ಪಹಲ್ಗಾಮ್ ದಾಳಿ | ಪಾಕಿಸ್ತಾನವನ್ನು ಟೀಕಿಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ

Date:

Advertisements

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಗೌಪ್ಯ ಸಭೆಯಲ್ಲಿ ಪಾಕಿಸ್ತಾನವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ತೀವ್ರವಾಗಿ ಟೀಕಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸದಸ್ಯರು ಪಾಕಿಸ್ತಾನದ ರಾಜತಾಂತ್ರಿಕರೊಂದಿಗೆ ಇಸ್ಲಾಮಾಬಾದ್‌ನಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ, ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ ಭಾಗಿಯಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇತ್ತೀಚೆಗೆ ಪಾಕ್ ನಡೆಸಿರುವ ಕ್ಷಿಪಣಿ ಪರೀಕ್ಷೆಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಮಾತುಕತೆಯಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯರು ಪಹಲ್ಗಾಮ್ ದಾಳಿ ಕುರಿತು ಪಾಕಿಸ್ತಾನದ ಸುಳ್ಳು ನಿರೂಪಣೆಯನ್ನು ಪರಿಗಣಿಸಲು ನಿರಾಕರಿಸಿದರು. ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಸೂಚಿಸಿದರು ಎಂದು ವರದಿಯಾಗಿದೆ.

Advertisements

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಕಿಸ್ತಾನದ ರಾಯಭಾರಿ ಅಸಿಮ್ ಇಫ್ತಿಕರ್, “ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತಮ್ಮ (ಪಾಕ್) ಪಾತ್ರವಿದೆ ಎಂಬ ಎಲ್ಲ ಆರೋಪಗಳನ್ನು ತಮ್ಮ ದೇಶ ತಿರಸ್ಕರಿಸಿದೆ. ಸಿಂಧೂ ಜಲ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿರುವುದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಸಭೆಯ ನಂತರ, ಟುನೀಷಿಯಾದ ರಾಜತಾಂತ್ರಿಕ ಖಲೀದ್ ಮೊಹಮ್ಮದ್ ಖಿಯಾರಿ, “ಪರಿಸ್ಥಿತಿ ಅಸ್ಥಿರವಾಗಿದೆ. ಸಭೆ, ಮಾತುಕತೆ ಹಾಗೂ ಶಾಂತಿಯುತವಾಗಿ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಸಭೆಗೂ ಮುನ್ನ, ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್, “ಮಿಲಿಟರಿ ಕಾರ್ಯಾಚರಣೆ ಅಥವಾ ಕ್ರಮಗಳು ಸಮಸ್ಯೆಗೆ ಪರಿಹಾರವಲ್ಲ. ಎರಡೂ ದೇಶಗಳು ಗರಿಷ್ಠ ಸಂಯಮದಿಂದ ನಡೆದುಕೊಳ್ಳಬೇಕು. ಗಡಿಯಿಂದ ಹಿಂದೆ ಸರಿಯಬೇಕು. ಸಂಬಂಧಗಳು ಉದ್ವಗ್ನಗೊಳ್ಳುವುದನ್ನು ನೋಡಲು ನನಗೆ ನೋವಾಗುತ್ತದೆ” ಎಂದು ಹೇಳಿದ್ದರು.

ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಗುಟೆರೆಸ್, “ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಸ್ವೀಕಾರಾರ್ಹವಲ್ಲ. ಜವಾಬ್ದಾರಿಯುತ ನಾಯಕರು ವಿಶ್ವಾಸಾರ್ಹ ಮತ್ತು ಕಾನೂನುಬದ್ಧ ವಿಧಾನಗಳ ಮೂಲಕ ನ್ಯಾಯ ಮತ್ತು ಪರಿಹಾರ ಕಂಡುಕೊಳ್ಳಬೇಕು” ಎಂದಿದ್ದರು.

ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಯು ಇತ್ತೀಚಿನ ವರ್ಷಗಳ ಅತ್ಯಂತ ಭೀಕರ ಮತ್ತು ಆಘಾತಕಾರಿ ದಾಳಿಯಾಗಿದೆ. ದಾಳಿಯಲ್ಲಿ ವಿದೇಶಿಗರು, ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ 28 ಮಂದಿ ಸಾವನ್ನಪ್ಪಿದ್ದಾರೆ. ಈ ಹತ್ಯಾಕಾಂಡದ ಹಿಂದೆ ಪಾಕಿಸ್ತಾನದ ಕುಮ್ಮಕ್ಕು ಇದೆ ಎಂದು ಭಾರತ ಅರೋಪಿಸಿದೆ. ಪಾಕ್‌ ಜೊತೆಗಿನ ಸಿಂಧು ನದಿ ನೀರು ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿದೆ. ಭಾರತದಲ್ಲಿ ವಾಸಿಸುವ ಪಾಕಿಸ್ತಾನಿಗಳ ವೀಸಾಗಳನ್ನು ರದ್ದುಗೊಳಿಸಿದ್ದು, ಪಾಕಿಸ್ತಾನ್ ಪ್ರಜೆಗಳನ್ನು ವಾಪಸ್‌ ಕಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X