ವಲಸಿಗರ ವಿಷಯದಲ್ಲಿ ನಾವು ದುರ್ಬಲರಲ್ಲ: ಜೈಶಂಕರ್‌ಗೆ ಕೆನಡಾ ಸಚಿವ ತಿರುಗೇಟು

Date:

Advertisements

ಭಾರತ ಘೋಷಿತ ಭಯೋತ್ಪಾದಕ ಹರ್‌ದೀಪ್‌ ಸಿಂಗ್‌ ನಿಜ್ಜರ್ ಹತ್ಯೆಯ ಪ್ರಕರಣದಲ್ಲಿ ಇತ್ತೀಚಿಗೆ ಬಂಧಿಸಲಾಗಿರುವ ಮೂವರು ಭಾರತೀಯರ ವಿಷಯಕ್ಕೆ ಸಂಬಂಧಿಸಿದಂತೆ ಕೆನಡಾ ವಿರುದ್ಧ ಕಿಡಿಕಾರಿದ್ದ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಹೇಳಿಕೆಯನ್ನು ಕೆನಡಾ ಸಚಿವರು ಖಂಡಿಸಿದ್ದಾರೆ.

“ವಲಸಿಗರ ವಿಷಯದಲ್ಲಿ ನಾವು ದುರ್ಬಲರಲ್ಲ. ಭಾರತದ ವಿದೇಶಾಂಗ ಸಚಿವರು ಅವರ ಹೇಳಿಕೆ ಮಂಡಿಸಲು ಅರ್ಹರು. ಅವರ ಮನಸ್ಸಿನಲ್ಲಿರುವುದನ್ನು ಹೇಳಲು ನಾನು ಬಿಡುತ್ತೇನೆ. ಆದರೆ ಇದು ಸತ್ಯದಿಂದ ಕೂಡಿಲ್ಲ” ಎಂದು ಕೆನಡಾದ ವಲಸಿಗ ಸಚಿವ ಮಾರ್ಕ್‌ ಮಿಲ್ಲರ್ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ವಲಸಿಗರಿಗೆ ಸಂಘಟನಾತ್ಮಕ ಅಪರಾಧ ಕೈಗೊಳ್ಳಲು ಕೆನಡಾ ಅನುಮತಿಸುತ್ತದೆ ಎಂಬ ಜೈಶಂಕರ್‌ ಆರೋಪವನ್ನು ತಳ್ಳಿಹಾಕಿದ ಮಿಲ್ಲರ್, ಬಂಧಿತ ಮೂವರು ಆರೋಪಿಗಳ ಬಗ್ಗೆ ಕೆನಡಾ ಪೊಲೀಸರ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಬಂಧಿತ ಮೂವರು ಭಾರತೀಯರು ಕೆನಡಾದಲ್ಲಿ ವಿದ್ಯಾರ್ಥಿ ವಿಸಾದಲ್ಲಿ ಆಗಮಿಸಿದ್ದರು ಎಂಬ ವರದಿಗಳ ಬಗ್ಗೆ ಮಿಲ್ಲರ್ ದೃಢಪಡಿಸಲಿಲ್ಲ.

ಇತ್ತೀಚಿಗಷ್ಟೆ ಕೆನಡಾ ವಿರುದ್ಧ ಮಾತನಾಡಿದ್ದ ಜೈಶಂಕರ್, ನವದೆಹಲಿಯ ಎಚ್ಚರಿಕೆಯ ನಡುವೆಯೂ ಭಾರತದಿಂದ ಆಗಮಿಸಿದ ಕೆಲವರಿಗೆ ಕೆನಡಾ ಸಂಘಟನಾತ್ಮಕ ಅಪರಾಧ ಕೈಗೊಳ್ಳಲು ಅನುಮತಿಸುತ್ತದೆ. ಪಾಕಿಸ್ತಾನ ಪರ ಒಲವಿರುವ ರಾಜಕೀಯ ಪ್ರಭಾವ ಹೊಂದಿರುವ ಕೆಲವರನ್ನು ಕೆನಡಾ ಸ್ವಾಗತಿಸುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಕೆನಡಾ ವಿರುದ್ಧ ಆರೋಪಿಸಿದ್ದರು.

ಖಲಿಸ್ತಾನಿ ಭಯೋತ್ಪಾದಕ ಹರ್‌ದೀಪ್‌ ಸಿಂಗ್ ನಿಜ್ಜರ್‌ನನ್ನು 2023ರ ಜೂನ್‌ನಲ್ಲಿ ಕೆನಡಾದ ಸರ್ರೆಯ ಗುರುದ್ವಾರದ ಹೊರಭಾಗದಲ್ಲಿ ಗುಂಡಿಟ್ಟು ಕೊಲ್ಲಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯರನ್ನು ಕೆನಡಾ ಸರ್ಕಾರ ಬಂಧಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X