ಕುವೈತ್ ಅಗ್ನಿ ದುರಂತ| ಮೂವರು ಭಾರತೀಯರು, ನಾಲ್ವರು ಈಜಿಪ್ಟ್ ಪ್ರಜೆಗಳ ಬಂಧನ

Date:

Advertisements

ಸುಮಾರು 46 ಭಾರತೀಯರು ಸೇರಿದಂತೆ 50 ಜನರ ಸಾವಿಗೆ ಕಾರಣವಾದ ಕುವೈತ್ ಅಗ್ನಿ ದುರಂತ ಪ್ರಕರಣದಲ್ಲಿ ಮೂವರು ಭಾರತೀಯರು, ನಾಲ್ವರು ಈಜಿಪ್ಟಿನವರು ಮತ್ತು ಕುವೈತ್ ಪ್ರಜೆಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಜೂನ್ 12ರಂದು ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡದ ಸಂಭವಿಸಿದ್ದು, ನೆಲ ಮಹಡಿಯಲ್ಲಿನ ಸಿಬ್ಬಂದಿ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಉಂಟಾಗಿದೆ. ಈ ಕಟ್ಟಡದಲ್ಲಿ 196 ವಲಸೆ ಕಾರ್ಮಿಕರು ವಾಸವಾಗಿದ್ದು, ಹೆಚ್ಚಿನವರು ಭಾರತೀಯರಾಗಿದ್ದರು.

ಇದನ್ನು ಓದಿದ್ದೀರಾ? ಕುವೈತ್‌ನಿಂದ 45 ಭಾರತೀಯರ ಮೃತದೇಹಗಳನ್ನು ಕೇರಳಕ್ಕೆ ಕರೆತಂದ ವಿಮಾನ

Advertisements

“ಅಲ್-ಮಂಗಾಫ್ ಕಟ್ಟಡ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಪ್ರಾಸಿಕ್ಯೂಷನ್ ಕುವೈತ್ ಪ್ರಜೆ, ಮೂವರು ಭಾರತೀಯ ಪ್ರಜೆಗಳು ಮತ್ತು ನಾಲ್ಕು ಈಜಿಪ್ಟ್ ಪ್ರಜೆಗಳನ್ನು ಎರಡು ವಾರಗಳ ಕಾಲ ಬಂಧನದಲ್ಲಿರಿಸಲು ಆದೇಶಿಸಿದೆ” ಎಂದು ಆಂಗ್ಲ ಭಾಷೆಯ ದೈನಿಕ ಅರಬ್ ಟೈಮ್ಸ್ ವರದಿಯಾಗಿದೆ.

ಆರೋಪಿಗಳ ಮೇಲೆ ನರಹತ್ಯೆ ಮತ್ತು ನಿರ್ಲಕ್ಷ್ಯದ ಆರೋಪ ಹೊರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಕುವೈತ್‌ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆದೇಶದ ಮೇರೆಗೆ ಸಂತ್ರಸ್ತರ ಕುಟುಂಬಗಳಿಗೆ ತಲಾ 15,000 ಯುಎಸ್ ಡಾಲರ್ (12.5 ಲಕ್ಷ ರೂ) ಪರಿಹಾರವನ್ನು ನೀಡಲಾಗುತ್ತದೆ. ಪರಿಹಾರ ಮೊತ್ತವನ್ನು ಸಂತ್ರಸ್ತರ ರಾಯಭಾರ ಕಚೇರಿಗಳಿಗೆ ತಲುಪಿಸಲಾಗುವುದು. ಎಂದು ಪತ್ರಿಕೆ ವರದಿ ಮಾಡಿದೆ.

ಇನ್ನು ಮೃತರಲ್ಲಿ ನಲವತ್ತಾರು ಮಂದಿ ಭಾರತೀಯರಾಗಿದ್ದರೆ, ಮೂವರು ಫಿಲಿಪಿನೋಸ್ ಆಗಿದ್ದಾರೆ. ಮೃತರಲ್ಲಿ ಒಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X