ಕೆನಡಾದಲ್ಲಿ ಜಿ 7 ಶೃಂಗಸಭೆ: ಪ್ರಧಾನಿ ನರೇಂದ್ರ ಮೋದಿಗಿಲ್ಲ ಆಹ್ವಾನ

Date:

ಮುಂದಿನ ಜಿ 7 ಶೃಂಗಸಭೆಯು ಜೂನ್ 15ರಿಂದ 17ರವರೆಗೆ ಕೆನಡಾದಲ್ಲಿ ನಡೆಯಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾವುದೇ ಆಹ್ವಾನ ನೀಡಲಾಗಿಲ್ಲ. ಆಹ್ವಾನ ಬಂದಿದ್ದರೂ ಉಭಯ ದೇಶಗಳ ನಡುವೆ ಉದ್ವಿಗ್ನತೆ ಇರುವ ಕಾರಣ ಭಾರತ ಭಾಗಿಯಾಗುತ್ತಿರಲಿಲ್ಲ ಎಂದು ಹೇಳಲಾಗಿದೆ.

ಜಿ 7 ಫ್ರಾನ್ಸ್, ಜರ್ಮನಿ, ಇಟಲಿ, ಯುನೈಟೆಡ್ ಕಿಂಗ್‌ಡಮ್, ಜಪಾನ್, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದ ಅನೌಪಚಾರಿಕ ಗುಂಪಾಗಿದೆ. ಇದರಲ್ಲಿ ಯುರೋಪಿಯನ್ ಒಕ್ಕೂಟ (ಇಯು), ಐಎಂಎಫ್, ವಿಶ್ವಬ್ಯಾಂಕ್ ಮತ್ತು ವಿಶ್ವಸಂಸ್ಥೆಗಳು ಸಹ ಭಾಗವಹಿಸುತ್ತವೆ.

ಇದನ್ನು ಓದಿದ್ದೀರಾ? ನಿಜ್ಜಾರ್ ಸಾವಿಗೆ ಕೆನಡಾ ಸಂಸತ್‌ನಲ್ಲಿ ಮೌನಾಚರಣೆ: ಭಾರತ ಆಕ್ರೋಶ

ಈ ಶೃಂಗಸಭೆಗೆ ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ಆಸ್ಟ್ರೇಲಿಯಾ ಕೆನಡಾಗೆ ಆಹ್ವಾನ ಸಿಕ್ಕಿದೆ. ಆದರೆ ಪ್ರಧಾನಿ ಮೋದಿಗೆ ಮಾತ್ರ ಆಹ್ವಾನ ಸಿಕ್ಕಿಲ್ಲ. ಪ್ರಧಾನಿ ಮೋದಿ ಜಿ 7 ಶೃಂಗಸಭೆಗಾಗಿ ಕೆನಡಾಕ್ಕೆ ಭೇಟಿ ನೀಡುವ ಬಗ್ಗೆ ಈ ಹಿಂದೆ ಮಾಧ್ಯಮಗಳು ಪ್ರಶ್ನಿಸಿದಾಗ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಎರಡು ಬಾರಿ “ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದೆ.

ಈ ನಡುವೆ ಕೆನಡಾದ ವಿದೇಶಾಂಗ ಸಚಿವೆ ಅಂಕಿತಾ ಆನಂದ್, ಹೊಸದಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಸರ್ಕಾರವು ಭಾರತದೊಂದಿಗೆ ಸಂಬಂಧ ಸುಧಾರಿಸಲು ಆಸಕ್ತಿ ಹೊಂದಿದೆ ಎಂದು ಕೆನಡಾದ ಪತ್ರಿಕೆ ದಿ ಗ್ಲೋಬ್ ಅಂಡ್ ಮೇಲ್‌ಗೆ ತಿಳಿಸಿದ್ದರು. ಆದರೆ ಕೆನಡಾದ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯು ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಹದಗೆಡಿಸಿದೆ ಎಂಬುದನ್ನೂ ಒಪ್ಪಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ನಿಜ್ಜಾರ್ ಹತ್ಯೆ | ಅಮಿತ್ ಶಾ ವಿರುದ್ಧದ ಕೆನಡಾ ಆರೋಪ ಕಳವಳಕಾರಿ : ಅಮೆರಿಕ

