ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಇಟಲಿಯಲ್ಲಿ ಮಹಾತ್ಮ ಗಾಂಧಿ ವಿಗ್ರಹ ಧ್ವಂಸ

Date:

Advertisements

ಉದ್ಘಾಟನೆಗೊಂಡ ಕೆಲವೇ ಗಂಟೆಗಳಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳು ಮಹಾತ್ಮ ಗಾಂಧಿ ಅವರ ವಿಗ್ರಹವನ್ನು ಧ್ವಂಸಗೊಳಿಸಿರುವ ಆಘಾತಕಾರಿ ಘಟನೆ ಇಟಲಿಯಲ್ಲಿ ನಡೆದಿದೆ. ವಿಗ್ರಹವಿದ್ದ ಸ್ಥಳದಲ್ಲಿ ಖಲಿಸ್ತಾನಿ ಉಗ್ರ ಹರ್‌ದೀಪ್‌ ಸಿಂಗ್ ನಿಜ್ಜರ್ ಬಗ್ಗೆ ವಿವಾದಾತ್ಮಕ ಬರಹಗಳನ್ನು ಆರೋಪಿಗಳು ಬರೆದಿದ್ದಾರೆ.

ಘಟನೆಯ ನಡೆದ ಕೆಲವೇ ಹೊತ್ತಿನಲ್ಲಿ ಸ್ಥಳವನ್ನು ಸ್ವಚ್ಛಗೊಳಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿ7 ಶೃಂಗಸಭೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಒಂದು ದಿನ ಬಾಕಿಯಿರುವಾಗ ಈ ಘಟನೆ ನಡೆದಿದೆ.

Advertisements

50ನೇ ಜಿ7 ಶೃಂಗಸಭೆ ಇಟಲಿಯ ಬೋರ್ಜೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ಜೂನ್‌ 13ರಿಂದ 15ರವರೆಗೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್‌ ಮೋಹನ್‌ ಕ್ವಾತ್ರಾ ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಅಪುಲಿಯಾಗೆ ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ನಾಳೆ ಆಗಮಿಸಲಿದ್ದಾರೆ.

ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಂಡ ಬಗ್ಗೆ ಭಾರತದ ಅಧಿಕಾರಿಗಳು ಇಟಲಿಯ ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕ್ವಾತ್ರಾ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಇದೇ ರೀತಿಯ ಘಟನೆ ಕೆನಡಾದಲ್ಲಿ ಸಂಭವಿಸಿತ್ತು. ಕೆನಡಾದ ಬ್ರಿಟಿಷ್‌ ಕೊಲಂಬಿಯಾ ಪ್ರಾಂತ್ಯದಲ್ಲಿನ ವಿವಿ ಕ್ಯಾಂಪಸ್‌ನಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳು ಮಹಾತ್ಮ ಗಾಂಧಿಯ ವಿಗ್ರಹವನ್ನು ಧ್ವಂಸಗೊಳಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X