯುತ್ತಿವೆ. ಪ್ರಿಯಾ ಅವರ ಪರವಾಗಿ ನೇಮಕವಾಗಿದ್ದ ವಕೀಲರಿಗೆ ಪಾವತಿ ವಿಳಂಬವಾಗಿದ್ದು, ಮಾತುಕತೆ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ತಮಗೆ ನೀಡಬೇಕಾದ ಶುಲ್ಕವನ್ನು ಪೂರ್ಣವಾಗಿ ನೀಡದ ಹೊರತು ಮಾತುಕತೆಯನ್ನು ಮುಂದುವರೆಸುವುದಿಲ್ಲ ಎಂದು ವಕೀಲರು ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X