ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

Date:

Advertisements

2024ನೇ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿಯು ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಅವರಿಗೆ ಸಂದಿದೆ. ‘ಐತಿಹಾಸಿಕ ಆಘಾತಗಳು ಮತ್ತು ಮಾನವ ಜೀವನದ ದುರ್ಬಲತೆಯನ್ನು ಬಹಿರಂಗಪಡಿಸುವ ಅವರ ಕಾವ್ಯಾತ್ಮಕ ಗದ್ಯಕ್ಕೆ’ ಈ ಪ್ರಶಸ್ತಿ ನೀಡಲಾಗಿದೆ ಎಂದು ವರದಿಯಾಗಿದೆ.

ಹಾನ್ ಕಾಂಗ್ ತನ್ನ ವೃತ್ತಿಜೀವನವನ್ನು 1993ರಲ್ಲಿ ಪ್ರಾರಂಭಿಸಿದ್ದಾರೆ. ‘ಲಿಟರೇಚರ್ ಆಂಡ್ ಸೊಸೈಟಿ’ (Literature and Society) ಎಂಬ ನಿಯತಕಾಲಿಕದಲ್ಲಿ ಅವರ ಹಲವು ಕವಿತೆಗಳು ಮೊದಲ ಬಾರಿಗೆ ಪ್ರಕಟವಾಗಿದ್ದವು. ಅದಾದ ಬಳಿಕ ಅವರ ಮೊದಲ ಗದ್ಯ ‘ಲವ್ ಆಫ್ ಯೆಸು’ ಎಂಬ ಸಣ್ಣ ಕಥಾ ಸಂಗ್ರಹವು 1995ರಲ್ಲಿ ಬಿಡುಗಡೆಯಾಗಿದೆ.

ಅದಾದ ಬಳಿಕ ಅವರು ಹಲವು ಇತರ ಗದ್ಯ ಕೃತಿಗಳು, ಕಾದಂಬರಿಗಳು ಮತ್ತು ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕಾಂಗ್ ಅವರ ಪ್ರಮುಖ ಕಾದಂಬರಿಗಳಲ್ಲಿ ಒಂದು 2007ರಲ್ಲಿ, ದಿ ವೆಜಿಟೇರಿಯನ್ ಎಂಬ ಮತ್ತೊಂದು ಕಾದಂಬರಿ 2015ರಲ್ಲಿ ಬಿಡುಗಡೆಯಾಗಿದೆ.

Advertisements

ಇದನ್ನು ಓದಿದ್ದೀರಾ? ಮೂವರು ವಿಜ್ಞಾನಿಗಳಿಗೆ ರಾಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ ಪ್ರಕಟ

ದಕ್ಷಿಣ ಕೊರಿಯಾದ ನಗರವಾದ ಗ್ವಾಂಗ್ಜುದಲ್ಲಿ 1970ರಲ್ಲಿ ಜನಿಸಿದ ಕಾಂಗ್ ಸಾಹಿತ್ಯ ಹಿನ್ನೆಲೆಯುಳ್ಳ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಅವರ ತಂದೆ ಹೆಸರಾಂತ ಕಾದಂಬರಿಕಾರರಾಗಿದ್ದರು. ಬರವಣಿಗೆ ಜೊತೆಗೆ ಕಾಂಗ್ ಕಲೆ ಮತ್ತು ಸಂಗೀತದ ಮೇಲೂ ಆಸಕ್ತಿಯನ್ನು ಹೊಂದಿರುವವರು.

ವರದಿ ಪ್ರಕಾರ ಈ ಪ್ರಶಸ್ತಿಯನ್ನು ಗೆದ್ದ ಮೊದಲ ದಕ್ಷಿಣ ಕೊರಿಯಾದ ಬರಹಗಾರ್ತಿ ಹಾನ್ ಕಾಂಗ್‌ ಆಗಿದ್ದಾರೆ. ಕಳೆದ ವರ್ಷ, ಸಾಹಿತ್ಯ ನೊಬೆಲ್ ಪ್ರಶಸ್ತಿಯು ನಾರ್ವೇಜಿಯನ್ ಲೇಖಕ ಜಾನ್ ಒಲಾವ್ ಫೋಸ್ಸೆ ಅವರಿಗೆ ಲಭಿಸಿದೆ.

ಪ್ರಪಂಚದ ಅತ್ಯಂತ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಯು 10 ಮಿಲಿಯನ್ ಸ್ವೀಡಿಷ್ ಕ್ರೋನಾ ($915,000) ಬಹುಮಾನವನ್ನು ಒಳಗೊಂಡಿದೆ. 1901ರಿಂದ ಪ್ರತಿ ವರ್ಷ ವಿಜ್ಞಾನ, ಸಾಹಿತ್ಯ ಮೊದಲಾದ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಡೈನಮೈಟ್ ಅನ್ನು ಕಂಡುಹಿಡಿದ ಸ್ವೀಡಿಷ್ ರಸಾಯನಶಾಸ್ತ್ರಜ್ಞ ಆಲ್ಫ್ರೆಡ್ ನೊಬೆಲ್ ಅವರ ನೆನಪಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X