ಆಗಿನ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ಘಟನೆಯಲ್ಲಿ ನರೇಂದ್ರ ಮೋದಿ ಸರ್ಕಾರ ಭಾಗಿಯಾಗಿದೆ, ಗೃಹ ಸಚಿವ ಅಮಿತ್ ಶಾ ಇದ್ದಾರೆ ಎಂದು ಆರೋಪಿಸಿದ್ದಾರೆ. ಟ್ರುಡೊ ಆರೋಪವನ್ನು ಭಾರತ ನಿರಾಕರಿಸಿದೆ. ಈ ಆರೋಪ ‘ಆಧಾರರಹಿತ’ ಎಂದು ಹೇಳಿದೆ. ಅದರಲ್ಲೂ ನಿಜ್ಜಾರ್ ಸಾವಿಗೆ ಕೆನಡಾ ಸಂಸತ್‌ನಲ್ಲಿ ಮೌನಾಚರಣೆ ಮಾಡಿರುವುದ ಉಭಯ ದೇಶಗಳ ಸಂಬಂಧವನ್ನು ಇನ್ನಷ್ಟೂ ಹದಗೆಡಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

[Float-Menu id="1"]

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1ಲಕ್ಷ ರೂ. ಹೂಡಿಕೆಯಿಂದ 17 ಲಕ್ಷ ರೂ. ಲಾಭ ಪಡೆದ ಹೂಡಿಕೆದಾರರು; ಯಾವುದು ಆ ಕಂಪನಿ?

ಸರಿಯಾದ ಹಣಕಾಸು ಜ್ಞಾನ ಮತ್ತು ನಿರಂತರ ಅನ್ವೇಷಣೆಯೊಂದಿದ್ದರೆ ಅತ್ಯಲ್ಪ ಹೂಡಿಕೆಯಿಂದಲೂ ಲಕ್ಷಾಂತರ...

ಲಡಾಖ್‌ನಲ್ಲಿ ಹೊಸ ನೀತಿಗಳ ಜಾರಿ; ಕೇಂದ್ರ ಸರ್ಕಾರ ಇಟ್ಟ ಮಹತ್ವದ ಹೆಜ್ಜೆಗಳೇನು?

ಇಡಬ್ಲ್ಯುಎಸ್ 10% ಮೀಸಲಾತಿಯನ್ನು ಹೊರತುಪಡಿಸಿ, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ...

ಭಾರತ-ಪಾಕ್‌ ಸಂಘರ್ಷ: ‘ಅಮೆರಿಕ ಕರೆಗೆ ಶರಣಾದ ಮೋದಿ’

ಪಹಲ್ಗಾಮ್ ದಾಳಿಯ ಬಳಿಕ ಉದ್ಭವಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ...

ನ್ಯಾಯಾಧೀಶರು ಚುನಾವಣೆಯಲ್ಲಿ ಸ್ಪರ್ಧಿಸುವುದು ನ್ಯಾಯಾಂಗದ ಮೇಲೆ ಅನುಮಾನ ಮೂಡಿಸುತ್ತದೆ: ಸಿಜೆಐ

ಪ್ರತಿಯೊಂದು ವ್ಯವಸ್ಥೆಯು ಎಷ್ಟೇ ಬಲಿಷ್ಠವಾಗಿದ್ದರೂ, ವೃತ್ತಿಪರ ದುಷ್ಕೃತ್ಯದಿಂದ ಸಮಸ್ಯೆಗಳಿಗೆ ಗುರಿಯಾಗುತ್ತದೆ. ದುಃಖಕರವೆಂದರೆ,...

Download Eedina App Android / iOS

X